ಮೈಸೂರು: ಹಿಮಾಚಲ ಪ್ರದೇಶದಲ್ಲಿರುವ ಧರ್ಮಶಾಲಾದಲ್ಲಿ ಟಿಬೇಟ್ ನ ಧರ್ಮಗುರು ದಲೈ ಲಾಮಾ ಅವರನ್ನು ಮೈಸೂರು ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಜಿ.ಹೇಮಂತ್ ಕುಮಾರ್ ಗುರುವಾರ ಭೇಟಿಯಾಗಿ ಮಾತುಕತೆ ನಡೆಸಿದರು.
ಇದೇ ವೇಳೆ ಮಾತನಾಡಿದ ದಲೈ ಲಾಮಾ ಅವರು, ಮೈಸೂರು ವಿವಿಯಲ್ಲಿ ಬುದ್ಧಿಸಂಗೆ ಸಂಬಂಧಪಟ್ಟಂತೆ ಕೋರ್ಸ್ ಗಳು ಶುರುವಾಗಿರುವುದು ಸಂತೋಷದ ವಿಷಯ. ಇದೇ ರೀತಿ ಹಲವು ವಿವಿಗಳಲ್ಲಿ ಬುದ್ಧ ತತ್ವ ಸಾರುವ ಕೋರ್ಸ್ ಗಳು ಆರಂಭವಾಗಬೇಕು. ಜಗತ್ತು ಶಾಂತಿಯಿಂದ ಇರಲು ಬುದ್ಧನ ತತ್ವ ಎಲ್ಲೆಡೆ ಹರಡಬೇಕು ಎಂದರು. ಬುದ್ಧಿಸಂ ಒಂದು ಪಾರಂಪರಿಕ ಚಿಂತನೆ. ಅದಕ್ಕೆ ಆಧುನಿಕ ವಿಷಯಗಳು ಸೇರ್ಪಡೆಯಾದರೆ ಉತ್ತಮ ಶಿಕ್ಷಣವನ್ನು ಮಕ್ಕಳಿಗೆ ನೀಡಿದಂತಾಗುತ್ತದೆ. ಜನರಿಗೂ ಇದು ಇಷ್ಟವಾಗುತ್ತದೆ. ಪಾಶ್ಚಿಮಾತ್ಯ ದೇಶಗಳೂ ಕೂಡ ನಮ್ಮ ಸಂಸ್ಕೃತಿಯನ್ನು ಅನುಸರಿಸುತ್ತಿವೆ. ನಾವೆಲ್ಲರೂ ಸಹೋದರತ್ವದ ಭಾವನೆಯಿಂದ ಇರಬೇಕು ಎಂದು ಕಿವಿಮಾತು ಹೇಳಿದರು.
ಮಂಡ್ಯ : ಜಿಲ್ಲೆಯ ಯುವ ಜನತೆಗೆ ನಗರದ ಚಿತ್ರಣವನ್ನು ಪ್ರದರ್ಶಿಸುವ ನಿಟ್ಟಿನಲ್ಲಿ ಹೆಲಿಕಾಪ್ಟರ್ ಜಾಯ್ ರೈಡ್ಅನ್ನು ಆಯೋಜಿಸಲಗಿದ್ದು, ಮೂರು ದಿನಗಳ…
ಬೆಂಗಳೂರು : ರಾಕಿಂಗ್ ಸ್ಟಾರ್ ಯಶ್ ಅಭಿನಯದ ಟಾಕ್ಸಿಕ್ ಚಿತ್ರದ ಟೀಸರ್ ಇಂದು(ಫೆ.20) ಬಿಡುಗಡೆಯಾಗಿದೆ. 2 ನಿಮಿಷಗಳ ಈ ಟೀಸರ್…
ಮಕ್ಕಳನ್ನು ಒಂದನೇ ತರಗತಿಗೆ ಪ್ರಸಕ್ತ ಸಾಲಿಗೆ ದಾಖಲಿಸುವ ವಯೋಮಿತಿಯನ್ನು ಆರು ವರ್ಷಗಳಿಗೆ ನಿಗದಿಗೊಳಿಸಿ ಶಾಲಾ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ.…
ಮೈಸೂರಿನಲ್ಲಿ ಸಮಾಜಘಾತುಕ ಶಕ್ತಿಗಳ ದುಷ್ಕೃತ್ಯ ಮತ್ತು ಡ್ರಗ್ಸ್ ಜಾಲ ಪ್ರಕರಣಗಳ ಪತ್ತೆಗೆ ಡ್ರೋನ್ ಕಾರ್ಯಾಚರಣೆ ನಡೆಸಲು ಮೈಸೂರು ನಗರ ಪೊಲೀಸರು…
ಗುಣಮಟ್ಟದ ಕನ್ನಡ ಮತ್ತು ಪ್ರಾದೇಶಿಕ ಭಾಷಾ ಚಿತ್ರಗಳಿಗೆ ಸರ್ಕಾರ ನೀಡುತ್ತಿರುವ ಸಹಾಯಧನವನ್ನು ೨೦೨೬ನೇ ಸಾಲಿನಿಂದ ರದ್ದುಪಡಿಸಲು ಸರ್ಕಾರ ನಿರ್ಧರಿಸಿದೆ ಎನ್ನುವುದು…
ಎಸ್.ಎ. ಹುಸೇನ್ ಶೀಘ್ರದಲ್ಲೇ ಹೊಸ ಪೈಪ್ಲೈನ್ ಮೂಲಕ ನೀರು ಸರಬರಾಜು ೪೭.೪೧ ಕೋಟಿ ರೂ. ವೆಚ್ಚದ ೨ ಹಂತಗಳ ಕಾಮಗಾರಿ…