ಮೈಸೂರು: ಪ್ರಖರ ವಾಗ್ಮಿ, ಪ್ರಗತಿಪರ ಚಿಂತಕ ಹಾಗೂ ಮೈಸೂರು ವಿವಿ ನಿವೃತ್ತ ಪ್ರಾಧ್ಯಾಪಕ ಪ್ರೊ.ಬಿ.ಪಿ ಮಹೇಶ್ ಚಂದ್ರಗುರು(68) ತಮ್ಮ ನಿವಾಸದಲ್ಲಿ ನಿಧನರಾಗಿದ್ದಾರೆ.
ಹಲವು ದಿನಗಳಿಂದ ಅನಾರೋಗ್ಯಿಂದ ಬಳಲುತ್ತಿದ್ದ ಪ್ರೊ.ಮಹೇಶ್ ಚಂದ್ರಗುರು ಅವರು ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಗ್ಯಾಂಗ್ರೀನ್ ಕಾರಣದಿಂದ ಕಾಲುನೋವಿನ ಸಮಸ್ಯೆ ಎದುರಿಸುತ್ತಿದ್ದ ಅವರು ಇಂದು(ಆ.17) ಸಂಜೆ 7:30 ರ ಸುಮಾರಿಗೆ ಹೃದಯಘಾತದಿಂದ ಸಾವನ್ನಪ್ಪಿದ್ದಾರೆ.
ಹೈದರಬಾದ್ನಲ್ಲಿ ಸಾರ್ವಜನಿಕ ಸಂಪರ್ಕಧಿಕಾರಿಯಾಗಿ ತಮ್ಮ ವೃತ್ತಿ ಜೀವನ ಪ್ರಾರಂಭಿಸಿದ ಪ್ರೊ.ಮಹೇಶ್ ಚಂದ್ರಗುರು ಬಳಿಕ ಮಂಗಳೂರು ವಿ.ವಿಯ ಪತ್ರಿಕೋದ್ಯಮ ಪ್ರಾಧ್ಯಾಪಕರಾದರು. ನಂತರ ಮೈಸೂರು ವಿವಿಗೆ ವರ್ಗಾವಣೆಗೊಂಡು ವಿವಿಯ ಪತ್ರಿಕೋದ್ಯಮ ವಿಭಾಗದಲ್ಲಿ ಹಲವಾರು ಕಾರ್ಯಗಳನ್ನು ಕೈಗೊಂಡರು. ಜತೆಗೆ ಯಾವಗಲೂ ವಿದ್ಯಾರ್ಥಿ ಸ್ನೇಹಿಯಾಗಿದ್ದ ಅವರು ವಿವಿಯಲ್ಲಿ ವಿದ್ಯಾರ್ಥಿ ಬಳಗವನ್ನೇ ಕಟ್ಟಿದ್ದರು. ಬಳಿಕ 2019ರಲ್ಲಿ ಸೇವೆಯಿಂದ ನಿವೃತ್ತರಾದರು.
ನಿವೃತ್ತಿ ಬಳಿಕ ಸಾಮಾಜಿಕ ಹೋರಾಟಗಳಲ್ಲಿ ಮುಂಚೂಣಿಯಲ್ಲಿದ್ದ ಮಹೇಶ್ ಚಂದ್ರ ಗುರು ತಮ್ಮ ಹೇಳಿಕೆಗಳ ಮೂಲಕ ಹಲವು ಬಾರಿ ವಿವಾದಕ್ಕೆ ಗುರಿಯಾಗಿದ್ದರು. ಜೊತೆಗೆ ಮೈಸೂರು ದಸರಾ ವೇಳೆ ಮಹಿಷಾ ದಸರಾ ಆಚರಣೆಗೊಳ್ಳಲು ಇವರ ಪಾತ್ರ ಪ್ರಮುಖವಾದದ್ದು.
ಹುಣಸೂರು: ಬೈಕ್ಗೆ ಕೆಎಸ್ಆರ್ಟಿಸಿ ಬಸ್ ಡಿಕ್ಕಿಯಾದ ಪರಿಣಾಮ ಮಹಿಳೆಯೊಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಹುಣಸೂರು ತಾಲ್ಲೂಕಿನ ಯಶೋಧರಪುರ ಗೇಟ್ ಬಳಿ…
ಮೈಸೂರು: ರಂಗವಲ್ಲಿ ಸಂಸ್ಥೆಯು ಕನ್ನಡ ಮತ್ತು ಸಂಸ್ಕೃತಿ ನಿರ್ದೇಶನಾಲಯ, ಬೆಂಗಳೂರು ಇವರ ಸಹಯೋಗದೊಂದಿಗೆ ದಿನಾಂಕ: 28.01.2026 ಮತ್ತು 29.01.2026ರ ಸಂಜೆ…
ಚಿಕ್ಕಬಳ್ಳಾಪುರ: ಶಿಡ್ಲಘಟ್ಟದ ಪೌರಾಯುಕ್ತೆ ಅಮೃತಾಗೌಡ ಅವರಿಗೆ ಜೀವ ಬೆದರಿಕೆ ಹಾಕಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಕಾಂಗ್ರೆಸ್ ಮುಖಂಡ ರಾಜೀವ್ ಗೌಡರನ್ನು…
ವಾಷಿಂಗ್ಟನ್: ಅಮೇರಿಕಾದಾದ್ಯಂತ ಬೀಸುತ್ತಿರುವ ಭೀಕರ ಹಿಮಬಿರುಗಾಳಿ ಜನಜೀವನವನ್ನು ಅಸ್ತವ್ಯಸ್ತಗೊಳಿಸಿದೆ. ಹಿಮಪಾತ ಹಾಗೂ ಮೈಕೊರೆಯುವ ಚಳಿಗೆ ಇದುವರೆಗೆ ಸುಮಾರು 25ಕ್ಕೂ ಹೆಚ್ಚು…
ಬೆಂಗಳೂರು: ನಟಿ ಕಾವ್ಯಾಗೌಡ ಹಾಗೂ ಆಕೆಯ ಪತಿ ಸೋಮಶೇಖರ್ ಮೇಲೆ ಪತಿ ಸಂಬಂಧಿಕರೇ ಹಲ್ಲೆ ನಡೆಸಿರುವ ಘಟನೆ ಬೆಂಗಳೂರಿನ ರಾಮಮೂರ್ತಿ…
ಬೆಂಗಳೂರು: ಅರಬ್ಬಿ ಸಮುದ್ರದ ಮೇಲೆ ತೇವಾಂಶ ಭರಿತ ಮೋಡಗಳು ಹಾದು ಹೋಗಿರುವ ಹಿನ್ನೆಲೆಯಲ್ಲಿ ರಾಜ್ಯದ ಹಲವೆಡೆ ಸೋಮವಾರ ಮಳೆಯಾಗಿದೆ. ರಾಜಧಾನಿ…