ಮೈಸೂರು

ಅಂಬೇಡ್ಕರ್‌ ದೃಷ್ಟಿಯ ಬೌದ್ಧ ಧಮ್ಮದ ಪ್ರಚಾರ ಅಗತ್ಯ: ಪ್ರೊ.ಸಿ ಗುರುಸಿದ್ದಯ್ಯ ಅಭಿಮತ

ಮೈಸೂರು: ಗೌತಮ ಬುದ್ಧನ ಪಂಚಶೀಲ ತತ್ತ್ವ ಹಾಗೂ ಅಂಬೇಡ್ಕರ್‌ ವಿಚಾರಧಾರೆ ತಳಹದಿ ಮೇಲೆ ಭಾರತದಲ್ಲಿ ಭೌದ್ಧ ಧರ್ಮದ ಪ್ರಚಾರ ಹೆಚ್ಚಾಗಬೇಕು ಎಂದು ಇತಿಹಾಸ ಅಧ್ಯಯನ ವಿಭಾಗದ ಪ್ರಾಧ್ಯಾಪಕ ಸಿ.ಗುರುಸಿದ್ಧಯ್ಯ ಹೇಳಿದರು.

ಮೈಸೂರು ವಿ.ವಿ ಮಾನಸಗಂಗೋತ್ರಿಯ ಬುದ್ಧ ಪ್ರತಿಮೆ ಬಳಿ ಬುದ್ಧ ಬಳಗ ಆಯೋಜಿಸಿದ್ದ ” ೬೮ನೇ ಧಮ್ಮ ಸ್ವೀಕಾರ ದಿನ” ಕಾರ್ಯಕ್ರಮದಲ್ಲಿ ಬುದ್ಧ ಪ್ರತಿಮೆಗೆ ಪುಷ್ಪಾರ್ಚನೆ ಮಾಡಿ ಅವರು ಮಾತನಾಡಿದರು.

ಭಾರತದಲ್ಲೇ ಜನ್ಮ ತಾಳಿದ ಬೌದ್ಧ ಧರ್ಮ ಶ್ರೀಲಂಕಾ, ಚೀನಾ,ಜಪಾನ್‌ ಸೇರಿದಂತೆ ದಕ್ಷಿಣ ಏಷ್ಯದ ಅನೇಕ ದೇಶಗಳಿಗೆ ವ್ಯಾಪಿಸಿದೆ. ಬೌದ್ಧ ಧರ್ಮದ ಆರಂಭದ ದಿನಗಳು ನೀರಿಕ್ಷೆಗಳನ್ನು ಹುಟ್ಟು ಹಾಕುವ ಜತೆಗೆ ಆಶಾಭಾವನೆ ಮೂಡಿಸಿತು. ನಂತರದ ದಿನಗಳಲ್ಲಿ ರಾಜಪ್ರಭುತ್ವದ ಆಶ್ರಯ ಸಿಗದ ಕಾರಣ ಧಮ್ಮ ವಿಸ್ತಾರಗೊಳ್ಳಲಿಲ್ಲ. 1956ರಲ್ಲಿ ಬಾಬಾ ಸಾಹೇಬ್‌ ಅಂಬೇಡ್ಕರ್‌ ಅವರು ನಾಗಪುರದಲ್ಲಿ 10ಲಕ್ಷ ಜನರೊಂದಿಗೆ ಬೌದ್ಧ ಧರ್ಮಕ್ಕೆ ಪರಿವರ್ತನೆಗೊಂಡ ಬಳಿಕ ಭಾರತದಲ್ಲಿ ಹೊಸ ಶಕೆ ಪ್ರಾರಂಭವಾಯಿತು ಎಂದು ತಿಳಿಸಿದರು.

ಬುದ್ಧನನ್ನು ಅವತಾರಗಳಿಂದ ಬಿಡಿಸಿಕೊಂಡು ಅಂಬೇಡ್ಕರ್ ಅವರ ಶ್ರೇಷ್ಠ ಮಾನವದೃಷ್ಟಿ ಹಾಗೂ ಜ್ಞಾನದಿಂದ ಅರ್ಥಮಾಡಿಕೊಳ್ಳಬೇಕು. ಧರ್ಮದ ಜೊತೆ ಮುಖ್ಯವಾಗಿ ದಲಿತ ಸಮುದಾಯದಲ್ಲಿರುವ ಬಡತನ, ಅನಕ್ಷರತೆಯನ್ನು ಹೋಗಲಾಡಿಸುವಂತ ಕೆಲಸವೂ ಆಗಬೇಕು ಎಂದರು.

ಬೌದ್ಧ ಧರ್ಮಗಳನ್ನು ಹೊರತು ಪಡಿಸಿ ಭಾರತದಲ್ಲಿರುವ ಎಲ್ಲಾ ಧರ್ಮಗಳಲ್ಲೂ ಪುರೋಹಿತ ಚಿಂತನೆಗಳಿದ್ದು, ಗುಲಾಮಗಿರಿಗೆ ತಳ್ಳುತ್ತಿವೆ‌ ಎಂದು ಅಂಬೇಡ್ಕರ್ ಹೇಳುತ್ತಾರೆ. ಬುದ್ಧನ ಧರ್ಮದಲ್ಲಿ ಇರುವಷ್ಟು ಸ್ವಾತಂತ್ರ್ಯ ಬೇರೆ ಧರ್ಮಗಳಲ್ಲಿ ಕಾಣವುದು ಕಷ್ಟ. ಹಾಗಾಗಿ ಅಂಬೇಡ್ಕರ್ ಅವರ ದಾರಿಯಲ್ಲಿ ಬುದ್ದನ ಜ್ಞಾನವನ್ನು ಮನೆಮನೆಗೆ ಪ್ರಚುರ ಪಡಿಸುವಲ್ಲಿ ಟೊಂಕಕಟ್ಟಿ ನಿಲ್ಲಬೇಕು ಎಂದು ನುಡಿದರು.

ಬುದ್ಧ ಬಳಗದ ಜಗದೀಶ್ ಮಹದೇವಯ್ಯ, ಸಂಶೋಧನಾ ವಿದ್ಯಾರ್ಥಿಗಳಾದ ಕೆ.ಆರ್.ರಂಗಸ್ವಾಮಿ, ಕಲ್ಲಹಳ್ಳಿ ಕುಮಾರ್, ಕುಶಾಲ್, ಮಲ್ಲೇಶ್.ಎಂ, ಗಣೇಶ್, ಲೋಕೇಶ್, ಸಿದ್ದಪ್ಪಾಜಿ, ಗೌತಮ್, ಪರಂ ಜ್ಯೋತಿ, ಪ್ರಜ್ವಲ್ ಇನ್ನಿತರರು ಹಾಜರಿದ್ದರು. ಕೆ.ಎಂ. ಶೇಷಣ್ಣಸ್ವಾಮಿ ಮತ್ತು ತಂಡದವರು ಬುದ್ಧ ಮತ್ತು ಭೀಮಗೀತೆ ಗಾಯನವನ್ನು ಹಾಡಿದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಬಿಡದಿ ಟೌನ್‌ಶಿಪ್‌ ಡಿಪಿಆರ್‌ಗೆ ಸಿದ್ಧತೆ : 26 ಕೋಟಿ ರೂ. ವೆಚ್ಚದ ಟೆಂಡರ್ ಕರೆಯಲು ತೀರ್ಮಾನ

ಬೆಂಗಳೂರು : ಬಿಡದಿ ಟೌನ್‌ಶಿಪ್ ಯೋಜನೆ ರಾಜಕೀಯ ವಲಯದಲ್ಲಿ ತೀವ್ರ ಚರ್ಚೆ, ರೈತರ ಪ್ರತಿಭಟನೆ ಹಾಗೂ ಆರೋಪ-ಪ್ರತ್ಯಾರೋಪಗಳ ನಡುವೆಯೂ ಗ್ರೇಟರ್…

6 hours ago

ದುಬಾರೆ ದುರಂತ ಬಳಿಕ ಎಚ್ಚೆತ್ತ ರಾಜ್ಯ ಸರ್ಕಾರ ; ಆನೆ ಶಿಬಿರಗಳಿಗೆ ಹೊಸ ನಿಯಮ

ಬೆಂಗಳೂರು : ರಾಜ್ಯದ ಆನೆ ಶಿಬಿರಗಳು, ಸೆರೆಯಲ್ಲಿರುವ ಆನೆಗಳ ಕೇಂದ್ರಗಳು ಹಾಗೂ ಸಾರ್ವಜನಿಕ ವೀಕ್ಷಣಾ ಕೇಂದ್ರಗಳಿಗೆ ಕರ್ನಾಟಕ ಅರಣ್ಯ ಇಲಾಖೆ…

7 hours ago

ಬಿಡದಿ ಟೌನ್‌ಶಿಪ್: ಪೋಸ್ಟರ್ ಸಮರ

ಬೆಂಗಳೂರು : ಬಿಡದಿ ಟೌನ್‌ಶಿಪ್ ವಿಚಾರದಲ್ಲಿ ಆಡಳಿತಾರೂಢ ಕಾಂಗ್ರೆಸ್ ಪ್ರತಿಪಕ್ಷಗಳಾದ ಬಿಜೆಪಿ ಮತ್ತು ಜಾ.ದಳ ನಡುವಿನ ವಾಕ್ ಸಮರ ತಾರಕಕ್ಕೇರಿದೆ.…

8 hours ago

UGC NET | ಪ್ರವೇಶ ಪತ್ರ ಬಿಡುಗಡೆ

ಹೊಸದಿಲ್ಲಿ : ರಾಷ್ಟ್ರೀಯ ಪರೀಕ್ಷಾ ಸಂಸ್ಥೆ ಯುಜಿಸಿ ನೆಟ್ ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳಿಗಾಗಿ ಪ್ರವೇಶ ಪತ್ರಗಳನ್ನು ಬುಧವಾರ ಅಧಿಕೃತವಾಗಿ ಬಿಡುಗಡೆ…

9 hours ago

ಧರ್ಮಸ್ಥಳ ಪ್ರಕರಣದಲ್ಲಿ ಪ್ರಕಾಶ್‌ ರಾಜ್‌ ಹೆಸರು: ನಟ ಏನಂದ್ರು ಗೊತ್ತಾ?

ಬೆಂಗಳೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಪ್ರಕರಣದಲ್ಲಿ ತಮ್ಮ ಹೆಸರನ್ನು ಕೆಲವರು ಅನಗತ್ಯವಾಗಿ ಉಲ್ಲೇಖಿಸುತ್ತಿದ್ದಾರೆ. ನಾನು ಯಾವುದೇ ರೀತಿಯ ತಪ್ಪು ಮಾಡಿಲ್ಲ.…

14 hours ago

ನೀಟ್‌ ವಿದ್ಯಾರ್ಥಿಗಳಿಗೆ ಪ್ರಯಾಣದಲ್ಲಿ 50% ರಿಯಾಯಿತಿ: ಯುಪಿ ಸಿಎಂ ಯೋಗಿ ಆದಿತ್ಯನಾಥ್‌ ಆದೇಶ

ಲಕ್ನೋ: ಜೂನ್.‌21ರಂದು ನಡೆಯಲಿರುವ ನೀಟ್-ಯುಜಿ ಮರುಪರೀಕ್ಷೆಗೆ ಹಾಜರಾಗುವ ಎಲ್ಲಾ ವಿದ್ಯಾರ್ಥಿಗಳ ಬಸ್‌ ಪ್ರಯಾಣದ ದರದಲ್ಲಿ ಶೇ.50ರಷ್ಟು ರಿಯಾಯಿತಿ ನೀಡುವುದಾಗಿ ಉತ್ತರ…

16 hours ago