ಮೈಸೂರು

ಮೈಸೂರು | ಆಸ್ತಿಗಾಗಿ ಸಂಬಂಧಿಕರಿಂದಲೇ ಮಾರಕಾಸ್ತ್ರ ಹಿಡಿದು ಗಲಾಟೆ: ವಿಡಿಯೋ ವೈರಲ್‌

ಎಚ್.ಡಿ.ಕೋಟೆ: ಆಸ್ತಿಗಾಗಿ ಸಂಬಂಧಿಕರಿಂದ ಗಲಾಟೆ ನಡೆದಿರುವ ಘಟನೆ ಮೈಸೂರು ಜಿಲ್ಲೆ ಎಚ್.ಡಿ.ಕೋಟೆ ತಾಲ್ಲೂಕಿನ ಕ್ಯಾತನಹಳ್ಳಿ ಗೇಟ್‌ನಲ್ಲಿ ನಡೆದಿದೆ.

ಯೋಗಮಣಿ ಎಂಬುವವರ ಮೇಲೆ ಸಂಬಂಧಿಕರೇ ಹಲ್ಲೆ ನಡೆಸಿರುವ ಆರೋಪ ಕೇಳಿಬಂದಿದ್ದು, ಗಲಾಟೆ ವಿಡಿಯೋ ಮೊಬೈಲ್‌ ಕ್ಯಾಮರಾದಲ್ಲಿ ಸೆರೆಯಾಗಿದೆ.

2.5 ಎಕರೆ ಜಮೀನು ಯೋಗಮಣಿ ಪತಿ ರಾಜೇಶ್ ಎಂಬುವವರಿಗೆ ಸೇರಿತ್ತು. ಆದರೆ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ರಾಜೇಶ್‌ ಕಳೆದ 11 ದಿನದ ಹಿಂದೆ ಮೃತಪಟ್ಟಿದ್ದರು.

ರಾಜೇಶ್‌ ಸಾವನ್ನಪ್ಪಿದ ಬೆನ್ನಲ್ಲೇ ಸಂಬಂಧಿಕರಾದ ಮಹದೇವಮ್ಮ, ಸೋಮ ಹಾಗೂ ಸೌಮ್ಯ ಎಂಬುವವರು ಆಸ್ತಿಗಾಗಿ ಗಲಾಟೆ ಮಾಡಿದ್ದಾರೆ. ರಾಜೇಶ್ ಅಜ್ಜಿ ನಿಂಗಮ್ಮ, ಯೋಗಮಣಿ, ಮಗ ಚಂದು ಹಾಗೂ ಮಗಳು ಕೋಮಲ ಎಂಬುವವರ ಮೇಲೆ ಮಾರಕಾಸ್ತ್ರಗಳನ್ನು ತಂದು ಹಲ್ಲೆ ಮಾಡಿರುವ ಆರೋಪ ಕೇಳಿಬಂದಿದೆ.

ಘಟನೆಯಲ್ಲಿ ಯೋಗಮಣಿ ಅವರ ಕೈ ಮುರಿದಿದ್ದು, ಮಗ ಚಂದುಗೆ ಸಣ್ಣ ಪುಟ್ಟ ಗಾಯಗಳಾಗಿದೆ. ಈ ಸಂಬಂಧ ಎಚ್.ಡಿ.ಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಆಂದೋಲನ ಡೆಸ್ಕ್

Recent Posts

ಉಪಚುನಾವಣೆಯಲ್ಲಿ ವಿಪಕ್ಷಗಳ ಷಡ್ಯಂತ್ರ ನಡೆಯಲಿಲ್ಲ, ನಾವೇ ಗೆದ್ದಿದ್ದೇವೆ: ಸಿಎಂ ಸಿದ್ದರಾಮಯ್ಯ

ಮೈಸೂರು: ಉಪಚುನಾವಣೆಯಲ್ಲಿ ವಿಪಕ್ಷಗಳ ಷಡ್ಯಂತ್ರ ಏನೂ ನಡೆಯಲಿಲ್ಲ. ನಾನೇ ಗೆಲುವು ಸಾಧಿಸಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ಸಂತಸ ವ್ಯಕ್ತಪಡಿಸಿದ್ದಾರೆ. ರಾಜ್ಯದ…

1 hour ago

ಖಾಲಿ ಕಾಂಪೌಂಡ್‌ಗಳ ಮುಂದೆ ನಿಂತು ಮೂತ್ರ ವಿಸರ್ಜನೆ ಮಾಡುವವರೇ ಎಚ್ಚರ ಎಚ್ಚರ.

ನಿಮ್ಮ ತಪ್ಪನ್ನು ನಿಮಗೇ ತೋರಿಸಲಿದೆ ಕನ್ನಡಿ! ಮೈಸೂರು: ಖಾಲಿ ಕಾಂಪೌಂಡ್ ಬಳಿ ಮೂತ್ರ ವಿಸರ್ಜನೆಯ ದುರ್ವಾಸನೆ ತಪ್ಪಿಸಲು ಮೈಸೂರು ಮಹಾನಗರ…

2 hours ago

ಜನಗಣತಿ ಮಾಡುವ ವೇಳೆಯೇ ಹೃದಯಾಘಾತ: ಶಿಕ್ಷಕ ಸಾವು

ಕೆ.ಆರ್.ನಗರ: ಜನಗಣತಿ ಮಾಡುವ ವೇಳೆ ಸರ್ಕಾರಿ ಶಾಲೆಯ ಶಿಕ್ಷಕ ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ಪಟ್ಟಣದ ಕುವೆಂಪು ಬಡಾವಣೆಯಲ್ಲಿ ನಡೆದಿದೆ. ಮೃತಪಟ್ಟ…

3 hours ago

ಓದುಗರ ಪತ್ರ: ಪಂಚ.. ತಂತ್ರ !

ಪಂಚ.. ತಂತ್ರ ! ಚುನಾವಣೆಯಲ್ಲಿ ಗೆದ್ದವರಿಗೆ ಸಿಎಂ ಚಿಂತೆ, ಸೋತವರಿಗೆ ಇವಿಎಂನದೇ ಚಿಂತೆ ! -ಮ.ಗು.ಬಸವಣ್ಣ, ಜೆಎಸ್‌ಎಸ್ ಬಡಾವಣೆ, ಮೈಸೂರು

4 hours ago

ಓದುಗರ ಪತ್ರ: ಮರದ ಕೊಂಬೆಯನ್ನು ತೆರವುಗೊಳಿಸಿ

ಮೈಸೂರಿನ ಕುವೆಂಪುನಗರದ ‘ಎಂ’ ಬ್ಲಾಕ್‌ನ ನೃಪತುಂಗ ರಸ್ತೆಯಲ್ಲಿರುವ ಗಣಪತಿ ದೇವಸ್ಥಾನದ ಪಕ್ಕದಲ್ಲಿ ಶ್ರೀ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮದಿಂದ ಹೊಸ…

4 hours ago

ಓದುಗರ ಪತ್ರ: ತಮಿಳುನಾಡಿನಲ್ಲಿ ವಿಜಯ್ ವಿಜಯ

ತಮಿಳುನಾಡು ಚುನಾವಣೆಯಲ್ಲಿ ವಿಜಯ್ ನೇತೃತ್ವದ ಟಿವಿಕೆ ಪಕ್ಷ ೨೩೪ ಕ್ಷೇತ್ರಗಳ ಪೈಕಿ ೧೦೮ ಸ್ಥಾನಗಳಲ್ಲಿ ಜಯಗಳಿಸುವ ಮೂಲಕ ಅತಿ ದೊಡ್ಡ…

4 hours ago