ಮೈಸೂರು

ಮೈಸೂರು | ಆಸ್ತಿಗಾಗಿ ಸಂಬಂಧಿಕರಿಂದಲೇ ಮಾರಕಾಸ್ತ್ರ ಹಿಡಿದು ಗಲಾಟೆ: ವಿಡಿಯೋ ವೈರಲ್‌

ಎಚ್.ಡಿ.ಕೋಟೆ: ಆಸ್ತಿಗಾಗಿ ಸಂಬಂಧಿಕರಿಂದ ಗಲಾಟೆ ನಡೆದಿರುವ ಘಟನೆ ಮೈಸೂರು ಜಿಲ್ಲೆ ಎಚ್.ಡಿ.ಕೋಟೆ ತಾಲ್ಲೂಕಿನ ಕ್ಯಾತನಹಳ್ಳಿ ಗೇಟ್‌ನಲ್ಲಿ ನಡೆದಿದೆ.

ಯೋಗಮಣಿ ಎಂಬುವವರ ಮೇಲೆ ಸಂಬಂಧಿಕರೇ ಹಲ್ಲೆ ನಡೆಸಿರುವ ಆರೋಪ ಕೇಳಿಬಂದಿದ್ದು, ಗಲಾಟೆ ವಿಡಿಯೋ ಮೊಬೈಲ್‌ ಕ್ಯಾಮರಾದಲ್ಲಿ ಸೆರೆಯಾಗಿದೆ.

2.5 ಎಕರೆ ಜಮೀನು ಯೋಗಮಣಿ ಪತಿ ರಾಜೇಶ್ ಎಂಬುವವರಿಗೆ ಸೇರಿತ್ತು. ಆದರೆ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ರಾಜೇಶ್‌ ಕಳೆದ 11 ದಿನದ ಹಿಂದೆ ಮೃತಪಟ್ಟಿದ್ದರು.

ರಾಜೇಶ್‌ ಸಾವನ್ನಪ್ಪಿದ ಬೆನ್ನಲ್ಲೇ ಸಂಬಂಧಿಕರಾದ ಮಹದೇವಮ್ಮ, ಸೋಮ ಹಾಗೂ ಸೌಮ್ಯ ಎಂಬುವವರು ಆಸ್ತಿಗಾಗಿ ಗಲಾಟೆ ಮಾಡಿದ್ದಾರೆ. ರಾಜೇಶ್ ಅಜ್ಜಿ ನಿಂಗಮ್ಮ, ಯೋಗಮಣಿ, ಮಗ ಚಂದು ಹಾಗೂ ಮಗಳು ಕೋಮಲ ಎಂಬುವವರ ಮೇಲೆ ಮಾರಕಾಸ್ತ್ರಗಳನ್ನು ತಂದು ಹಲ್ಲೆ ಮಾಡಿರುವ ಆರೋಪ ಕೇಳಿಬಂದಿದೆ.

ಘಟನೆಯಲ್ಲಿ ಯೋಗಮಣಿ ಅವರ ಕೈ ಮುರಿದಿದ್ದು, ಮಗ ಚಂದುಗೆ ಸಣ್ಣ ಪುಟ್ಟ ಗಾಯಗಳಾಗಿದೆ. ಈ ಸಂಬಂಧ ಎಚ್.ಡಿ.ಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ | ನೀರು ಬಿಟ್ಟು ರೈತರಿಗೆ ಅನುಕೂಲ ಕಲ್ಪಿಸಿ

ಮೈಸೂರು ಜಿಲ್ಲೆಯ ಹೆಗ್ಗಡದೇವನಕೋಟೆಯು ವನಸಿರಿ ನಾಡು ಎಂದೆ ಪ್ರಸಿದ್ಧಿ ಪಡೆದಿದೆ ಹಾಗೆ ಜಲಾಶಯಗಳ ಬೀಡು ಎಂದು ಹೆಸರು ಪಡೆದುಕೊಂಡಿದೆ. ಈಗ…

7 hours ago

ಓದುಗರ ಪತ್ರ | ಈ ವಿಶಾಲ ಪಾರ್ಕ್‌ಗೆ ಬೇಕು ಶೌಚಾಲಯ

ಮೈಸೂರಿನ ಪ್ರತಿಷ್ಠಿತ ಬಡಾವಣೆಗಳಲ್ಲಿ ಒಂದಾದ ಕುವೆಂಪು ನಗರದ ಎಂ -ಬ್ಲಾಕ್ ನಲ್ಲಿರುವ ಭಾರತ್ ಮಾತಾ ಉದ್ಯಾನವನವು ಕುವೆಂಪು ನಗರದ ಪ್ರಮುಖ…

7 hours ago

ಓದುಗರ ಪತ್ರ | ಚರಂಡಿ ಸೇರುತ್ತಿರುವ ನೀರಿಗೆ ‘ತಡೆ’ಹಾಕಿ

ಮೈಸೂರಿನ ವಿಜಯನಗರ ಎರಡನೇ ಹಂತದ ದಿವ್ಯರೂಪ ಕಲ್ಯಾಣ ಮಂಟಪದ ಸಮೀಪ ಮೂರು ವಾರಗಳಿಂದ ದಿನದಲ್ಲಿ ಆರು ಗಂಟೆಗಳ ಕಾಲ ಪ್ರತಿ…

7 hours ago

ನಾಡಿನುದ್ದಕ್ಕೂ ಕುವೆಂಪು ಕನ್ನಡ ಅಧ್ಯಯನ ಸಂಸ್ಥೆ ಕಂಪು

ಡಿಸೆಂಬರ್‌ನಲ್ಲಿ ವಜ್ರಮಹೋತ್ಸವ ; ಸಂಭ್ರಮಕ್ಕೆ ಸಿದ್ಧತೆ ಚಿರಂಜೀವಿ ಸಿ.ಹುಲ್ಲಹಳ್ಳಿ ಕರ್ನಾಟಕದ ನೆಲ, ಜಲ, ಭಾಷೆಯ ಏಳಿಗೆಗಾಗಿ ಕಾವ್ಯ, ಸಾಹಿತ್ಯ ಮತ್ತು…

7 hours ago

ಗಾಂಧಿ ಅಭಿಯಾನ ಅರಿವಿನ ಯಾನ ; ಗಾಂಧಿ ವಾದಕ್ಕೆ ಮನಸೋತಿದ್ದ ಬಳ್ಳಾರಿ ಸಿದ್ದಮ್ಮ

ಡಾ. ಎಂ. ಡಿ. ಉಮೇಶ, ಉಪನ್ಯಾಸಕರು, ಗಾಂಧಿ ಅಧ್ಯಯನ ಕೇಂದ್ರ ಮೈಸೂರು ವಿಶ್ವವಿದ್ಯಾನಿಲಯ, ಮೈಸೂರು ಬಳ್ಳಾರಿ ಸಿದ್ದಮ್ಮನವರು ೧೯೦೩ರಲ್ಲಿ ಬಸೆಟಪ್ಪ…

7 hours ago

ಗಾಂಧಿ ಅಭಿಯಾನ ಅರಿವಿನ ಯಾನ ; ಆಹಾರದ ಕುರಿತು ಕೆಲವು ಚಿಲ್ಲರೆ ಪ್ರಯೋಗಗಳು

ನಾನು ನನ್ನನ್ನು ಆಳವಾಗಿ ಪರಿಶೋಧಿಸಿಕೊಂಡಂತೆಲ್ಲ ನನ್ನ ಆಂತರಿಕ ಮತ್ತು ಬಾಹ್ಯ ವಿಷಯಗಳಲ್ಲಿ ಬದಲಾವಣೆ ಮಾಡಿಕೊಳ್ಳುವ ಅವಶ್ಯಕತೆ ನನಗೆ ತೋರಿತು. ನನ್ನ…

7 hours ago