ಮೈಸೂರು

ನಾಡಗೀತೆಯಲ್ಲಿ ಬೌದ್ಧ ಪದ ಸೇರಿರುವ ಬಗ್ಗೆ ಪ್ರಸ್ತಾವನೆ ; ಸಚಿವ ಎಚ್‌ಸಿಎಂ

ಮೈಸೂರು : ಕುವೆಂಪು ರಚಿತ ನಾಡಗೀತೆಯಲ್ಲಿ ಬೌದ್ಧ ಎಂಬ ಪದ ಸೇರಿಸುವ ಬಗ್ಗೆ ಪ್ರಸ್ತಾವನೆ ಸಲ್ಲಿಸಿದ್ದು, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಪರಿಶೀಲನೆ ನಡೆಸಲಿದೆ ಎಂದು ಸಮಾಜ ಕಲ್ಯಾಣ ಸಚಿವ ಡಾ.ಎಚ್.ಸಿ. ಮಹದೇವಪ್ಪ ಹೇಳಿದರು.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಮೈಸೂರಿಗೆ ಸೋಮವಾರ ಆಗಮಿಸಲಿದ್ದು, ಆ ಸಂದರ್ಭದಲ್ಲಿ ನೂತನ ಜಿಲ್ಲಾಧಿಕಾರಿ ಕಚೇರಿಯ ಬಳಿ ನಿರ್ಮಾಣವಾಗಿರುವ ಡಿ.ದೇವರಾಜ ಅರಸು ಪ್ರತಿಮೆಯನ್ನು ಲೋಕಾರ್ಪಣೆ ಮಾಡುವ ಉದ್ದೇಶ ಇದೆ ಎಂದು ತಿಳಿಸಿದರು.

ಇದನ್ನು ಓದಿ: ನವೆಂಬರ್‌ನಲ್ಲಿ ರಾಜಕೀಯ ಕ್ರಾಂತಿ : ಪರಮೇಶ್ವರ್‌ ಹೇಳಿದ್ದೇನು?

ನವೆಂಬರ್‌ನಲ್ಲಿ ಕ್ರಾಂತಿಯೂ ಇಲ್ಲ. ಭ್ರಾಂತಿಯೂ ಇಲ್ಲ. ಯಾವಾಗ ಏನು ಆಗಬೇಕೆಂಬುದನ್ನು ಹೈಕಮಾಂಡ್ ತೀರ್ಮಾನ ಮಾಡುತ್ತದೆ ಎಂದು ಪ್ರಶ್ನೆವೊಂದಕ್ಕೆ ಉತ್ತರಿಸಿದರು.

ಸಿಎಂ ಸ್ಥಾನದಲ್ಲಿ ಸಿದ್ದರಾಮಯ್ಯನವರಿದ್ದಾರೆ. ಇನ್ನೂ ಸಚಿವರಾಗಬೇಕು ಎಂದು ಎಲ್ಲರಿಗೂ ಆಸೆ ಇರುತ್ತದೆ. ಅದು ತಪ್ಪಲ್ಲ, ಅದು ಸಹಜ. ನಮ್ಮಲ್ಲಿ ಹೈಕಮಾಂಡ್ ತೀರ್ಮಾನವೇ ಅಂತಿಮ ಎಂದರು.

ಸಚಿವ ಸಂಪುಟ ಸಭೆಯಲ್ಲಿ ಸಚಿವ ಕೆ. ಜೆ. ಜಾರ್ಜ್‌ಯೊಂದಿಗೆ ಗಲಾಟೆ ನಡೆದಿದೆ ಎಂಬುದು ಸರಿಯಲ್ಲ. ಸಭೆ ಸೇರುವುದೇ ಚರ್ಚೆ ಮಾಡಲು, ಅಲ್ಲಿ ಚರ್ಚೆ ಆಗಿದೆಯಷ್ಟೇ. ಅಲ್ಲಿ ಜಗಳವಾಗಿಲ್ಲ. ಚರ್ಚೆಯ ನಂತರ ಎಲ್ಲವೂ ಪರಿಹಾರವಾಗಿದೆ ಎಂದು ಸ್ಪಷ್ಟಪಡಿಸಿದರು.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಪಂಚ.. ತಂತ್ರ !

ಪಂಚ.. ತಂತ್ರ ! ಚುನಾವಣೆಯಲ್ಲಿ ಗೆದ್ದವರಿಗೆ ಸಿಎಂ ಚಿಂತೆ, ಸೋತವರಿಗೆ ಇವಿಎಂನದೇ ಚಿಂತೆ ! -ಮ.ಗು.ಬಸವಣ್ಣ, ಜೆಎಸ್‌ಎಸ್ ಬಡಾವಣೆ, ಮೈಸೂರು

2 mins ago

ಓದುಗರ ಪತ್ರ: ಮರದ ಕೊಂಬೆಯನ್ನು ತೆರವುಗೊಳಿಸಿ

ಮೈಸೂರಿನ ಕುವೆಂಪುನಗರದ ‘ಎಂ’ ಬ್ಲಾಕ್‌ನ ನೃಪತುಂಗ ರಸ್ತೆಯಲ್ಲಿರುವ ಗಣಪತಿ ದೇವಸ್ಥಾನದ ಪಕ್ಕದಲ್ಲಿ ಶ್ರೀ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮದಿಂದ ಹೊಸ…

4 mins ago

ಓದುಗರ ಪತ್ರ: ತಮಿಳುನಾಡಿನಲ್ಲಿ ವಿಜಯ್ ವಿಜಯ

ತಮಿಳುನಾಡು ಚುನಾವಣೆಯಲ್ಲಿ ವಿಜಯ್ ನೇತೃತ್ವದ ಟಿವಿಕೆ ಪಕ್ಷ ೨೩೪ ಕ್ಷೇತ್ರಗಳ ಪೈಕಿ ೧೦೮ ಸ್ಥಾನಗಳಲ್ಲಿ ಜಯಗಳಿಸುವ ಮೂಲಕ ಅತಿ ದೊಡ್ಡ…

5 mins ago

ಓದುಗರ ಪತ್ರ: ಪಶ್ಚಿಮ ಬಂಗಾಳದಲ್ಲಿ ಬದಲಾವಣೆಯ ಪರ್ವ

ದೇಶಾದ್ಯಂತ ತೀವ್ರ ಕುತೂಹಲ ಕೆರಳಿಸಿದ್ದ ಪಶ್ಚಿಮ ಬಂಗಾಳ ರಾಜ್ಯ ವಿಧಾನ ಸಭಾ ಚುನಾವಣೆಯಲ್ಲಿ ಬಿಜೆಪಿ ಒಟ್ಟು ೨೯೪ ಸ್ಥಾನಗಳ ಪೈಕಿ…

5 mins ago

ಪಂಜು ಗಂಗೊಳ್ಳಿ ಅವರ ವಾರದ ಅಂಕಣ: ಗಾಲಿ ಕುರ್ಚಿಯಿಂದ ಚಿಮ್ಮಿದ ಮೈಂಡ್‌ಸೆಟ್ ಕೋಚ್ ಜೈಕಿಶನ್!

ಲಕ್ಷಾಂತರ ಜನರಿಗೆ ಮೈಂಡ್ ಸೆಟ್ ಕೋಚ್ ಆಗಿ ಮಾರ್ಗದರ್ಶ ಗುಜರಾತಿನ ಅಹ್ಮದ್‌ನಗರದ ೩೮ ವರ್ಷ ಪ್ರಾಯದ ಜೈಕಿಶನ್ ಶರ್ಮಾ ಒಬ್ಬ…

3 hours ago

ಇಂದು ಅರ್ಜುನ ಆನೆಯ ಸ್ಮಾರಕ ಉದ್ಘಾಟನೆ

ಲಕ್ಷ್ಮೀಕಾಂತ್ ಕೊಮಾರಪ್ಪ ಸೋಮವಾರಪೇಟೆ: ಹಲವು ಅಡೆತಡೆಗಳ ನಡುವೆಯೂ ೩ ವರ್ಷಗಳ ಬಳಿಕ ಕೊಡಗು- ಹಾಸನ ಜಿಲ್ಲೆಗಳ ಗಡಿಭಾಗದ ಯಸಳೂರು ಸಮೀಪ…

3 hours ago