ಮೈಸೂರು

ನಾಡಗೀತೆಯಲ್ಲಿ ಬೌದ್ಧ ಪದ ಸೇರಿರುವ ಬಗ್ಗೆ ಪ್ರಸ್ತಾವನೆ ; ಸಚಿವ ಎಚ್‌ಸಿಎಂ

ಮೈಸೂರು : ಕುವೆಂಪು ರಚಿತ ನಾಡಗೀತೆಯಲ್ಲಿ ಬೌದ್ಧ ಎಂಬ ಪದ ಸೇರಿಸುವ ಬಗ್ಗೆ ಪ್ರಸ್ತಾವನೆ ಸಲ್ಲಿಸಿದ್ದು, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಪರಿಶೀಲನೆ ನಡೆಸಲಿದೆ ಎಂದು ಸಮಾಜ ಕಲ್ಯಾಣ ಸಚಿವ ಡಾ.ಎಚ್.ಸಿ. ಮಹದೇವಪ್ಪ ಹೇಳಿದರು.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಮೈಸೂರಿಗೆ ಸೋಮವಾರ ಆಗಮಿಸಲಿದ್ದು, ಆ ಸಂದರ್ಭದಲ್ಲಿ ನೂತನ ಜಿಲ್ಲಾಧಿಕಾರಿ ಕಚೇರಿಯ ಬಳಿ ನಿರ್ಮಾಣವಾಗಿರುವ ಡಿ.ದೇವರಾಜ ಅರಸು ಪ್ರತಿಮೆಯನ್ನು ಲೋಕಾರ್ಪಣೆ ಮಾಡುವ ಉದ್ದೇಶ ಇದೆ ಎಂದು ತಿಳಿಸಿದರು.

ಇದನ್ನು ಓದಿ: ನವೆಂಬರ್‌ನಲ್ಲಿ ರಾಜಕೀಯ ಕ್ರಾಂತಿ : ಪರಮೇಶ್ವರ್‌ ಹೇಳಿದ್ದೇನು?

ನವೆಂಬರ್‌ನಲ್ಲಿ ಕ್ರಾಂತಿಯೂ ಇಲ್ಲ. ಭ್ರಾಂತಿಯೂ ಇಲ್ಲ. ಯಾವಾಗ ಏನು ಆಗಬೇಕೆಂಬುದನ್ನು ಹೈಕಮಾಂಡ್ ತೀರ್ಮಾನ ಮಾಡುತ್ತದೆ ಎಂದು ಪ್ರಶ್ನೆವೊಂದಕ್ಕೆ ಉತ್ತರಿಸಿದರು.

ಸಿಎಂ ಸ್ಥಾನದಲ್ಲಿ ಸಿದ್ದರಾಮಯ್ಯನವರಿದ್ದಾರೆ. ಇನ್ನೂ ಸಚಿವರಾಗಬೇಕು ಎಂದು ಎಲ್ಲರಿಗೂ ಆಸೆ ಇರುತ್ತದೆ. ಅದು ತಪ್ಪಲ್ಲ, ಅದು ಸಹಜ. ನಮ್ಮಲ್ಲಿ ಹೈಕಮಾಂಡ್ ತೀರ್ಮಾನವೇ ಅಂತಿಮ ಎಂದರು.

ಸಚಿವ ಸಂಪುಟ ಸಭೆಯಲ್ಲಿ ಸಚಿವ ಕೆ. ಜೆ. ಜಾರ್ಜ್‌ಯೊಂದಿಗೆ ಗಲಾಟೆ ನಡೆದಿದೆ ಎಂಬುದು ಸರಿಯಲ್ಲ. ಸಭೆ ಸೇರುವುದೇ ಚರ್ಚೆ ಮಾಡಲು, ಅಲ್ಲಿ ಚರ್ಚೆ ಆಗಿದೆಯಷ್ಟೇ. ಅಲ್ಲಿ ಜಗಳವಾಗಿಲ್ಲ. ಚರ್ಚೆಯ ನಂತರ ಎಲ್ಲವೂ ಪರಿಹಾರವಾಗಿದೆ ಎಂದು ಸ್ಪಷ್ಟಪಡಿಸಿದರು.

ಆಂದೋಲನ ಡೆಸ್ಕ್

Recent Posts

ಮೈಸೂರು ವಿ.ವಿ | ಯುಜಿಸಿ ಉದ್ದೇಶಿತ ಹೊಸ ನಿಯಾಮವಳಿ ಜಾರಿಗೆ ಒತ್ತಾಯ

ಮೈಸೂರು : ವಿಶ್ವವಿದ್ಯಾನಿಲಯಗಳ ಕ್ಯಾಂಪಸ್‌ನಲ್ಲಿ ಜಾತಿ, ಧರ್ಮ,ಲಿಂಗ ಆಧಾರಿತ ಶೋಷಣೆಯನ್ನು ತಡೆಗಟ್ಟಲು ಯುಜಿಸಿಯ ಉದ್ದೇಶಿತ ಹೊಸ ನಿಯಮಾವಳಿಗಳ ಜಾರಿಗೆ ಒತ್ತಾಯಿಸಿ…

35 mins ago

ಸರ್ಕಾರಿ ನೌಕರರಿಗೆ ತಿಂಗಳಿಗೊಮ್ಮೆ ಖಾದಿ ಧಿರಿಸು ಕಡ್ಡಾಯ

ಬೆಂಗಳೂರು : ರಾಜ್ಯ ಸರ್ಕಾರಿ ನೌಕರರಿಗೆ ಖಾದಿ ಬಟ್ಟೆ ಬಳಕೆ ಕಡ್ಡಾಯಗೊಳಿಸಲಾಗಿದೆ. ಪ್ರತಿ ತಿಂಗಳ ಮೊದಲ ಶನಿವಾರ ಖಾದಿ ಬಟ್ಟೆ…

1 hour ago

ಕ್ಯಾಂಪಸ್‌ಗಳಲ್ಲಿ ಜಾತಿ ತಾರತಮ್ಯ : ಯುಜಿಸಿ ನಿಯಮಾವಳಿಗೆ ʻಸುಪ್ರೀಂʼ ತಡೆ

ಹೊಸದಿಲ್ಲಿ : ಮಹತ್ವದ ಬೆಳವಣಿಗೆಯಲ್ಲಿ ವಿಶ್ವವಿದ್ಯಾಲಯ ಅನುದಾನ ಆಯೋಗದ (ಯುಜಿಸಿ) ಹೊಸ ನಿಯಮಗಳಿಗೆ ಸರ್ವೋಚ್ಚ ನ್ಯಾಯಾಲಯ ತಡೆ ನೀಡಿದೆ. ವಿಶ್ವವಿದ್ಯಾಲಯ…

1 hour ago

ಕರ್ನಾಟಕ ಪೊಲೀಸರಿಗೆ ಸಿಹಿಸುದ್ದಿ : ಜನ್ಮದಿನ, ವಿವಾಹ ವಾರ್ಷಿಕೋತ್ಸವಕ್ಕೂ ರಜೆ

ಬೆಂಗಳೂರು : ಹಬ್ಬ-ಹರಿದಿನಗಳನ್ನೂ ಲೆಕ್ಕಿಸದೆ ಜನರಿಗಾಗಿ ದುಡಿಯುವ ಪೊಲೀಸರಿಗೆ ಕರ್ನಾಟಕ ಪೊಲೀಸ್ ಇಲಾಖೆ ಸಿಹಿಸುದ್ದಿ ನೀಡಿದ್ದು, ಜನ್ಮದಿನ ಮತ್ತು ವಿವಾಹ…

2 hours ago

ಭಾರತ-ಕೆನಡಾ ನಡುವೆ ಎಲೆಕ್ಟ್ರಿಕ್ ವಾಹನ ಒಪ್ಪಂದ : ಎಚ್‌ಡಿಕೆ ನೇತೃತ್ವದಲ್ಲಿ ದ್ವಿಪಕ್ಷೀಯ ಚರ್ಚೆ

ಹೊಸದಿಲ್ಲಿ : ನಿರ್ಣಾಯಕ ಅಪರೂಪದ ಖನಿಜಗಳು, ಇವಿ ಚಲನಶೀಲತೆ, ಉತ್ಪಾದನೆ ಮತ್ತು ಸುಸ್ಥಿರ ಕೈಗಾರಿಕಾ ಅಭಿವೃದ್ಧಿ ಕ್ಷೇತ್ರಗಳಲ್ಲಿನ ಸಹಕಾರವನ್ನು ಬಲಪಡಿಸಲು…

3 hours ago

ಮುಡಾ ಕೇಸ್‌ನಲ್ಲಿ ಸಿಎಂʼಗೆ ನಿರಾಳ : ʻಸತ್ಯ ಮೇವ ಜಯತೆʻ ಫ್ಲೇ ಕಾರ್ಡ್‌ ಹಿಡಿದು ಕಾಂಗ್ರೆಸ್‌ ಸಂಭ್ರಮ

ಮೈಸೂರು : ಮುಡಾ ಹಗರಣದಲ್ಲಿ ಲೋಕಾಯುಕ್ತ ಪೊಲೀಸರು ಮುಖ್ಯಮಂತ್ರಿ ಸಿದ್ದರಾಮಯ್ಯ, ಪತ್ನಿ ಪಾರ್ವತಿ ಮತ್ತು ಇತರರ ಮೇಲೆ ಬಿ ರಿಪೋರ್ಟ್…

3 hours ago