ಮೈಸೂರು: ಸ್ಪಾ ಹೆಸರಲ್ಲಿ ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ಅಡ್ಡೆ ಮೇಲೆ ವಿಜಯನಗರ ಠಾಣಾ ಪೊಲೀಸರು ದಾಳಿ ನಡೆಸಿದ್ದು, ಐವರು ಮಹಿಳೆಯರನ್ನು ರಕ್ಷಣೆ ಮಾಡಿದ್ದಾರೆ.
ವಿಜಯನಗರದಲ್ಲಿರುವ ರಾಯಲ್ ಈಶಾ ಎಂಬ ಮಸಾಜ್ ಪಾರ್ಲರ್ ಮೇಲೆ ಇಂದು(ಮೇ.25) ಪೊಲೀಸರು ದಾಳಿ ನಡೆಸಿದ್ದು, ದಾಳಿಯಲ್ಲಿ ಐವರು ಮಹಿಳೆಯರನ್ನು ರಕ್ಷಿಸಲಾಗಿದೆ. ಈ ಪೈಕಿ ಇಬ್ಬರು ಪಶ್ಚಿಮ ಬಂಗಾಳದವರಾಗಿದ್ದು, ಓರ್ವ ಹುಡುಗಿ ಮಡಿಕೇರಿ ಮೂಲದವಳು. ಇನ್ನುಳಿದ ಇಬ್ಬರು ಮಹಿಳೆಯರು ಸ್ಥಳೀಯವರಾಗಿದ್ದಾರೆ. ಈ ದಾಳಿಯಲ್ಲಿ ಓರ್ವ ಮಹಿಳೆ ದಂಧೆ ಕೋರಳು, ಒಬ್ಬ ಪಿಂಪ್ ಹಾಗೂ ಇಬ್ಬರು ಗಿರಾಕಿಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಸ್ಪಾ ಹೆಸರಿನಲ್ಲಿ ಅನೈತಿಕ ಚಟುವಟಿಕೆ ನಡೆಯುತ್ತಿರುವ ಬಗ್ಗೆ ಮೈಸೂರಿನ ಒಡನಾಡಿ ಸೇವಾ ಸಂಸ್ಥೆಯು ಮಾಹಿತಿ ಕಲೆಹಾಕಿ ಸಹಾಯಕ ಪೊಲೀಸ್ ಆಯುಕ್ತರಾದ ಗಜೇಂದ್ರ ಪ್ರಸಾದ್ ಅವರಿಗೆ ದೂರು ನೀಡಿತ್ತು.
ವಿಜಯನಗರ ಪೊಲೀಸ್ ಠಾಣೆಯ ಆರಕ್ಷಕ ನಿರೀಕ್ಷಕರಾದ ಪ್ರದೀಪ್ ರವರ ನೇತೃತ್ವದಲ್ಲಿ ಮಸಾಜ್ ಪಾರ್ಲರ್ ನ ಮೇಲೆ ದಾಳಿ ನಡೆಸಲಾಯಿತು. ದಾಳಿಯ ವೇಳೆ ಪೊಲೀಸ್ ಸಿಬ್ಬಂದಿಗಳು, ಒಡನಾಡಿ ಸಂಸ್ಥೆಯ ನಿರ್ದೇಶಕರಾದ ಸ್ಟ್ಯಾನ್ಲಿ, ಪರಶು ಹಾಗೂ ಒಡನಾಡಿ ಸಂಸ್ಥೆ ಸಿಬ್ಬಂದಿಗಳಾದ ಪ್ರದೀಪ್.ಕೆ, ಸುಮಾ, ಶಶಾಂಕ್ ಹಾಗೂ ಬಾಲುಕುಮಾರ್ ಇದ್ದರು.
ನವದೆಹಲಿ : ದೇಶದಲ್ಲಿ ಮತ್ತೆ ಇಂಧನ ದರ ಏರಿಕೆಯ ಹೊರೆ ಜನರ ಮೇಲೆ ಬಿದ್ದಿದೆ. ಸೋಮವಾರ ಪೆಟ್ರೋಲ್ ದರವನ್ನು ಲೀಟರ್ಗೆ…
ಸುಪ್ರೀಂಕೋರ್ಟ್ ಗೆ ಮನವಿ ಸಲ್ಲಿಸಲು ಸಮಿತಿ ರಚನೆ: ಈಶ್ವರ ಖಂಡ್ರೆ ಕಾರ್ಕಳ : ಪರಿಭಾವಿತ (ಡೀಮ್ಡ್) ಅರಣ್ಯ ಪ್ರದೇಶದಲ್ಲಿ ಸರ್ಕಾರಿ…
ಆರ್ಎಸ್ಎಸ್ ಕಾರ್ಯಸೂಚಿಗಳು ಜಾರಿ ಬಿ.ಶ್ರೀಪಾದ ಭಟ್ 2026ರ ಮೇ ತಿಂಗಳಲ್ಲಿ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು…
ಆರ್ಥಿಕ ಸಂಕಷ್ಟದ ಸಮಯದಲ್ಲಿ ಜಾಗ್ರತೆಯಿಂದ ಕಾರ್ಯನಿರ್ವಹಣೆ ಅಗತ್ಯ ಇದು ಇಪ್ಪತ್ತೈದು ವರ್ಷಗಳ ಹಿಂದೆ ನಡೆದ ಘಟನೆ. ಅವತ್ತು ಮುಖ್ಯಮಂತ್ರಿಯಾಗಿದ್ದ ಎಸ್.…
ಕೇವಲ ಹತ್ತು ದಿನಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಮೂರು ಬಾರಿ ಹೆಚ್ಚಳವಾಗಿದೆ. ಇದು ಪಶ್ಚಿಮ ಬಂಗಾಳ, ಅಸ್ಸಾಂ, ತಮಿಳುನಾಡು, ಕೇರಳ…