ಮೈಸೂರು: ಸ್ಪಾ ಹೆಸರಲ್ಲಿ ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ಅಡ್ಡೆ ಮೇಲೆ ವಿಜಯನಗರ ಠಾಣಾ ಪೊಲೀಸರು ದಾಳಿ ನಡೆಸಿದ್ದು, ಐವರು ಮಹಿಳೆಯರನ್ನು ರಕ್ಷಣೆ ಮಾಡಿದ್ದಾರೆ.
ವಿಜಯನಗರದಲ್ಲಿರುವ ರಾಯಲ್ ಈಶಾ ಎಂಬ ಮಸಾಜ್ ಪಾರ್ಲರ್ ಮೇಲೆ ಇಂದು(ಮೇ.25) ಪೊಲೀಸರು ದಾಳಿ ನಡೆಸಿದ್ದು, ದಾಳಿಯಲ್ಲಿ ಐವರು ಮಹಿಳೆಯರನ್ನು ರಕ್ಷಿಸಲಾಗಿದೆ. ಈ ಪೈಕಿ ಇಬ್ಬರು ಪಶ್ಚಿಮ ಬಂಗಾಳದವರಾಗಿದ್ದು, ಓರ್ವ ಹುಡುಗಿ ಮಡಿಕೇರಿ ಮೂಲದವಳು. ಇನ್ನುಳಿದ ಇಬ್ಬರು ಮಹಿಳೆಯರು ಸ್ಥಳೀಯವರಾಗಿದ್ದಾರೆ. ಈ ದಾಳಿಯಲ್ಲಿ ಓರ್ವ ಮಹಿಳೆ ದಂಧೆ ಕೋರಳು, ಒಬ್ಬ ಪಿಂಪ್ ಹಾಗೂ ಇಬ್ಬರು ಗಿರಾಕಿಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಸ್ಪಾ ಹೆಸರಿನಲ್ಲಿ ಅನೈತಿಕ ಚಟುವಟಿಕೆ ನಡೆಯುತ್ತಿರುವ ಬಗ್ಗೆ ಮೈಸೂರಿನ ಒಡನಾಡಿ ಸೇವಾ ಸಂಸ್ಥೆಯು ಮಾಹಿತಿ ಕಲೆಹಾಕಿ ಸಹಾಯಕ ಪೊಲೀಸ್ ಆಯುಕ್ತರಾದ ಗಜೇಂದ್ರ ಪ್ರಸಾದ್ ಅವರಿಗೆ ದೂರು ನೀಡಿತ್ತು.
ವಿಜಯನಗರ ಪೊಲೀಸ್ ಠಾಣೆಯ ಆರಕ್ಷಕ ನಿರೀಕ್ಷಕರಾದ ಪ್ರದೀಪ್ ರವರ ನೇತೃತ್ವದಲ್ಲಿ ಮಸಾಜ್ ಪಾರ್ಲರ್ ನ ಮೇಲೆ ದಾಳಿ ನಡೆಸಲಾಯಿತು. ದಾಳಿಯ ವೇಳೆ ಪೊಲೀಸ್ ಸಿಬ್ಬಂದಿಗಳು, ಒಡನಾಡಿ ಸಂಸ್ಥೆಯ ನಿರ್ದೇಶಕರಾದ ಸ್ಟ್ಯಾನ್ಲಿ, ಪರಶು ಹಾಗೂ ಒಡನಾಡಿ ಸಂಸ್ಥೆ ಸಿಬ್ಬಂದಿಗಳಾದ ಪ್ರದೀಪ್.ಕೆ, ಸುಮಾ, ಶಶಾಂಕ್ ಹಾಗೂ ಬಾಲುಕುಮಾರ್ ಇದ್ದರು.
ಶ್ರೇಯಸ್ ದೇವನೂರು ಇಂದು ವಿಶ್ವ ಆನೆ ದಿನಾಚರಣೆ ಭೂಮಿಯ ಮೇಲಿರುವ ಜೀವಿಗಳಲ್ಲಿ ಆನೆ, ಅತಿ ದೊಡ್ಡ ಪ್ರಾಣಿ ಮಾತ್ರವಲ್ಲ ,…
ಪಂಜುಗಂಗೊಳ್ಳಿ ಅವರ ವಾರದ ಅಂಕಣ ಕಡು ಬಡತನದ ಕುಟುಂಬದಿಂದ ಬಂದ ಶುಶ್ರೂಷಕಿ ಪ. ಬಂಗಾಳದ ಗೀತಾ ಕಾರ್ಮಕಾರ್ ನರ್ಸಿಂಗ್ ತರಬೇತಿ…
ಆರ್.ಟಿ.ವಿಠ್ಠಲಮೂರ್ತಿ ಕರ್ನಾಟಕದ ರಾಜಕೀಯ ಚರಿತ್ರೆಯಲ್ಲಿ ಹೊಸ ಮೈಲಿಗಲ್ಲಾಗಿ ದಾಖಲಾಗಿರುವ ಸಿದ್ದರಾಮಯ್ಯ ಅವರೀಗ ಮತ್ತೊಂದು ಪಯಣಕ್ಕೆ ಸಜ್ಜಾಗಬೇಕಿದೆ. ಇನ್ನು ಚುನಾವಣೆಗಳಲ್ಲಿ ಸ್ಪರ್ಧಿಸುವು…
ಲಕ್ಷ್ಮೀಕಾಂತ್ ಕೊಮಾರಪ್ಪ ಪ್ರಾಕೃತಿಕ ಸೌಂದರ್ಯಕ್ಕೆ ಮಾರುಹೋಗುತ್ತಿರುವ ಪ್ರವಾಸಿಗರು ಸೋಮವಾರಪೇಟೆ: ಎತ್ತ ನೋಡಿದರೂ ಅಚ್ಚಹಸಿರಿನ ಕಾಡು ಸುಂದರ ಪ್ರಕೃತಿಯ ಸೊಬಗು... ನಿಮಿಷಕ್ಕೊಮ್ಮೆ…
ಸ್ಥಾನ...ಮಾನ ! ಅಳೆದೂ ಸುರಿದು ಅಲ್ಲಿಂದಿಲ್ಲಿಗೆ ಓಡಾಡಿ ಕೊಟ್ಟೂ ಕೊಡಲಾಗದೆ ಬಿಟ್ಟೂ ಇರಲಾಗದೆ ಉಳಿಸಿಕೊಂಡಿರುವುದು ಒಂದೇ ಒಂದು ಮಂತ್ರಿ ಸ್ಥಾನ…
ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ನೇತೃತ್ವದ ಮಂತ್ರಿಮಂಡಲ ವಿಸ್ತರಣೆಯಾಗಿ ೨೦ ಸ್ಥಾನಗಳ ಪೈಕಿ ೧೯ ಶಾಸಕರು ಸಚಿವರಾಗಿ ಪ್ರಮಾಣವಚನ ಸ್ವೀಕಾರ…