ಮೈಸೂರು

‘ನಮಗೆ ರಕ್ಷಣೆ ಕೊಡಿ’.. ಮೈಸೂರು ಎಸ್‌ಪಿ ಕಚೇರಿಗೆ ಬಂದ ತುಮಕೂರಿನ ಪ್ರೇಮಿಗಳು

ಮೈಸೂರು : ನಾವು ಪರಸ್ಪರ ಪ್ರೀತಿಸಿ ಮದುವೆಯಾಗಿದ್ದೇವೆ. ನಮಗೆ ಜೀವ ಬೆದರಿಕೆ ಇದ್ದು, ರಕ್ಷಣೆ ಕೊಡಿ ಎಂದು ತುಮಕೂರು ಮೂಲದ ಪ್ರೇಮಿಗಳು ಮೈಸೂರು ಎಸ್‌ಪಿ ಕಚೇರಿಗೆ ಬಂದು ಮನವಿ ಮಾಡಿದ ಘಟನೆ ನಡೆದಿದೆ.

ಸುಮಾರು ಎರಡೂವರೆ ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದ ತುಮಕೂರು ಜಿಲ್ಲೆ ಗುಬ್ಬಿ ತಾಲ್ಲೂಕಿನ ಸಂಗನಹಳ್ಳಿ ಗ್ರಾಮದ ಕೃಪಾ ಮತ್ತು ಧರಣೇಶ್ ನಾಲ್ಕು ದಿನಗಳ ಹಿಂದೆ ಮಂಡ್ಯ ಜಿಲ್ಲೆ ಕೆ. ಆರ್. ಪೇಟೆಯ ಮಹದೇಶ್ವರ ದೇವಸ್ಥಾನದಲ್ಲಿ ಪರಸ್ಪರ ಒಪ್ಪಿಗೆಯಿಂದ ಮದುವೆಯಾಗಿದ್ದಾರೆ. ಆದರೆ, ಇವರ ಪ್ರೀತಿಗೆ ಪೋಷಕರ ವಿರೋಧ ಎದುರಾಗಿದೆ. ವಿಶೇಷವಾಗಿ ಯುವತಿ ತಂದೆ ಶಿವಕುಮಾರ್ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಇಬ್ಬರೂ ಗ್ರಾಮವನ್ನು ತೊರೆದು ಬಂದು ವಿವಾಹವಾಗಿದ್ದಾರೆ ಎನ್ನಲಾಗಿದೆ.

ಗುರುವಾರ ಬೆಳಿಗ್ಗೆ ಮೈಸೂರಿನ ಎಸ್‌ಪಿ ಕಚೇರಿಗೆ ಬಂದ ಅವರು ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕ್ ಅವರನ್ನು ಭೇಟಿಯಾಗಿದ್ದಾರೆ. ನಾವು ಇಬ್ಬರೂ ವಯಸ್ಕರಾಗಿದ್ದೇವೆ. ಪರಸ್ಪರ ಒಪ್ಪಿಗೆ ಮೇರೆಗೆ ಮದುವೆಯಾಗಿದ್ದೇವೆ. ಆದರೆ, ನನ್ನ ತಂದೆಯಿಂದ ನಮಗೆ ಜೀವ ಬೆದರಿಕೆ ಇದೆ. ದಯವಿಟ್ಟು ರಕ್ಷಣೆ ಕೊಡಿ ಎಂದು ಮನವಿ ಮಾಡಿದ್ದಾರೆ.

ಇನ್ನೊಂದೆಡೆ, ಕೃಪಾ ಕಾಣೆಯಾಗಿದ್ದಾಳೆ ಎಂದು ಬೆಂಗಳೂರಿನ ಪೀಣ್ಯ ಪೊಲೀಸ್ ಠಾಣೆಯಲ್ಲಿ ಆಕೆಯ ತಂದೆ ಈಗಾಗಲೇ ದೂರು ದಾಖಲಿಸಿದ್ದಾರೆ. ಆದರೆ, ನಾನು ನಾಪತ್ತೆಯಾಗಿಲ್ಲ. ಸ್ವಇಚ್ಛೆಯಿಂದ ಮದುವೆಯಾಗಿದ್ದೇನೆ ಎಂದು ಕೃಪಾ ಸ್ಪಷ್ಟಪಡಿಸಿದ್ದಾರೆ. ಈ ಸಂಬಂಧ ದಕ್ಷಿಣ ಗ್ರಾಮಾಂತರ ಪೊಲೀಸ್ ಠಾಣೆ ಬಳಿ ಇರುವ ಜಿಲ್ಲಾ ಮಹಿಳಾ ಪೊಲೀಸ್ ಠಾಣೆಗೆ ಯುವ ಜೋಡಿಗಳನ್ನು ಕಳುಹಿಸಿದ್ದಾರೆ. ಇದೀಗ ಅವರ ಪೋಷಕರಿಗೆ ವಿಚಾರ ತಿಳಿಸಲಾಗಿದೆ.

ಆಂದೋಲನ ಡೆಸ್ಕ್

Recent Posts

ಸಾಲ ಬಾಧೆ ; ದಂಪತಿ ಆತ್ಮಹತ್ಯೆ

ಮಂಡ್ಯ : ಸಾಲ ಬಾಧೆಯಿಂದ ದಂಪತಿಗಳಿಬ್ಬರು ಒಂದೇ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲ್ಲೂಕಿನ ಬಿ.ಹಟ್ಟಣ ಗ್ರಾಮದಲ್ಲಿ…

9 hours ago

ಓದುಗರ ಪತ್ರ: ಮೇಕೆದಾಟು ಯೋಜನೆ ಶೀಘ್ರ ಅನುಷ್ಠಾನವಾಗಲಿ

ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…

23 hours ago

ಓದುಗರ ಪತ್ರ: ಫುಟ್‌ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ಚುರುಕುಗೊಳ್ಳಲಿ

ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್‌ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…

23 hours ago

ಓದುಗರ ಪತ್ರ: ಕೂಡ್ಲಾಪುರ ಗ್ರಾಮಕ್ಕೆ ಕಬಿನಿ ನೀರು ಕೊಡಿ

ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…

23 hours ago

ಗಾಮೀಣ ಜನರ ಏಳಿಗೆಗೆ IHDUA ಪಣ

ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್‌ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…

23 hours ago

ಸತ್ಯಮಂಗಲ-ಮೀಣ್ಯಂ ರಸ್ತೆಯಲ್ಲಿ ಸಂಚಾರ ದುಸ್ತರ

ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…

23 hours ago