ಮೈಸೂರು : ನಾವು ಪರಸ್ಪರ ಪ್ರೀತಿಸಿ ಮದುವೆಯಾಗಿದ್ದೇವೆ. ನಮಗೆ ಜೀವ ಬೆದರಿಕೆ ಇದ್ದು, ರಕ್ಷಣೆ ಕೊಡಿ ಎಂದು ತುಮಕೂರು ಮೂಲದ ಪ್ರೇಮಿಗಳು ಮೈಸೂರು ಎಸ್ಪಿ ಕಚೇರಿಗೆ ಬಂದು ಮನವಿ ಮಾಡಿದ ಘಟನೆ ನಡೆದಿದೆ.
ಸುಮಾರು ಎರಡೂವರೆ ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದ ತುಮಕೂರು ಜಿಲ್ಲೆ ಗುಬ್ಬಿ ತಾಲ್ಲೂಕಿನ ಸಂಗನಹಳ್ಳಿ ಗ್ರಾಮದ ಕೃಪಾ ಮತ್ತು ಧರಣೇಶ್ ನಾಲ್ಕು ದಿನಗಳ ಹಿಂದೆ ಮಂಡ್ಯ ಜಿಲ್ಲೆ ಕೆ. ಆರ್. ಪೇಟೆಯ ಮಹದೇಶ್ವರ ದೇವಸ್ಥಾನದಲ್ಲಿ ಪರಸ್ಪರ ಒಪ್ಪಿಗೆಯಿಂದ ಮದುವೆಯಾಗಿದ್ದಾರೆ. ಆದರೆ, ಇವರ ಪ್ರೀತಿಗೆ ಪೋಷಕರ ವಿರೋಧ ಎದುರಾಗಿದೆ. ವಿಶೇಷವಾಗಿ ಯುವತಿ ತಂದೆ ಶಿವಕುಮಾರ್ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಇಬ್ಬರೂ ಗ್ರಾಮವನ್ನು ತೊರೆದು ಬಂದು ವಿವಾಹವಾಗಿದ್ದಾರೆ ಎನ್ನಲಾಗಿದೆ.
ಗುರುವಾರ ಬೆಳಿಗ್ಗೆ ಮೈಸೂರಿನ ಎಸ್ಪಿ ಕಚೇರಿಗೆ ಬಂದ ಅವರು ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕ್ ಅವರನ್ನು ಭೇಟಿಯಾಗಿದ್ದಾರೆ. ನಾವು ಇಬ್ಬರೂ ವಯಸ್ಕರಾಗಿದ್ದೇವೆ. ಪರಸ್ಪರ ಒಪ್ಪಿಗೆ ಮೇರೆಗೆ ಮದುವೆಯಾಗಿದ್ದೇವೆ. ಆದರೆ, ನನ್ನ ತಂದೆಯಿಂದ ನಮಗೆ ಜೀವ ಬೆದರಿಕೆ ಇದೆ. ದಯವಿಟ್ಟು ರಕ್ಷಣೆ ಕೊಡಿ ಎಂದು ಮನವಿ ಮಾಡಿದ್ದಾರೆ.
ಇನ್ನೊಂದೆಡೆ, ಕೃಪಾ ಕಾಣೆಯಾಗಿದ್ದಾಳೆ ಎಂದು ಬೆಂಗಳೂರಿನ ಪೀಣ್ಯ ಪೊಲೀಸ್ ಠಾಣೆಯಲ್ಲಿ ಆಕೆಯ ತಂದೆ ಈಗಾಗಲೇ ದೂರು ದಾಖಲಿಸಿದ್ದಾರೆ. ಆದರೆ, ನಾನು ನಾಪತ್ತೆಯಾಗಿಲ್ಲ. ಸ್ವಇಚ್ಛೆಯಿಂದ ಮದುವೆಯಾಗಿದ್ದೇನೆ ಎಂದು ಕೃಪಾ ಸ್ಪಷ್ಟಪಡಿಸಿದ್ದಾರೆ. ಈ ಸಂಬಂಧ ದಕ್ಷಿಣ ಗ್ರಾಮಾಂತರ ಪೊಲೀಸ್ ಠಾಣೆ ಬಳಿ ಇರುವ ಜಿಲ್ಲಾ ಮಹಿಳಾ ಪೊಲೀಸ್ ಠಾಣೆಗೆ ಯುವ ಜೋಡಿಗಳನ್ನು ಕಳುಹಿಸಿದ್ದಾರೆ. ಇದೀಗ ಅವರ ಪೋಷಕರಿಗೆ ವಿಚಾರ ತಿಳಿಸಲಾಗಿದೆ.
ನವದೆಹಲಿ : ಇರಾನ್-ಅಮೆರಿಕ ಉದ್ವಿಗ್ನತೆಯ ನಡುವೆ ಹಾರ್ಮುಝ್ ಜಲಸಂಧಿಯಲ್ಲಿ ಭಾರತೀಯ ಧ್ವಜ ಹೊಂದಿರುವ ಸೂಪರ್ ಟ್ಯಾಂಕರ್ ಮೇಲೆ ಇರಾನಿಯನ್ ಗನ್ಬೋಟ್ಗಳಿಂದ…
ಟೆಹ್ರಾನ್ : ಅಮೆರಿಕ ಜೊತೆಗಿನ ಮಾತುಕತೆ ಭಾಗವಾಗಿ ಹೊರ್ಮುಜ್ ಜಲಸಂಧಿಯಲ್ಲಿ ಮುಕ್ತ ಸಂಚಾರಕ್ಕೆ ಅವಕಾಶ ಕಲ್ಪಿಸಿದ್ದ ಇರಾನ್, ತನ್ನ ನಿರ್ಧಾರವನ್ನು…
ಬೆಂಗಳೂರು : ಮೈಸೂರಿನ ಸಿದ್ಧಾರ್ಥನಗರದ ಮನೆಯೊಂದರಲ್ಲಿ ಚಿರತೆ ಮಂಚದಡಿ ಅಡಗಿದ್ದ ವೇಳೆ ಪ್ರಾಣದ ಹಂಗು ತೊರೆದು ವೃದ್ಧ ಅತ್ತೆಯನ್ನು ಸುರಕ್ಷಿತವಾಗಿ…
ಬೆಂಗಳೂರು : ಬನ್ನೇರುಘಟ್ಟ ಮೃಗಾಲಯಕ್ಕೆ ದಕ್ಷಿಣ ಆಫ್ರಿಕಾದಿಂದ ತರಿಸಿಕೊಂಡ 4 ಶಿವಂಗಿ (ಚೀತಾ)ಗಳನ್ನು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ…
ಬೆಂಗಳೂರು- ಕಾಂಗ್ರೆಸ್ ಪಕ್ಷ ಮಹಿಳಾ ಮೀಸಲಾತಿಗೆ ವಿರೋಧ ಇಲ್ಲ. ಕೇಂದ್ರ ಸರ್ಕಾರ ಲೋಕಸಭೆಯ ಸ್ಥಾನಗಳ ಸಂಖ್ಯೆ ಹೆಚ್ಚಿಸುವುದನ್ನು ಮಹಿಳಾ ಮೀಸಲಾತಿಯೊಂದಿಗೆ…
ಉಡುಪಿ: ಶ್ರೀಕೃಷ್ಣ ಮಂದಿರಕ್ಕೆ ಸಂಸದೆ ಪ್ರಿಯಾಂಕಾ ಗಾಂಧಿ ಪತಿ ರಾಬರ್ಟ್ ವಾದ್ರಾ ಭೇಟಿ ನೀಡಿದರು. ಅವರ ಜನ್ಮದಿನದ ಪ್ರಯುಕ್ತ ಕೆಲವು…