ಮೈಸೂರು

‘ನಮಗೆ ರಕ್ಷಣೆ ಕೊಡಿ’.. ಮೈಸೂರು ಎಸ್‌ಪಿ ಕಚೇರಿಗೆ ಬಂದ ತುಮಕೂರಿನ ಪ್ರೇಮಿಗಳು

ಮೈಸೂರು : ನಾವು ಪರಸ್ಪರ ಪ್ರೀತಿಸಿ ಮದುವೆಯಾಗಿದ್ದೇವೆ. ನಮಗೆ ಜೀವ ಬೆದರಿಕೆ ಇದ್ದು, ರಕ್ಷಣೆ ಕೊಡಿ ಎಂದು ತುಮಕೂರು ಮೂಲದ ಪ್ರೇಮಿಗಳು ಮೈಸೂರು ಎಸ್‌ಪಿ ಕಚೇರಿಗೆ ಬಂದು ಮನವಿ ಮಾಡಿದ ಘಟನೆ ನಡೆದಿದೆ.

ಸುಮಾರು ಎರಡೂವರೆ ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದ ತುಮಕೂರು ಜಿಲ್ಲೆ ಗುಬ್ಬಿ ತಾಲ್ಲೂಕಿನ ಸಂಗನಹಳ್ಳಿ ಗ್ರಾಮದ ಕೃಪಾ ಮತ್ತು ಧರಣೇಶ್ ನಾಲ್ಕು ದಿನಗಳ ಹಿಂದೆ ಮಂಡ್ಯ ಜಿಲ್ಲೆ ಕೆ. ಆರ್. ಪೇಟೆಯ ಮಹದೇಶ್ವರ ದೇವಸ್ಥಾನದಲ್ಲಿ ಪರಸ್ಪರ ಒಪ್ಪಿಗೆಯಿಂದ ಮದುವೆಯಾಗಿದ್ದಾರೆ. ಆದರೆ, ಇವರ ಪ್ರೀತಿಗೆ ಪೋಷಕರ ವಿರೋಧ ಎದುರಾಗಿದೆ. ವಿಶೇಷವಾಗಿ ಯುವತಿ ತಂದೆ ಶಿವಕುಮಾರ್ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಇಬ್ಬರೂ ಗ್ರಾಮವನ್ನು ತೊರೆದು ಬಂದು ವಿವಾಹವಾಗಿದ್ದಾರೆ ಎನ್ನಲಾಗಿದೆ.

ಗುರುವಾರ ಬೆಳಿಗ್ಗೆ ಮೈಸೂರಿನ ಎಸ್‌ಪಿ ಕಚೇರಿಗೆ ಬಂದ ಅವರು ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕ್ ಅವರನ್ನು ಭೇಟಿಯಾಗಿದ್ದಾರೆ. ನಾವು ಇಬ್ಬರೂ ವಯಸ್ಕರಾಗಿದ್ದೇವೆ. ಪರಸ್ಪರ ಒಪ್ಪಿಗೆ ಮೇರೆಗೆ ಮದುವೆಯಾಗಿದ್ದೇವೆ. ಆದರೆ, ನನ್ನ ತಂದೆಯಿಂದ ನಮಗೆ ಜೀವ ಬೆದರಿಕೆ ಇದೆ. ದಯವಿಟ್ಟು ರಕ್ಷಣೆ ಕೊಡಿ ಎಂದು ಮನವಿ ಮಾಡಿದ್ದಾರೆ.

ಇನ್ನೊಂದೆಡೆ, ಕೃಪಾ ಕಾಣೆಯಾಗಿದ್ದಾಳೆ ಎಂದು ಬೆಂಗಳೂರಿನ ಪೀಣ್ಯ ಪೊಲೀಸ್ ಠಾಣೆಯಲ್ಲಿ ಆಕೆಯ ತಂದೆ ಈಗಾಗಲೇ ದೂರು ದಾಖಲಿಸಿದ್ದಾರೆ. ಆದರೆ, ನಾನು ನಾಪತ್ತೆಯಾಗಿಲ್ಲ. ಸ್ವಇಚ್ಛೆಯಿಂದ ಮದುವೆಯಾಗಿದ್ದೇನೆ ಎಂದು ಕೃಪಾ ಸ್ಪಷ್ಟಪಡಿಸಿದ್ದಾರೆ. ಈ ಸಂಬಂಧ ದಕ್ಷಿಣ ಗ್ರಾಮಾಂತರ ಪೊಲೀಸ್ ಠಾಣೆ ಬಳಿ ಇರುವ ಜಿಲ್ಲಾ ಮಹಿಳಾ ಪೊಲೀಸ್ ಠಾಣೆಗೆ ಯುವ ಜೋಡಿಗಳನ್ನು ಕಳುಹಿಸಿದ್ದಾರೆ. ಇದೀಗ ಅವರ ಪೋಷಕರಿಗೆ ವಿಚಾರ ತಿಳಿಸಲಾಗಿದೆ.

ಆಂದೋಲನ ಡೆಸ್ಕ್

Recent Posts

ಬನ್ನೇರುಘಟ್ಟ ಉದ್ಯಾನಕ್ಕೆ ಹೊಸ ಅತಿಥಿಯ ಆಗಮನ: ಮುದ್ದಾದ ಮರಿಗೆ ಜನ್ಮ ನೀಡಿದ ನೀರಾನೆ

ಬೆಂಗಳೂರು: ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ನೀರಾನೆಯೊಂದು ಮುದ್ದಾದ ಮರಿಗೆ ಜನ್ಮ ನೀಡಿದೆ. ಉದ್ಯಾನದಲ್ಲಿದ್ದ 17 ವರ್ಷ ವಯಸ್ಸಿನ ದಶ್ಯ ಎಂಬ…

7 hours ago

‘ಬಿಡದಿ ಟೌನ್‌ಶಿಪ್ ವಿರುದ್ಧ ಕಾನೂನು ಹೋರಾಟ’: ಕೇಂದ್ರ ಬೃಹತ್ ಕೈಗಾರಿಕಾ ಖಾತೆ ಸಚಿವ ಎಚ್‌ಡಿಕೆ ಘೋಷಣೆ

ಬೆಂಗಳೂರು: ರೈತರ ತೀವ್ರ ವಿರೋಧದ ನಡುವೆ ಅಂತಿಮ ಅಧಿಸೂಚನೆ ಹೊರಡಿಸಿ ಬಿಡದಿ ಟೌನ್‌ಶಿಪ್ ಮಾಡಲು ಹೊರಟಿರುವ ರಾಜ್ಯ ಸರ್ಕಾರದ ವಿರುದ್ಧ…

7 hours ago

ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆ ನಿಲ್ಲಿಸಲ್ಲ: ಸಿಎಂ ಡಿ.ಕೆ.ಶಿವಕುಮಾರ್‌ ಸ್ಪಷ್ಟನೆ

ಬೆಂಗಳೂರು: ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಯನ್ನು ನಿಲ್ಲಿಸಲ್ಲ ಎಂದು ಸಿಎಂ ಡಿ.ಕೆ.ಶಿವಕುಮಾರ್‌ ಸ್ಪಷ್ಟನೆ ನೀಡಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ…

8 hours ago

ರಾಜ್ಯದಲ್ಲಿ ಮುಂದಿನ 7 ದಿನಗಳ ಕಾಲ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಮುಂದಿನ ಏಳು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೋಲಾರ, ಹಾಸನ,…

10 hours ago

ಓದುಗರ ಪತ್ರ: ‘ಮನೆಗೊಂದು ಗ್ರಂಥಾಲಯ’ ಯೋಜನೆ ಯಶಸ್ವಿಯಾಗಲಿ

‘ಮನೆಗೊಂದು ಗ್ರಂಥಾಲಯ’ ಹೆಸರಿನಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರವು ವಿಶಿಷ್ಟ ಯೋಜನೆಯೊಂದನ್ನು ಪ್ರಾರಂಭ ಮಾಡಿರುವುದು ಶ್ಲಾಘನೀಯ. ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ…

13 hours ago

ಓದುಗರ ಪತ್ರ: ವಿದ್ಯಾರ್ಥಿ ಬಸ್ ಪಾಸ್ ದೂರ ಮಿತಿ ಹೆಚ್ಚಿಸಲಿ

ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಿದ ಬಳಿಕ ರಾಜ್ಯದ ಶಾಲಾ -ಕಾಲೇಜುಗಳ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವುದಾಗಿ…

13 hours ago