Protecting the interests of farmers in the district is the responsibility
ಮೈಸೂರು : ಜಿಲ್ಲೆಯ ಎಲ್ಲ ತಾಲ್ಲೂಕಿನ ರೈತರ ಬವಣೆಗಳನ್ನು ಆಲಿಸಿ, ಅವರ ಸಂಕಷ್ಟಗಳಿಗೆ ಸ್ಪಂದಿಸಿ ರೈತರ ಕುಟುಂಬಗಳಿಗೆ ಅಗತ್ಯ ನೆರವು ನೀಡಿ ಅವರ ಜೀವನ ಮಟ್ಟ ಉತ್ತಮಗೊಳಿಸಲು ಸರ್ಕಾರದ ಎಲ್ಲ ಅಗತ್ಯ ಯೋಜನೆಗಳನ್ನು ತಳ ಮಟ್ಟದವರೆಗೂ ತಲುಪಿಸಲು ತಾಲೂಕು ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳಿಗೆ ಅಪರ ಜಿಲ್ಲಾಧಿಕಾರಿ ಸೂಚನೆ ನೀಡಿದರು.
ಇಂದು ಜಿಲ್ಲಾಧಿಕಾರಿಗಳ ಕಛೇರಿಯಲ್ಲಿ ನಡೆದ ಜಿಲ್ಲಾಮಟ್ಟದ ರೈತರ ಆತ್ಮಹತ್ಯೆ ಹಾಗು ಬಣವೆ ನಷ್ಟ , ಆಕಸ್ಮಿಕ ಮರಣ ಮುಂತಾದ ಪ್ರಕರಣಗಳಲ್ಲಿ ಸರ್ಕಾರದಿಂದ ನೀಡುತ್ತಿರುವ ಸೌಲಭ್ಯಗಳನ್ನು ಸಕಾಲದಲ್ಲಿ ಒದಗಿಸುತ್ತಿರುವ ಬಗ್ಗೆ ಪರಿಶೀಲಿಸುವ ಮೇಲ್ವಿಚಾರಣೆ ಸಭೆಯ ಅಧ್ಯಕ್ಷತೆಯನ್ನು ವಹಿಸಿ ಅಗತ್ಯ ಸೂಚನೆಗಳನ್ನು ನೀಡಿದರು.
ಜಿಲ್ಲೆಯ ರೈತರಿಗೆ ಯಾವುದೇ ಕಾರಣಕ್ಕೂ ಸೇವೆ ನೀಡುವಲ್ಲಿ ವಿಳಂಬ ಮಾಡಬಾರದೆಂದು ಜಿಲ್ಲಾಡಳಿತದ ವತಿಯಿಂದ ನಿರ್ದೇಶನ ನೀಡಿದರು.
ಸಭೆಯಲ್ಲಿ ಜಿಲ್ಲೆಯ ಎಲ್ಲ ತಾಲ್ಲೂಕಿನ ಕೃಷಿ ಉಪನಿರ್ದೇಶಕರಾದ ಧನಂಜಯ, ರಾಜು, ಸಹಾಯಕ ನಿರ್ದೇಶಕಿ ದಾಕ್ಷಾಯಿಣಿ, ಹಾಗೂ ವಿವಿಧ ಇಲಾಖೆಗಳ ತಾಲೂಕು ಮಟ್ಟದ ಅಧಿಕಾರಿಗಳು ಹಾಜರಿದ್ದರು.
ಉಡುಪಿ: ಇಲ್ಲಿನ ಮಲ್ಪೆ ಕೋಡಿಬೆಂಗ್ರೆ ಬೀಷಚ್ ಸಮೀಪ ಪ್ರವಾಸಿ ದೋಣಿ ಮುಗುಚಿದ ಪರಿಣಾಮ ತೀವ್ರ ಅಸ್ವಸ್ಥಗೊಂಡಿದ್ದ ಮೈಸೂರಿನ ಇಬ್ಬರು ಮೃತಪಟ್ಟಿರುವ…
ಹಾಸನ: ನಾನು ಜೆಡಿಎಸ್ ಬಿಟ್ಟು ಹೋದರೆ ದ್ರೋಹ ಹೇಗಾಗುತ್ತದೆ? ನಾನು ಅಲ್ಲಿದ್ದರೆ ಇನ್ನೊಂದು ಸೀಟ್ ಜಾಸ್ತಿ ಆಗೋದು ಅಷ್ಟೇ. ಏನು…
ಬೆಂಗಳೂರು: ವಿಧಾನಮಂಡಲ ವಿಶೇಷ ಜಂಟಿ ಅಧಿವೇಶನದಲ್ಲಿ ಭಾಷಣ ಮಾಡದೇ ತೆರಳುತ್ತಿದ್ದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಗೆ ಕಾಂಗ್ರೆಸ್ ಸದಸ್ಯರು…
ಮಳವಳ್ಳಿ: ಮಳವಳ್ಳಿ ತಾಲ್ಲೂಕಿನ ಹಲಗೂರು ಸಮೀಪದ ಮುತ್ತತ್ತಿ ಕಾವೇರಿ ನದಿಯಲ್ಲಿ ಈಜಾಡುತ್ತಿದ್ದಾಗ ನೀರಿನ ಸೆಳೆತಕ್ಕೆ ಸಿಲುಕಿ ಯುವಕ ಮೃತಪಟ್ಟ ಘಟನೆ…
ಮಂಡ್ಯ: ಮಹಾತ್ಮ ಗಾಂಧೀಜಿ ಅವರ ವಿಚಾರಧಾರೆಗಳನ್ನು ಯುವ ಪೀಳಿಗೆಗೆ ತಲುಪಿಸುವ ಕೆಲಸವನ್ನು ಗಾಂಧಿ ಭವನದಲ್ಲಿ ಮಾಡಲಾಗುವುದು ಎಂದು ಮಂಡ್ಯ ಜಿಲ್ಲಾ…
ಮಂಡ್ಯ: ಮಂಡ್ಯ ಜಿಲ್ಲೆಯ ವ್ಯಾಪ್ತಿಯ ಗ್ರಾಮ ಪಂಚಾಯತ್ಗಳಲ್ಲಿ ದಿನಾಂಕ:31-10-2017ಕ್ಕೂ ಪೂರ್ವದಲ್ಲಿ ಗ್ರಾಮ ಪಂಚಾಯತ್ ನಿಂದ ನೇಮಕಗೊಂಡು ನೀರುಗಂಟಿ, ಸ್ವಚ್ಛತಗಾರ, ಅಟೆಂಡರ್…