ಮೈಸೂರು: ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಅನುಮತಿ ಪಡೆಯದೇ ಮೈಸೂರಿನ 9 ಕಡೆ ಅಕ್ರಮವಾಗಿ ನಡೆಯುತ್ತಿರುವ ಎಂ ಸ್ಯಾಂಡ್, ಜಲ್ಲಿ ಮತ್ತಿತರ ಕಟ್ಟಡ ಸಾಮಗ್ರಿ ಮಾರಾಟ ಕೇಂದ್ರಗಳನ್ನು ಕೂಡಲೇ ತೆರವುಗೊಳಿಸುವಂತೆ ಒತ್ತಾಯಿಸಿ ಮೈಸೂರು ಜಿಲ್ಲಾ ಲಾರಿ ಮತ್ತು ಟಿಪ್ಪರ್ ಚಾಲಕರು ಮತ್ತು ಮಾಲೀಕರ ಕ್ಷೇಮಾಭಿವೃದ್ಧಿ ಸಂಘದಿಂದ ಪ್ರತಿಭಟನೆ ನಡೆಯಿತು.
ನಗರದ ರಿಂಗ್ ರಸ್ತೆಯ ಯರಗನಹಳ್ಳಿ ಸ್ಮಶಾನದ ಸಮೀಪವಿರುವ ಮೈಸೂರು ಮೆಟ್ರೋ ಎಂ ಸ್ಯಾಂಡ್ ಡಿಪೋ ಎದುರು ಜಮಾಯಿಸಿದ ಪ್ರತಿಭಟನಾಕಾರರು, ಗಣಿ ಅಧಿಕಾರಿಗಳು ಮತ್ತು ಮಹಾನಗರಪಾಲಿಕೆ ಅಧಿಕಾರಿಗಳ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಮೈಸೂರು ಮೆಟ್ರೋ ಎಂ ಸ್ಯಾಂಡ್ ಡಿಪೋದವರು ಸಾಮಾಜಿಕ ಜಾಲತಾಣ ಮತ್ತು ಕರಪತ್ರಗಳ ಮೂಲಕ ಕಡಿಮೆ ಬೆಲೆಗೆ ಕಟ್ಟಡ ನಿರ್ಮಾಣ ಸಾಮಾಗ್ರಿಗಳನ್ನು ನೀಡುವುದಾಗಿ ಗ್ರಾಹಕರನ್ನು ಆಕರ್ಷಿಸಿ ಕಳಪೆ ಗುಣಮಟ್ಟದ ಎಂ ಸ್ಯಾಂಡ್ ಮತ್ತಿತರ ಕಟ್ಟಡ ನಿರ್ಮಾಣ ವಸ್ತುಗಳನ್ನು ಮಾರುತ್ತಿದ್ದಾರೆ. ತೂಕದಲ್ಲೂ ಜನರಿಗೆ ಮೋಸ ಮಾಡುತ್ತಿದ್ದಾರೆ. ಕೇವಲ ಕಡಿಮೆ ಬೆಲೆ ಎಂದು ಇವರ ಆಕರ್ಷಣೆಗೆ ಒಳಗಾದ ಗ್ರಾಹಕರು ತಮಗೆ ಅರಿವಿಲ್ಲದಂತೆ ನಷ್ಟ ಅನುಭವಿಸುತ್ತಿದ್ದು, ಈ ಬಗ್ಗೆ 3 ತಿಂಗಳ ಹಿಂದೆಯೇ ಗಣಿ ಇಲಾಖೆಗೆ ಮಾಹಿತಿ ನೀಡಿದ್ದರೂ ಯಾವುದೇ ಕ್ರಮ ಕೈಗೊಂಡಿಲ್ಲ. ಇಂತಹ ಬೃಹತ್ ಮಾರಾಟ ಕೇಂದ್ರಗಳಿಂದ ನಮ್ಮಂತಹ ಸಣ್ಣ ಪುಟ್ಟ ಲಾರಿ ಮಾಲೀಕರು ಮತ್ತು ಚಾಲಕರ ಹೊಟ್ಟೆಯ ಮೇಲೆ ಹೊಡೆದಂತಾಗುತ್ತಿದೆ ಎಂದು ಕಿಡಿ ಕಾರಿದರು.
ಸಂಘದ ಅಧ್ಯಕ್ಷ ಎನ್.ರಾಜೇಂದ್ರ, ಕಾರ್ಯದರ್ಶಿ ನಾಗಚಂದ್ರ, ಸಹ ಕಾರ್ಯದರ್ಶಿ ಮಹೇಶ್, ರೈತ ಮುಖಂಡ ಇ.ಎನ್.ಕೃಷ್ಣೇಗೌಡ, ಕಾನೂನು ಸಲಹೆಗಾರ ಸಿದ್ದಯ್ಯ ನಿರ್ದೇಶಕರಾದ ಮಹದೇವಸ್ವಾಮಿ, ಲೋಕೇಶ, ಮಂಜು, ಮಹದೇವ, ಶಂಕರ್, ಪ್ರಕಾಶ್, ಶಿವಣ್ಣ, ಪ್ರದೀಪ್, ಯೋಗೇಶ್ , ಮಲ್ಲೇಶ್ ಸೇರಿದಂತೆ ಹಲವರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.
.
ಬೆಂಗಳೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಪ್ರಕರಣದಲ್ಲಿ ತಮ್ಮ ಹೆಸರನ್ನು ಕೆಲವರು ಅನಗತ್ಯವಾಗಿ ಉಲ್ಲೇಖಿಸುತ್ತಿದ್ದಾರೆ. ನಾನು ಯಾವುದೇ ರೀತಿಯ ತಪ್ಪು ಮಾಡಿಲ್ಲ.…
ಲಕ್ನೋ: ಜೂನ್.21ರಂದು ನಡೆಯಲಿರುವ ನೀಟ್-ಯುಜಿ ಮರುಪರೀಕ್ಷೆಗೆ ಹಾಜರಾಗುವ ಎಲ್ಲಾ ವಿದ್ಯಾರ್ಥಿಗಳ ಬಸ್ ಪ್ರಯಾಣದ ದರದಲ್ಲಿ ಶೇ.50ರಷ್ಟು ರಿಯಾಯಿತಿ ನೀಡುವುದಾಗಿ ಉತ್ತರ…
ಮುಂಬೈ: ದೇಶದಲ್ಲಿ ಮುಂಗಾರು ಪ್ರವೇಶಿದರೂ ಮುಂಬೈನಲ್ಲಿ ಮಳೆಯ ಕೊರತೆ ಎದುರಾಗಿದೆ. ಮಳೆ ಕೊರತೆ ಎದುರಾದ ಪರಿಣಾಮ ಜಲಾಶಯಗಳಲ್ಲಿ ನೀರಿನ ಮಟ್ಟ…
ಎಚ್.ಎಸ್.ದಿನೇಶ್ಕುಮಾರ್ ಲಿಕ್ಕರ್ ಗ್ಯಾರೇಜ್, ಫಾಕ್ಸ್ ಡೆನ್ಗೆ ಮಾತ್ರ ಅನುಮತಿ; ನೋಟಿಸ್ ಜಾರಿ ಮಾಡಿ ಸುಮ್ಮನಾಗಿದ್ದ ಅಧಿಕಾರಿಗಳು?; ಅಬಕಾರಿ ಡಿಸಿ ಅಮಾನತ್ತಿಗೆ…
ಚಾಮರಾಜನಗರ ತಾಲ್ಲೂಕಿನ ಮಸಾಣಪುರ ಗ್ರಾಮದಲ್ಲಿ ಬಾಬಾ ಸಾಹೇಬ ಡಾ.ಅಂಬೇಡ್ಕರ್ರವರ ಭಾವಚಿತ್ರಕ್ಕೆ ಅಪಮಾನ ಮಾಡಿರುವ ಘಟನೆ ನಿಜಕ್ಕೂ ತಲೆತಗ್ಗಿಸುವಂಥ ಹೇಯ ಕೃತ್ಯವಾಗಿದೆ.ಈ…
‘ಗಿಡವಾಗಿ ಬಗ್ಗದ್ದು ಮರವಾಗಿ ಬಗ್ಗೀತೇ’ ಎಂಬ ಗಾದೆಯ ಮಾತು ನಿಜಕ್ಕೂ ಇಂದಿನ ಕಾಲಘಟ್ಟಕ್ಕೆ ಹೆಚ್ಚಾಗಿ ಅನ್ವಯಿಸುತ್ತದೆ. ಏಕೆಂದರೆ ಸಮಯ ಪಾಲನೆ…