ಮೈಸೂರು

ಭೂ ಸಮಸ್ಯೆ ಬಗೆಹರಿಸುವಂತೆ ಒತ್ತಾಯಿಸಿ ಮೈಮೇಲೆ ಸಗಣಿ ಸುರಿದುಕೊಂಡು ಪ್ರತಿಭಟನೆ

ಪಿರಿಯಾಪಟ್ಟಣ: ಕಳೆದ ಮೂರು ವರ್ಷಗಳಿಂದ ತಾಲೂಕು ಆಡಳಿತದ ಮುಂಭಾಗ ತಾಲ್ಲೂಕಿನ ಭೂ ಸಮಸ್ಯೆ ಸೇರಿದಂತೆ ಇತರೆ ಮೂಲಭೂತ ಸಮಸ್ಯೆಗಳನ್ನು ಬಗೆಹರಿಸುವಂತೆ ಒತ್ತಾಯಿಸಿ ಪ್ರತಿಭಟನೆ ಮಾಡುತ್ತಿದ್ದರೂ ಕೂಡ ಸಮಸ್ಯೆ ಬಗೆಹರಿಸಲು ನಿರ್ಲಕ್ಷ ವಹಿಸುತ್ತಿರುವ ತಾಲೂಕು ಆಡಳಿತದ ವಿರುದ್ಧ ಪ್ರತಿಭಟನಾ ನಿರತರು ಮೈಮೇಲೆ ಸಗಣಿ ಸುರಿದುಕೊಂಡು ಪ್ರತಿಭಟನೆ ನಡೆಸಿದ ಪ್ರಕರಣ ಜರುಗಿದೆ.

ತಾಲೂಕು ಆಡಳಿತದ ಮುಂಭಾಗ ಕಳೆದ ಮೂರು ವರ್ಷಗಳಿಂದ ದಸಂಸ ಮುಖಂಡ ಸಿ.ಎಸ್. ಜಗದೀಶ್ ಮತ್ತು ಮುಮ್ಮಡಿ ಕಾವಲ್ ದೊಡ್ಡಯ್ಯ ನೇತೃತ್ವದಲ್ಲಿ ತಾಲೂಕಿನ ದಲಿತರ ಮತ್ತು ರೈತರ ಭೂ ಸಮಸ್ಯೆಗಳನ್ನು ಬಗೆಹರಿಸುವಂತೆ ಮತ್ತು ಗ್ರಾಮ ಪಂಚಾಯಿತಿಗಳಲ್ಲಿ ಆಗಿರುವ ಭ್ರಷ್ಟಚಾರವನ್ನು ತಡೆಗಟ್ಟುವಂತೆ ಪ್ರತಿಭಟನಾ ಧರಣಿ ಮಾಡಲಾಗುತ್ತಿದೆ.

ತಾಲ್ಲೂಕಿನ ದೊಡ್ಡ ಹೊಸೂರು ಗ್ರಾಮದ ವಿಧವೆ ಚೆನ್ನಮ್ಮ ರವರಿಗೆ ಪಿಟಿಸಿಎಲ್ ಕಾಯ್ದೆಯಡಿ ಆದೇಶವಾಗಿರುವ ಭೂಮಿಯ ಸಮಸ್ಯೆಯನ್ನು ಬಗೆಹರಿಸಬೇಕು. ಚನ್ನಕಲ್ ಕಾವಲು ಗ್ರಾಮದ ಸರ್ವೇ ನಂಬರ್ 1 ಮತ್ತು 3ರ ಭೂಮಿ ಸಮಸ್ಯೆ ಬಗೆಹರಿಸಬೇಕು ಮತ್ತು ಸೂಳೆಕೋಟೆ ಸರ್ವೆ ನಂಬರ್ 10 ರ ದಾಖಲಾತಿಗಳನ್ನು ತಿರುಚಿದವರ ಮೇಲೆ ಕಾನೂನು ಕ್ರಮವಾಗಬೇಕು ಹಾಗೂ ಕೊಣಸೂರು ಗ್ರಾಮದ ಸರ್ವೇ ನಂಬರ್ 138 ಮತ್ತು 93ರ ಭೂಮಿಯನ್ನು ಉಳುಮೆ ಮಾಡುತ್ತಿರುವ ರೈತರಿಗೆ ಸಾಗುವಳಿ ಮಂಜೂರು ಮಾಡಿಸಿ, ಕೊಪ್ಪ ಗೆರಾಸಿಯ ಕಾಲೋನಿಯಲ್ಲಿ ವಾಸ ಮಾಡುತ್ತಿರುವ ಗಿರಿಜನರಿಗೆ ನಿವೇಶನಗಳನ್ನು ವ್ಯವಸ್ಥೆ ಮಾಡಿಸಬೇಕು ಎಂಬುದು ಪ್ರತಿಭಟನಾ ನಿರತರ ಒತ್ತಾಯವಾಗಿದೆ.

ಸರ್ಕಾರ ಹಾಗೂ ಉಚ್ಚ ನ್ಯಾಯಾಲಯವು ಧರಾಖಸ್ತು ಮೂಲಕ ಬಂದಂತಹ ಜಮೀನನ್ನು ಪಕ್ಕ ಪೋಡು ದುರಸ್ತಿ ಸಂಬಂಧ ಪಕ್ಕಪೋಡು ದುರಸ್ತಿ ಮಾಡಿ ರೈತರಿಗೆ ಅನುಕೂಲ ಮಾಡಿಕೊಡುವಂತೆ ಅಧಿಕಾರಿಗಳಿಗೆ ಆದೇಶ ಮಾಡಿ ವರ್ಷಗಳೇ ಕಳೆದಿದೆ.ಆದರೆ ಈ ಆದೇಶಗಳನ್ನು ಗಾಳಿಗೆ ದೂರಿ ದಲಿತರಿಗೆ, ರೈತರಿಗೆ ಅಧಿಕಾರಿ ವರ್ಗ ತೊಂದರೆ ನೀಡುತ್ತಿದ್ದಾರೆ. ಇದರಿಂದ್ದಾಗಿ ನಮ್ಮಗಳ ಹೆಸರಿಗೆ ದಾಖಲೆ ಮಾಡಿಸಿಕೊಳ್ಳಲು ಆಗದೆ, ಹಂಚಿಕೆ ಮಾಡಿಕೊಳ್ಳಲು ಆಗದೆ ಸಂಕಷ್ಟ ಅನುಭವಿಸಬೇಕಾಗಿದೆ ಹಾಗೂ ಪ್ರಭಾವಿಗಳು ಸರ್ಕಾರಿ ಕೆರೆ ಕಟ್ಟೆ ಗೋಮಾಳ ಜಾಗಗಳನ್ನು ಒತ್ತುವರಿ ಮಾಡಿಕೊಂಡಿರುವ ಬಗ್ಗೆ ಕಣ್ಣಿಗೆ ಕಂಡರೂ ಕಾಣದಂತೆ ಅಧಿಕಾರಿಗಳು ವರ್ತಿಸುತ್ತಿದ್ದಾರೆ. ನಮ್ಮ ಹೋರಾಟದ ಬೇಡಿಕೆಗಳನ್ನು ತಾಲ್ಲೂಕಿನ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕು ಸ್ಥಾಪನೆಗೆ ಆಗಮಿಸುತ್ತಿರುವ ಮುಖಮಂತ್ರಿ, ಸಚಿವರಿಗೆ ಮನವರಿಕೆ ಮಾಡಿಕೊಡಲು ಅವಕಾಶ ಕಲ್ಪಿಸುವಂತ್ತೆ ತಹಸೀಲ್ದಾರ್ ನಿಸರ್ಗ ಪ್ರಿಯಾ ರವರನ್ನು ಕೇಳಿದರೆ ಅವಕಾಶ ನಿರ್ಲಕ್ಷಿಸಿ ರೈತ ದಲಿತ ವಿರೋಧಿ ನೀತಿ ಅನುಸರಿಸುತ್ತಿದ್ದಾರೆ ಎಂದು ದೂರಿದರು.

ಪ್ರತಿಭಟನೆಯಲ್ಲಿ ಮೂರ್ತಿ ಕದರೇಗೌಡ ಕೊಪ್ಪಲು, ವಾಸುರ, ಕೃಷ್ಣ, ರಾಮಚಂದ್ರ, ಮುಮ್ಮಡಿಕಾವಲ್, ಕೃಷ್ಣ ಮೂರ್ತಿ, ನಾರಾಯಣ ಕೆ. ಬಸವನಳ್ಳಿ,ರಾಜಯ್ಯ ತರಿಕಲ್ ಕಾಲೋನಿ,ಮಹಾದೇವಮ್ಮ ಭಾಗವಹಿಸಿದ್ದರು.

ಆಂದೋಲನ ಡೆಸ್ಕ್

Recent Posts

ಕೃಷಿ ಕ್ಷೇತ್ರ ಅಭಿವೃದ್ಧಿ ಅಪರಿಮಿತ ಸಾಧನೆ : ಸಚಿವ ಎನ್ ಚಲುವರಾಯಸ್ವಾಮಿ

ಬೆಂಗಳೂರು : ಕೃಷಿ ಕ್ಷೇತ್ರದ ಅಭಿವೃದ್ಧಿ-ರೈತರ ಕಲ್ಯಾಣದಲ್ಲಿ ಕರ್ನಾಟಕ ದೇಶದಲ್ಲೆ ಅತಿ ಹೆಚ್ಚಿನ ಸಾಧನೆ ಮಾಡಿದ ರಾಜ್ಯವಾಗಿದ್ದು, ಬೆಳೆ ವಿಮೆಯಲ್ಲಿ…

7 hours ago

ವಿದೇಶಿ ಉದ್ಯೋಗ ಆಮಿಷ : ವಿದ್ಯಾರ್ಥಿಗೆ 1.80 ಕೋಟಿ ವಂಚನೆ!

ಮೈಸೂರು : ವಿದೇಶದಲ್ಲಿ ಉದ್ಯೋಗ ಕೊಡಿಸುತ್ತೇನೆ ಎಂದು ನಂಬಿಸಿ ಕೆರಳ ಮೂಲದ ಇಬ್ಬರು ದುಷ್ಕರ್ಮಿಗಳು ನಗರದ ವಿದ್ಯಾರ್ಥಿಯೋರ್ವನಿಗೆ 1.80 ಕೋಟಿ…

7 hours ago

ಟಿ20 ವಿಶ್ವಕಪ್ 2026 : ಕಣದಲ್ಲಿವೆ 20 ತಂಡಗಳು

ಕೊಲಂಬೊ : ಐಸಿಸಿ ಪುರುಷರ ಟಿ20 ವಿಶ್ವಕಪ್ 2026ರ ಹತ್ತನೇ ಆವೃತ್ತಿ ನಾಳೆ (ಫೆಬ್ರವರಿ 7) ಭಾರತ ಮತ್ತು ಶ್ರೀಲಂಕಾ…

8 hours ago

ಅರಣ್ಯ ಭೂಮಿಯಲ್ಲಿ ನಿಯಮ ಬಾಹಿರ ರೆಸಾರ್ಟ್ ನಿರ್ಮಿಸಿದರೆ ನಿರ್ದಾಕ್ಷಿಣ್ಯ ಕ್ರಮ : ನಿತೇಶ್‌ ಪಾಟೀಲ್‌ ಎಚ್ಚರಿಕೆ

ಚಾಮರಾಜನಗರ : ಅರಣ್ಯ ಭೂಮಿಯಲ್ಲಿ ನಿಯಮಬಾಹಿರವಾಗಿ ರೆಸಾರ್ಟ್, ಹೋಂ ಸ್ಟೇ, ವಾಣಿಜ್ಯ ಚಟುವಟಿಕೆಗಳು ನಡೆಯುತ್ತಿದ್ದರೆ ನಿರ್ದಾಕ್ಷಿಣ್ಯ ಕ್ರಮ ಜರುಗಿಸಲಾಗುವುದು ಎಂದು…

8 hours ago

ಉದ್ಯಮಿ ಅರವಿಂದ್‌ ರೆಡ್ಡಿಗೆ ಕೊಲೆ ಬೆದರಿಕೆ ; ಆರೋಪಿ ಬಂಧನ

ಬೆಂಗಳೂರು : ವಿಆರ್ ಗ್ರೂಪ್‌ನ ಸಂಸ್ಥಾಪಕ ಹಾಗೂ ರಿಯಲ್ ಎಸ್ಟೇಟ್ ಉದ್ಯಮಿ ಅರವಿಂದ್ ವೆಂಕಟೇಶ್ ರೆಡ್ಡಿ ಅವರಿಗೆ ಕೊಲೆ ಬೆದರಿಕೆ…

9 hours ago

ಯತೀಂದ್ರ ನಮ್ಮ ಹೈಕಮಾಂಡ್‌, ಅವರು ಹೇಳಿದ ಮೇಲೆ ಇನ್ನೇನಿದೆ : ಡಿಸಿಎಂ ಡಿಕೆಶಿ

ಮಂಗಳೂರು : ಯತೀಂದ್ರ ಸಿದ್ದರಾಮಯ್ಯ ಅವರೇ ಈಗ ನಮ್ಮ ಹೈಕಮಾಂಡ್. ಅವರು ಹೇಳಿದ ಮೇಲೆ ಮುಗಿಯಿತು. ಈ ಬಗ್ಗೆ ನನಗೆ…

10 hours ago