ಮೈಸೂರು

ಭೂ ಸಮಸ್ಯೆ ಬಗೆಹರಿಸುವಂತೆ ಒತ್ತಾಯಿಸಿ ಮೈಮೇಲೆ ಸಗಣಿ ಸುರಿದುಕೊಂಡು ಪ್ರತಿಭಟನೆ

ಪಿರಿಯಾಪಟ್ಟಣ: ಕಳೆದ ಮೂರು ವರ್ಷಗಳಿಂದ ತಾಲೂಕು ಆಡಳಿತದ ಮುಂಭಾಗ ತಾಲ್ಲೂಕಿನ ಭೂ ಸಮಸ್ಯೆ ಸೇರಿದಂತೆ ಇತರೆ ಮೂಲಭೂತ ಸಮಸ್ಯೆಗಳನ್ನು ಬಗೆಹರಿಸುವಂತೆ ಒತ್ತಾಯಿಸಿ ಪ್ರತಿಭಟನೆ ಮಾಡುತ್ತಿದ್ದರೂ ಕೂಡ ಸಮಸ್ಯೆ ಬಗೆಹರಿಸಲು ನಿರ್ಲಕ್ಷ ವಹಿಸುತ್ತಿರುವ ತಾಲೂಕು ಆಡಳಿತದ ವಿರುದ್ಧ ಪ್ರತಿಭಟನಾ ನಿರತರು ಮೈಮೇಲೆ ಸಗಣಿ ಸುರಿದುಕೊಂಡು ಪ್ರತಿಭಟನೆ ನಡೆಸಿದ ಪ್ರಕರಣ ಜರುಗಿದೆ.

ತಾಲೂಕು ಆಡಳಿತದ ಮುಂಭಾಗ ಕಳೆದ ಮೂರು ವರ್ಷಗಳಿಂದ ದಸಂಸ ಮುಖಂಡ ಸಿ.ಎಸ್. ಜಗದೀಶ್ ಮತ್ತು ಮುಮ್ಮಡಿ ಕಾವಲ್ ದೊಡ್ಡಯ್ಯ ನೇತೃತ್ವದಲ್ಲಿ ತಾಲೂಕಿನ ದಲಿತರ ಮತ್ತು ರೈತರ ಭೂ ಸಮಸ್ಯೆಗಳನ್ನು ಬಗೆಹರಿಸುವಂತೆ ಮತ್ತು ಗ್ರಾಮ ಪಂಚಾಯಿತಿಗಳಲ್ಲಿ ಆಗಿರುವ ಭ್ರಷ್ಟಚಾರವನ್ನು ತಡೆಗಟ್ಟುವಂತೆ ಪ್ರತಿಭಟನಾ ಧರಣಿ ಮಾಡಲಾಗುತ್ತಿದೆ.

ತಾಲ್ಲೂಕಿನ ದೊಡ್ಡ ಹೊಸೂರು ಗ್ರಾಮದ ವಿಧವೆ ಚೆನ್ನಮ್ಮ ರವರಿಗೆ ಪಿಟಿಸಿಎಲ್ ಕಾಯ್ದೆಯಡಿ ಆದೇಶವಾಗಿರುವ ಭೂಮಿಯ ಸಮಸ್ಯೆಯನ್ನು ಬಗೆಹರಿಸಬೇಕು. ಚನ್ನಕಲ್ ಕಾವಲು ಗ್ರಾಮದ ಸರ್ವೇ ನಂಬರ್ 1 ಮತ್ತು 3ರ ಭೂಮಿ ಸಮಸ್ಯೆ ಬಗೆಹರಿಸಬೇಕು ಮತ್ತು ಸೂಳೆಕೋಟೆ ಸರ್ವೆ ನಂಬರ್ 10 ರ ದಾಖಲಾತಿಗಳನ್ನು ತಿರುಚಿದವರ ಮೇಲೆ ಕಾನೂನು ಕ್ರಮವಾಗಬೇಕು ಹಾಗೂ ಕೊಣಸೂರು ಗ್ರಾಮದ ಸರ್ವೇ ನಂಬರ್ 138 ಮತ್ತು 93ರ ಭೂಮಿಯನ್ನು ಉಳುಮೆ ಮಾಡುತ್ತಿರುವ ರೈತರಿಗೆ ಸಾಗುವಳಿ ಮಂಜೂರು ಮಾಡಿಸಿ, ಕೊಪ್ಪ ಗೆರಾಸಿಯ ಕಾಲೋನಿಯಲ್ಲಿ ವಾಸ ಮಾಡುತ್ತಿರುವ ಗಿರಿಜನರಿಗೆ ನಿವೇಶನಗಳನ್ನು ವ್ಯವಸ್ಥೆ ಮಾಡಿಸಬೇಕು ಎಂಬುದು ಪ್ರತಿಭಟನಾ ನಿರತರ ಒತ್ತಾಯವಾಗಿದೆ.

ಸರ್ಕಾರ ಹಾಗೂ ಉಚ್ಚ ನ್ಯಾಯಾಲಯವು ಧರಾಖಸ್ತು ಮೂಲಕ ಬಂದಂತಹ ಜಮೀನನ್ನು ಪಕ್ಕ ಪೋಡು ದುರಸ್ತಿ ಸಂಬಂಧ ಪಕ್ಕಪೋಡು ದುರಸ್ತಿ ಮಾಡಿ ರೈತರಿಗೆ ಅನುಕೂಲ ಮಾಡಿಕೊಡುವಂತೆ ಅಧಿಕಾರಿಗಳಿಗೆ ಆದೇಶ ಮಾಡಿ ವರ್ಷಗಳೇ ಕಳೆದಿದೆ.ಆದರೆ ಈ ಆದೇಶಗಳನ್ನು ಗಾಳಿಗೆ ದೂರಿ ದಲಿತರಿಗೆ, ರೈತರಿಗೆ ಅಧಿಕಾರಿ ವರ್ಗ ತೊಂದರೆ ನೀಡುತ್ತಿದ್ದಾರೆ. ಇದರಿಂದ್ದಾಗಿ ನಮ್ಮಗಳ ಹೆಸರಿಗೆ ದಾಖಲೆ ಮಾಡಿಸಿಕೊಳ್ಳಲು ಆಗದೆ, ಹಂಚಿಕೆ ಮಾಡಿಕೊಳ್ಳಲು ಆಗದೆ ಸಂಕಷ್ಟ ಅನುಭವಿಸಬೇಕಾಗಿದೆ ಹಾಗೂ ಪ್ರಭಾವಿಗಳು ಸರ್ಕಾರಿ ಕೆರೆ ಕಟ್ಟೆ ಗೋಮಾಳ ಜಾಗಗಳನ್ನು ಒತ್ತುವರಿ ಮಾಡಿಕೊಂಡಿರುವ ಬಗ್ಗೆ ಕಣ್ಣಿಗೆ ಕಂಡರೂ ಕಾಣದಂತೆ ಅಧಿಕಾರಿಗಳು ವರ್ತಿಸುತ್ತಿದ್ದಾರೆ. ನಮ್ಮ ಹೋರಾಟದ ಬೇಡಿಕೆಗಳನ್ನು ತಾಲ್ಲೂಕಿನ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕು ಸ್ಥಾಪನೆಗೆ ಆಗಮಿಸುತ್ತಿರುವ ಮುಖಮಂತ್ರಿ, ಸಚಿವರಿಗೆ ಮನವರಿಕೆ ಮಾಡಿಕೊಡಲು ಅವಕಾಶ ಕಲ್ಪಿಸುವಂತ್ತೆ ತಹಸೀಲ್ದಾರ್ ನಿಸರ್ಗ ಪ್ರಿಯಾ ರವರನ್ನು ಕೇಳಿದರೆ ಅವಕಾಶ ನಿರ್ಲಕ್ಷಿಸಿ ರೈತ ದಲಿತ ವಿರೋಧಿ ನೀತಿ ಅನುಸರಿಸುತ್ತಿದ್ದಾರೆ ಎಂದು ದೂರಿದರು.

ಪ್ರತಿಭಟನೆಯಲ್ಲಿ ಮೂರ್ತಿ ಕದರೇಗೌಡ ಕೊಪ್ಪಲು, ವಾಸುರ, ಕೃಷ್ಣ, ರಾಮಚಂದ್ರ, ಮುಮ್ಮಡಿಕಾವಲ್, ಕೃಷ್ಣ ಮೂರ್ತಿ, ನಾರಾಯಣ ಕೆ. ಬಸವನಳ್ಳಿ,ರಾಜಯ್ಯ ತರಿಕಲ್ ಕಾಲೋನಿ,ಮಹಾದೇವಮ್ಮ ಭಾಗವಹಿಸಿದ್ದರು.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಪ್ರಕೃತಿ ಪ್ರೀತಿ ಅತಿಮುಖ್ಯ

ಇಂದಿನ ಧಾವಂತದ ಬದುಕಿನಲ್ಲಿ ನಾವೆಲ್ಲರೂ ಆಸೆಗಳ ಬೆನ್ನೇರಿ ಓಡುತ್ತಿದ್ದು, ನಮ್ಮ ಉಸಿರಿಗೆ ಆಧಾರವಾಗಿರುವ ಪ್ರಕೃತಿಯನ್ನು ಮರೆಯುತ್ತಿದ್ದೇವೆ. ಗಾಳಿ, ನೀರು, ಬೆಳಕಿಲ್ಲದೆ…

13 hours ago

ಓದುಗರ ಪತ್ರ: ಪ್ಲಾಸ್ಟಿಕ್ ನೋಟುಗಳ ಬಿಡುಗಡೆ ನಿರ್ಧಾರ ದೂರದೃಷ್ಟಿಯ ಹೆಜ್ಜೆ

ಆರ್‌ಬಿಐ ಮುಂದಿನ ಹಣಕಾಸು ವರ್ಷದಿಂದ (೨೦೨೭-೨೮) ಪ್ಲಾಸ್ಟಿಕ್ (ಪಾಲಿಮರ್) ನೋಟುಗಳನ್ನು ಚಲಾವಣೆಗೆ ತರಲು ನಿರ್ಧರಿಸಿರುವುದು ಸ್ವಾಗತಾರ್ಹ ಮತ್ತು ದೂರದೃಷ್ಟಿಯ ಹೆಜ್ಜೆಯಾಗಿದೆ.…

13 hours ago

ಓದುಗರ ಪತ್ರ: ಸಮಾನತೆ ಮಾತನಾಡುವವರ ನಡವಳಿಕೆ ಇದೇನಾ?

ರಾಜ್ಯ ಸಚಿವ ಸಂಪುಟದಲ್ಲಿ ಮಹಿಳೆಯರಿಗೆ ಪ್ರಾತಿನಿಧ್ಯ ನೀಡದಿರುವುದು ಮಹಿಳೆಯರಿಗೆ ಮಾಡಿದ ಘೋರ ಅನ್ಯಾಯ. ಅಧಿಕಾರಕ್ಕೆ ಬರುವ ಮುನ್ನ ಮಹಿಳೆಯರ ಹೆಸರಿನಲ್ಲಿ…

13 hours ago

ಚಲನಚಿತ್ರ: ಪ್ರಮಾಣೀಕರಣ ಮಂಡಳಿಯದೇ ಅಂತಿಮ ತೀರ್ಪು

ವೈಡ್‌ ಆಂಗಲ್:‌ ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ  ಇಂದು ಬಿಡುಗಡೆಯಾಗುತ್ತಿರುವ ‘ ಬಾಸ್’ಎಂದೋ ತೆರೆಗೆ ಬರಬೇಕಾಗಿತ್ತು. ಆದರೆ ಚಿತ್ರದ ಹೆಸರು,…

13 hours ago

ಕೊಡಗು ಜಿಲ್ಲೆಯಲ್ಲಿ ಶೇ.37ರಷ್ಟು ಮಳೆ ಕೊರತೆ

ನವೀನ್ ಡಿಸೋಜ ಕಳೆದ ಕೆಲ ದಿನಗಳಲ್ಲಿ ಉತ್ತಮ ಮಳೆ; ವಾಡಿಕೆ ಮಳೆ ಕೊರತೆ ವಿರಾಜಪೇಟೆ ತಾಲ್ಲೂಕಿನಲ್ಲಿ ಅತಿ ಹೆಚ್ಚು ಶೇ.೪೩…

13 hours ago

ಕಬಿನಿ ಜಲಾಶಯದಿಂದ ಹರಿಸುತ್ತಿದ್ದ ನೀರು ಸ್ಥಗಿತ

ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕಿನ ಕಬಿನಿ ಜಲಾಶಯಕ್ಕೆ ಬರುತ್ತಿದ್ದ ಒಳಹರಿವ ಇಳಿಮುಖವಾಗಿರುವ ಹಿನ್ನೆಲೆಯಲ್ಲಿ ಹೊರಹರಿವು ಸ್ಥಗಿತಗೊಳಿಸಿ ಜಲಾಶಯದ ಕ್ರಸ್ಟ್‌ಗೇಟ್‌ಗಳನ್ನು ಬಂದ್…

14 hours ago