various demands at mysuru
ಮೈಸೂರು: ರಾಜ್ಯ ಸರ್ಕಾರ ಪಂಪ್ ಸೆಟ್ಗಳಿಗೆ ಡಿಜಿಟಲ್ ಮೀಟರ್ ಅಳವಡಿಸಲು 10ಸಾವಿರ ರೂ.ಠೇವಣಿ ಶುಲ್ಕ ನಿಗದಿಪಡಿಸಿರುವುದನ್ನು ಹಿಂಪಡೆಯಬೇಕು. ವಿದ್ಯುತ್ ಕ್ಷೇತ್ರವನ್ನು ಖಾಸಗಿಕರಣಗೊಳಿಸಿದಂತೆ, ವಿದ್ಯುತ್ ಸಂಪರ್ಕಕ್ಕೆ ಆಧಾರ್ ಜೋಡಣೆ ರದ್ದುಗೊಳಿಸಿ ರೈತರಿಗೆ ಸಮರ್ಪಕ ಯೋಗ್ಯ ವಿದ್ಯುತ್ ಸಮರ್ಪಕವಾಗಿ ನೀಡಲು ವಿದ್ಯುತ್ ಲೈನ್ ಗಳನ್ನು ಸುಸ್ಥಿತಿಯಲ್ಲಿಡುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ವತಿಯಿಂದ ವಿಜಯನಗರದ ಎರಡನೇ ಹಂತದಲ್ಲಿರುವ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತದ ವ್ಯವಸ್ಥಾಪಕ ನಿರ್ದೇಶಕರಿಗೆ ಮನವಿ ಸಲ್ಲಿಸಲಾಯಿತು.
ನಿಗಮದ ಎಂಡಿ ಕೆ.ಎಂ. ಮುನಿಗೋಪಾಲರಾಜು ಅವರಿಗೆ ಮನವಿ ಪತ್ರವನ್ನು ಸಲ್ಲಿಸಿ ಮನವಿ ಪತ್ರವನ್ನು ಸಲ್ಲಿಸಿದರು.
ಈ ವೇಳೆ ಮಾತನಾಡಿದ ಹಸಿರು ಸೇನೆಯ ಕಾರ್ಯಾಧ್ಯಕ್ಷ ಮೋಹನ್ ರಾಜ್, ರಾಜ್ಯ ಸರ್ಕಾರ ಪಂಪ್ ಸೆಟ್ಗಳಿಗೆ ಡಿಜಿಟಲ್ ಮೀಟರ್ ಅಳವಡಿಸಲು 10ಸಾವಿರ ರೂ. ಡಿಪಾಸಿಟ್ ಶುಲ್ಕ ನಿಗದಿಪಡಿಸಿರುವುದನ್ನು ಹಿಂಪಡೆಯಬೇಕು. ವಿದ್ಯುತ್ ಕ್ಷೇತ್ರವನ್ನು ಖಾಸಗಿಕರಣಗೊಳಿಸಿದಂತೆ, ವಿದ್ಯುತ್ ಸಂಪರ್ಕಕ್ಕೆ ಆಧಾರ್ ಜೋಡಣೆ ರದ್ದುಗೊಳಿಸಿ ರೈತರಿಗೆ ಸಮರ್ಪಕ ಯೋಗ್ಯ ವಿದ್ಯುತ್ನ್ನು ಬೆಳಿಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆಯ ವರೆಗೆ ನೀಡಲು ವಿದ್ಯುತ್ ಲೈನ್ ಗಳನ್ನು ಸುಸ್ಥಿತಿಯಲ್ಲಿಡುವಂತೆ ಒತ್ತಾಯಿಸಿದರು.
ಇದಕ್ಕೆ ಅಧಿಕಾರಿಗಳು ಒಂದು ತಿಂಗಳ ಗಡುವು ಪಡೆದಿದ್ದು ಅಷ್ಟರೊಳಗೆ ನಮ್ಮ ಬೇಡಿಕೆಗಳನ್ನು ಈಡೇರಿಸದಿದ್ದರೆ ಸುಮಾರು ಸಾವಿರಕ್ಕೂ ಹೆಚ್ಚು ರೈತರು ಕಚೇರಿಗೆ ಮುತ್ತಿಗೆ ಹಾಕಲಾಗುವುದು ಎಂದು ರಾಜ್ಯ ಸರ್ಕಾರಕ್ಕೆ ಮತ್ತು ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು. ಸಂಘದ ಅಧ್ಯಕ್ಷ ಲೋಕೇಶ್, ಅಂಜನ್ ಕುಮಾರ್ ಮತ್ತಿತರರು ಹಾಜರಿದ್ದರು.
ಮೈಸೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ (ಮುಡಾ) ನಡೆದಿದೆ ಎನ್ನಲಾದ ಹಗರಣದ ಸಂಬಂಧ ಹೆಚ್ಚಿನ ವಿಚಾರಣೆಗಾಗಿ ಮಾಜಿ ಆಯುಕ್ತ ದಿನೇಶ್…
ಮಡಿಕೇರಿ : ದುಬಾರೆ ಶಿಬಿರದ ಸಾಕಾನೆ ತಕ್ಷ ಅನಾರೋಗ್ಯದಿಂದ ಸೋಮವಾರ ರಾತ್ರಿ ಮೃತಪಟ್ಟಿದೆ. ಡಿ.೮ರಂದು ರಾತ್ರಿ ೯.೩೦ರ ಸಮಯದಲ್ಲಿ ತಕ್ಷ…
ಮೈಸೂರು : ಕೇಳಿದ ತಕ್ಷಣ ಹಣ ಕೊಡಲಿಲ್ಲ ಎಂಬ ಕಾರಣಕ್ಕಾಗಿ ಸ್ನೇಹಿತನ ಮೇಲೆ ಯುವಕನೊಬ್ಬ ಚಾಕುವಿನಿಂದ ಇರಿದಿರುವ ಘಟನೆ ನಗರದಲ್ಲಿ…
ಮೈಸೂರು : ಲೈಂಗಿಕವಾಗಿ ಸಹಕರಿಸಿದಲ್ಲಿ ಚೆನ್ನಾಗಿ ನೋಡಿಕೊಳ್ಳುತ್ತೀನಿ ಎಂದು ಮಹಿಳಾ ಉದ್ಯೋಗಿಗೆ ಕಿರುಕುಳ ನೀಡಿದ ಖಾಸಗಿ ಕಾರ್ಖಾನೆ ಮಾಲೀಕನ ವಿರುದ್ದ…
ಮೈಸೂರು : ಚಾಮುಂಡಿಬೆಟ್ಟದ ಶ್ರೀ ಚಾಮುಂಡೇಶ್ವರಿ ದೇವಾಲಯದಲ್ಲಿ ದೇವಿಯ ದರ್ಶನ ಹಾಗೂ ಸಮೂಹ ದೇವಾಲಯಗಳ ಸೇವೆಗಳ ಶುಲ್ಕಗಳನ್ನು ಏರಿಸಿರುವ ರಾಜ್ಯ…
ಬೆಳಗಾವಿ : ರಾಜ್ಯದಲ್ಲಿ 545 ಪಿಎಸ್ಐ ಹುದ್ದೆಗಳ ನೇಮಕಾತಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಿದ್ದು, ಈಗಾಗಲೇ ಅಭ್ಯರ್ಥಿಗಳಿಗೆ ತರಬೇತಿ ನೀಡಲಾಗುತ್ತಿದೆ. ಮೂರು ತಿಂಗಳ…