various demands at mysuru
ಮೈಸೂರು: ರಾಜ್ಯ ಸರ್ಕಾರ ಪಂಪ್ ಸೆಟ್ಗಳಿಗೆ ಡಿಜಿಟಲ್ ಮೀಟರ್ ಅಳವಡಿಸಲು 10ಸಾವಿರ ರೂ.ಠೇವಣಿ ಶುಲ್ಕ ನಿಗದಿಪಡಿಸಿರುವುದನ್ನು ಹಿಂಪಡೆಯಬೇಕು. ವಿದ್ಯುತ್ ಕ್ಷೇತ್ರವನ್ನು ಖಾಸಗಿಕರಣಗೊಳಿಸಿದಂತೆ, ವಿದ್ಯುತ್ ಸಂಪರ್ಕಕ್ಕೆ ಆಧಾರ್ ಜೋಡಣೆ ರದ್ದುಗೊಳಿಸಿ ರೈತರಿಗೆ ಸಮರ್ಪಕ ಯೋಗ್ಯ ವಿದ್ಯುತ್ ಸಮರ್ಪಕವಾಗಿ ನೀಡಲು ವಿದ್ಯುತ್ ಲೈನ್ ಗಳನ್ನು ಸುಸ್ಥಿತಿಯಲ್ಲಿಡುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ವತಿಯಿಂದ ವಿಜಯನಗರದ ಎರಡನೇ ಹಂತದಲ್ಲಿರುವ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತದ ವ್ಯವಸ್ಥಾಪಕ ನಿರ್ದೇಶಕರಿಗೆ ಮನವಿ ಸಲ್ಲಿಸಲಾಯಿತು.
ನಿಗಮದ ಎಂಡಿ ಕೆ.ಎಂ. ಮುನಿಗೋಪಾಲರಾಜು ಅವರಿಗೆ ಮನವಿ ಪತ್ರವನ್ನು ಸಲ್ಲಿಸಿ ಮನವಿ ಪತ್ರವನ್ನು ಸಲ್ಲಿಸಿದರು.
ಈ ವೇಳೆ ಮಾತನಾಡಿದ ಹಸಿರು ಸೇನೆಯ ಕಾರ್ಯಾಧ್ಯಕ್ಷ ಮೋಹನ್ ರಾಜ್, ರಾಜ್ಯ ಸರ್ಕಾರ ಪಂಪ್ ಸೆಟ್ಗಳಿಗೆ ಡಿಜಿಟಲ್ ಮೀಟರ್ ಅಳವಡಿಸಲು 10ಸಾವಿರ ರೂ. ಡಿಪಾಸಿಟ್ ಶುಲ್ಕ ನಿಗದಿಪಡಿಸಿರುವುದನ್ನು ಹಿಂಪಡೆಯಬೇಕು. ವಿದ್ಯುತ್ ಕ್ಷೇತ್ರವನ್ನು ಖಾಸಗಿಕರಣಗೊಳಿಸಿದಂತೆ, ವಿದ್ಯುತ್ ಸಂಪರ್ಕಕ್ಕೆ ಆಧಾರ್ ಜೋಡಣೆ ರದ್ದುಗೊಳಿಸಿ ರೈತರಿಗೆ ಸಮರ್ಪಕ ಯೋಗ್ಯ ವಿದ್ಯುತ್ನ್ನು ಬೆಳಿಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆಯ ವರೆಗೆ ನೀಡಲು ವಿದ್ಯುತ್ ಲೈನ್ ಗಳನ್ನು ಸುಸ್ಥಿತಿಯಲ್ಲಿಡುವಂತೆ ಒತ್ತಾಯಿಸಿದರು.
ಇದಕ್ಕೆ ಅಧಿಕಾರಿಗಳು ಒಂದು ತಿಂಗಳ ಗಡುವು ಪಡೆದಿದ್ದು ಅಷ್ಟರೊಳಗೆ ನಮ್ಮ ಬೇಡಿಕೆಗಳನ್ನು ಈಡೇರಿಸದಿದ್ದರೆ ಸುಮಾರು ಸಾವಿರಕ್ಕೂ ಹೆಚ್ಚು ರೈತರು ಕಚೇರಿಗೆ ಮುತ್ತಿಗೆ ಹಾಕಲಾಗುವುದು ಎಂದು ರಾಜ್ಯ ಸರ್ಕಾರಕ್ಕೆ ಮತ್ತು ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು. ಸಂಘದ ಅಧ್ಯಕ್ಷ ಲೋಕೇಶ್, ಅಂಜನ್ ಕುಮಾರ್ ಮತ್ತಿತರರು ಹಾಜರಿದ್ದರು.
ಬೆಂಗಳೂರು : ಮುಂಗಾರು ಮಳೆ ಕೊರತೆ ಮತ್ತು ಕಾವೇರಿ ಜಲಾನಯನ ಪ್ರದೇಶದಲ್ಲಿ ಜಲಾಶಯಗಳಿಗೆ ನಿರೀಕ್ಷಿತ ಪ್ರಮಾಣದಲ್ಲಿ ನೀರು ಹರಿದುಬಾರದ ಹಿನ್ನೆಲೆಯಲ್ಲಿ,…
ಮೈಸೂರು: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ವತಿಯಿಂದ ಮುಖ್ಯಮಂತ್ರಿಯವರು ಯುವ ಶಕ್ತಿ ರಾಷ್ಟ್ರ ಶಕ್ತಿ ಎಂಬ ಶೀರ್ಷಿಕೆಯಡಿ ಭಾರತ್…
ಮೈಸೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ (MDA) ನಿಯಮಗಳನ್ನು ಉಲ್ಲಂಘಿಸಿ ಮಾಡಲಾಗಿರುವ 50:50 ಬದಲಿ ನಿವೇಶನಗಳ ಹಂಚಿಕೆಗೆ ಸಂಬಂಧಿಸಿದಂತೆ ಏಕಸದಸ್ಯ…
ಬೆಂಗಳೂರು : ಹನೂರು ಶೂಟೌಟ್ ಪ್ರಕರಣದ ಬಗ್ಗೆ ಕೂಲಂಕಷ ತನಿಖೆ ನಡೆಯುತ್ತಿದ್ದು, ತನಿಖೆ ಬಳಿಕ ಪ್ರತಿಕ್ರಿಯೆ ನೀಡುತ್ತೇವೆ ಎಂದು ಸಿಎಂ…
ಬೆಂಗಳೂರು : ಆರು ಬಾರಿ ಚಿನ್ನದಂಬಾರಿ ಹೊತ್ತ 60 ವರ್ಷದ ಕ್ಯಾಪ್ಟನ್ ಅರ್ಜುನ ಆನೆಗೆ ಈ ಬಾರಿ ದಸರಾ ಜಂಬೂಸವಾರಿಯಲ್ಲಿ…
ಬೆಂಗಳೂರು: ಹನೂರು ಶೂಟೌಟ್ ಪ್ರಕರಣದ ಬಗ್ಗೆ ಕೂಲಂಕಷ ತನಿಖೆ ನಡೆಯುತ್ತಿದ್ದು, ತನಿಖೆ ಬಳಿಕ ಪ್ರತಿಕ್ರಿಯೆ ನೀಡುತ್ತೇವೆ ಎಂದು ಸಿಎಂ ಡಿ…