buddha gayabuddha gaya
ಮೈಸೂರು : ಬುದ್ಧ ಗಯಾ ಮಹಾಬೋಧಿ ಮಹಾವಿಹಾರ ಸಂಪೂರ್ಣ ಬೌದ್ಧರ ಆಡಳಿತಕ್ಕೆ ಒಳಪಡಿಸಲು ಒತ್ತಾಯಿಸಿ ಬುದ್ಧ ಗಯಾ ಮಹಾಬೋಧಿ ಮಹಾವಿಹಾರ ಮುಕ್ತಿ ಆಂದೋಲನ ಸಮಿತಿ ವತಿಯಿಂದ ಪ್ರತಿಭಟನೆ ನಡೆಸಲಾಯಿತು.
ಪುರಭವನ ಆವರಣದ ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಮೆ ಎದುರು ಜಮಾಯಿಸಿದ ಕಾರ್ಯಕರ್ತರು ಬುದ್ಧವಂದನೆ ಮೂಲಕ ಪ್ರತಿಭಟಿಸಿದರು.
ಸಾಮ್ರಾಟ್ ಅಶೋಕ ಅಂದು ಸಂಸ್ಥಾಪಿಸಿದ ತಮ್ಮ ಸಾಮ್ರಾಜ್ಯದ ಉದ್ದಗಲಕ್ಕೂ ೮೪ಸಾವಿರ ಸ್ತೂಪಗಳ ಪೈಕಿ ಬುದ್ಧಗಯಾ ಮಹಾವಿಹಾರವು ಒಂದಾಗಿದ್ದು, ಬೌದ್ಧರಿಗೆ ಪವಿತ್ರ ಯಾತ್ರಾ ಸ್ಥಳವಾಗಿದೆ. ಸಾವಿರಾರು ವರ್ಷಗಳ ಕಾಲ ಬೌದ್ಧರ ಆಡಳಿತದಲ್ಲಿದ್ದ ಬುದ್ಧಗಯಾದ ಮಹಾಬೋಧಿ ಮಹಾವಿಹಾರವು ೧೯೧೯ರ ನಂತರ ಅನ್ಯ ಧರ್ಮೀಯರ ಆಡಳಿತದ ಹಿಡಿತದಲ್ಲಿದೆ. ಅದನ್ನು ರದ್ದುಪಡಿಸಿ ಬೌದ್ಧರ ಆಡಳಿತಕ್ಕೆ ನೀಡಬೇಕೆಂದು ಒತ್ತಾಯಿಸಿದರು.
ಕೇಂದ್ರಸರ್ಕಾರ ಕೂಡಲೇ ೧೯೧೯ರ ಬುದ್ಧಗಯಾ ಟೆಂಪಲ್ ಕಾಯ್ದೆಯನ್ನು ರದ್ದುಪಡಿಸಬೇಕು ಎಂದು ಆಗ್ರಹಿಸಿದರು.
ಬುದ್ಧ ಗಯಾ ಮಹಾಬೋಧಿ ಮಹಾವಿಹಾರ ಮುಕ್ತಿ ಆಂದೋಲನ ಸಮಿತಿ ಮುಖಂಡರಾದ ಡಾ.ಆಕಾಶ್ ಲಾಮಾ, ಚಂದ್ರಬೋಧಿ ಪಾಟೀಲ್, ಎಂ.ವೆಂಕಟಸ್ವಾಮಿ, ಶಂಕರ್ ರಾಮಲಿಂಗಯ್ಯ, ಶಂಭುಲಿಂಗಯ್ಯ, ಮಂಜುನಾಥ್, ಪುರುಷೋತ್ತಮ್ ಮತ್ತಿತರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.
ಹನೂರು: ತಾಲೂಕಿನ ಲೊಕ್ಕನಹಳ್ಳಿ ಹೋಬಳಿ ವ್ಯಾಪ್ತಿಯ ಮಲೆ ಮಹದೇಶ್ವರ ಅರಣ್ಯ ಪ್ರದೇಶ ವ್ಯಾಪ್ತಿಯ ಬಳಗುಡ್ಡ ಬಿಟ್ ವ್ಯಾಪ್ತಿಯಲ್ಲಿ ಏಕಕಾಲಕ್ಕೆ ಎರಡು…
ನವದೆಹಲಿ: ನಾಗರಿಕ ವಿಮಾನಯಾನ ಸಚಿವಾಲಯವು ಇಂಡಿಗೋದ ಬಾಕಿ ಇರುವ ಎಲ್ಲಾ ಪ್ರಯಾಣಿಕರ ಮರುಪಾವತಿಗಳನ್ನು ವಿಳಂಬವಿಲ್ಲದೇ ಪಾವತಿಸಲು ಆದೇಶಿಸಿದೆ. ರದ್ದಾದ ಅಥವಾ…
ತುಮಕೂರು: ರಾಜ್ಯದಲ್ಲಿ ಸಿಎಂ ಸ್ಥಾನ ಬದಲಾವಣೆ ಚರ್ಚೆ ಬೆನ್ನಲ್ಲೇ ಮಾಜಿ ಸಚಿವ ಕೆ.ಎನ್.ರಾಜಣ್ಣ ಮಹತ್ವದ ಹೇಳಿಕೆ ಕೊಟ್ಟಿದ್ದಾರೆ. ಈ ಕುರಿತು…
ಹಾಸನ: ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ದೆಹಲಿ ಪೊಲೀಸರು ನೋಟಿಸ್ ಕೊಟ್ಟ ವಿಚಾರಕ್ಕೆ ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು…
ಹಾಸನ: ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಒಂದು ವರ್ಷದೊಳಗೆ ಎಲ್ಲ ಗ್ಯಾರಂಟಿ ಯೋಜನೆಗಳನ್ನು ಯಶಸ್ವಿಯಾಗಿ ಜಾರಿಗೊಳಿಸಿದ್ದು, ಕರ್ನಾಟಕದ ಇತಿಹಾಸದಲ್ಲಿಯೇ ಕಾಂಗ್ರೆಸ್…
ನಂಜನಗೂಡು: ಜಮೀನಿನಲ್ಲಿ ಭಾರೀ ಗಾತ್ರದ ಹೆಬ್ಬಾವು ಪತ್ತೆಯಾಗಿದ್ದು, ಅರಣ್ಯ ಇಲಾಖೆ ಸಿಬ್ಬಂದಿಗಳು ರಕ್ಷಿಸಿ ಸುರಕ್ಷಿತ ಪ್ರದೇಶಕ್ಕೆ ಬಿಟ್ಟಿದ್ದಾರೆ. ಜಿಲ್ಲೆಯ ನಂಜನಗೂಡು…