ಮೈಸೂರು

ಬುದ್ಧ ಗಯಾ ಭೌದ್ಧರ ಆಡಳಿತಕ್ಕೆ ಒಳಪಡಿಸಲು ಆಗ್ರಹಿಸಿ ಪ್ರತಿಭಟನೆ

ಮೈಸೂರು : ಬುದ್ಧ ಗಯಾ ಮಹಾಬೋಧಿ ಮಹಾವಿಹಾರ ಸಂಪೂರ್ಣ ಬೌದ್ಧರ ಆಡಳಿತಕ್ಕೆ ಒಳಪಡಿಸಲು ಒತ್ತಾಯಿಸಿ ಬುದ್ಧ ಗಯಾ ಮಹಾಬೋಧಿ ಮಹಾವಿಹಾರ ಮುಕ್ತಿ ಆಂದೋಲನ ಸಮಿತಿ ವತಿಯಿಂದ ಪ್ರತಿಭಟನೆ ನಡೆಸಲಾಯಿತು.

ಪುರಭವನ ಆವರಣದ ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಮೆ ಎದುರು ಜಮಾಯಿಸಿದ ಕಾರ್ಯಕರ್ತರು ಬುದ್ಧವಂದನೆ ಮೂಲಕ ಪ್ರತಿಭಟಿಸಿದರು.

ಸಾಮ್ರಾಟ್ ಅಶೋಕ ಅಂದು ಸಂಸ್ಥಾಪಿಸಿದ ತಮ್ಮ ಸಾಮ್ರಾಜ್ಯದ ಉದ್ದಗಲಕ್ಕೂ ೮೪ಸಾವಿರ ಸ್ತೂಪಗಳ ಪೈಕಿ ಬುದ್ಧಗಯಾ ಮಹಾವಿಹಾರವು ಒಂದಾಗಿದ್ದು, ಬೌದ್ಧರಿಗೆ ಪವಿತ್ರ ಯಾತ್ರಾ ಸ್ಥಳವಾಗಿದೆ. ಸಾವಿರಾರು ವರ್ಷಗಳ ಕಾಲ ಬೌದ್ಧರ ಆಡಳಿತದಲ್ಲಿದ್ದ ಬುದ್ಧಗಯಾದ ಮಹಾಬೋಧಿ ಮಹಾವಿಹಾರವು ೧೯೧೯ರ ನಂತರ ಅನ್ಯ ಧರ್ಮೀಯರ ಆಡಳಿತದ ಹಿಡಿತದಲ್ಲಿದೆ. ಅದನ್ನು ರದ್ದುಪಡಿಸಿ ಬೌದ್ಧರ ಆಡಳಿತಕ್ಕೆ ನೀಡಬೇಕೆಂದು ಒತ್ತಾಯಿಸಿದರು.

ಕೇಂದ್ರಸರ್ಕಾರ ಕೂಡಲೇ ೧೯೧೯ರ ಬುದ್ಧಗಯಾ ಟೆಂಪಲ್ ಕಾಯ್ದೆಯನ್ನು ರದ್ದುಪಡಿಸಬೇಕು ಎಂದು ಆಗ್ರಹಿಸಿದರು.

ಬುದ್ಧ ಗಯಾ ಮಹಾಬೋಧಿ ಮಹಾವಿಹಾರ ಮುಕ್ತಿ ಆಂದೋಲನ ಸಮಿತಿ ಮುಖಂಡರಾದ ಡಾ.ಆಕಾಶ್ ಲಾಮಾ, ಚಂದ್ರಬೋಧಿ ಪಾಟೀಲ್, ಎಂ.ವೆಂಕಟಸ್ವಾಮಿ, ಶಂಕರ್ ರಾಮಲಿಂಗಯ್ಯ, ಶಂಭುಲಿಂಗಯ್ಯ, ಮಂಜುನಾಥ್, ಪುರುಷೋತ್ತಮ್ ಮತ್ತಿತರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ಆಂದೋಲನ ಡೆಸ್ಕ್

Recent Posts

ಮ.ಬೆಟ್ಟ | ಕೊನೆಗೂ ಬೋನಿಗೆ ಬಿದ್ದ ಚಿರತೆ ; ನಿಟ್ಟುಸಿರು ಬಿಟ್ಟ ಯಾತ್ರಾರ್ಥಿಗಳು

ಹನೂರು : ತಾಲೂಕಿನ ಮಲೆ ಮಹದೇಶ್ವರ ವನ್ಯಜೀವಿಧಾಮ ವ್ಯಾಪ್ತಿಯ ತಾಳುಬೆಟ್ಟದಿಂದ ಮಲೆ ಮಹದೇಶ್ವರ ಬೆಟ್ಟಕ್ಕೆ ತೆರಳುತ್ತಿದ್ದ ಪಾದಯಾತ್ರಿಕನ ಮೇಲೆ ದಾಳಿ…

5 mins ago

ಸರ್ಕಾರಿ ಹುದ್ದೆ ಆಕಾಂಕ್ಷಿಗಳಿಗೆ ಗುಡ್‌ನ್ಯೂಸ್‌ : 5 ವರ್ಷ ವಯೋಮಿತಿ ಸಡಿಲಿಕೆಗೆ ಸಚಿವ ಸಂಪುಟ ಒಪ್ಪಿಗೆ!

ಬೆಂಗಳೂರು : ರಾಜ್ಯದ ಎಲ್ಲಾ ರೀತಿಯ ಸಿವಿಲ್ ಹುದ್ದೆಗಳಿಗೆ 2027ರ ಡಿಸೆಂಬರ್ 31ರವರೆಗೆ ಹೊರಡಿಸುವ ನೇಮಕಾತಿ ಅಧಿಸೂಚನೆಗಳಿಗೆ ಸಂಬಂಧಿಸಿದಂತೆ ಎಲ್ಲಾ…

1 hour ago

ಇವಿ ವಾಹನ ಸವಾರರಿಗೆ ಸಿಹಿ ಸುದ್ದಿ : ಮಂಡ್ಯದಲ್ಲಿ ಮೊದಲ ಇವಿ ಫಾಸ್ಟ್‌ ಚಾರ್ಜಿಂಗ್‌ ಕೇಂದ್ರ ಆರಂಭ

ಮಂಡ್ಯ : ಸಾರ್ವಜನಿಕರಿಗೆ ಎಲೆಕ್ಟ್ರಿಕ್ ವಾಹನಗಳ ಚಾರ್ಜಿಂಗ್ ವ್ಯವಸ್ಥೆ ಕಲ್ಪಿಸುವ ಉದ್ದೇಶದಿಂದ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ(ಸೆಸ್ಕ್)ವು ಜಿಲ್ಲೆಯಲ್ಲಿ…

2 hours ago

ಜಾ.ದಳ ಓಡಿಸಲು ಚಲುವರಾಯಸ್ವಾಮಿಗೆ ಸಾಧ್ಯವೇ? : ಜೆಡಿಎಸ್‌ ನಾಯಕ ಸುರೇಶ್‌ ಗೌಡ ಪ್ರಶ್ನೆ

ಮಂಡ್ಯ : ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿಯದ್ದು ಬರಿ ಡಬಲ್ ಸ್ಟ್ಯಾಂಡರ್ಡ್ ನಾಟಕವಾಗಿದೆ. ಜಾತ್ಯತೀತ ಜನತಾದಳವನ್ನು ಓಡಿಸುವುದಕ್ಕೆ ಅವರಿಗೆ ತಾಕತ್ತಿದೆಯೇ?.…

2 hours ago

ಜಮೀನು ಕಬಳಿಕೆ ಪ್ರಕರಣ | ಸಚಿವ ಚಲುವರಾಯಸ್ವಾಮಿಯೇ ನೇರ ಹೊಣೆ : ಸುರೇಶ್‌ಗೌಡ ಆರೋಪ

ನಾಗಮಂಗಲ ನಕಲಿ ದಾಖಲೆ ಸೃಷ್ಟಿಸಿ ಸರ್ಕಾರಿ ಜಮೀನು ಕಬಳಿಕೆ ಪ್ರಕರಣ ಮಂಡ್ಯ : ನಾಗಮಂಗಲ ತಾಲ್ಲೂಕಿನ ನಕಲಿ ದಾಖಲೆ ಸೃಷ್ಟಿ…

3 hours ago

ಕಣಿವೆಗೆ ಉರುಳಿದ ಸೇನಾ ವಾಹನ : 10 ಸೈನಿಕರ ಸಾವು

11 ಯೋಧರಿಗೆ ಗಂಭೀರ ಗಾಯ ಭದೇರ್ವಾ : ದೋಡಾ ಜಿಲ್ಲೆಯ ಥನಾಲಾದ ಮೇಲ್ಭಾಗದ ಪ್ರದೇಶದಲ್ಲಿನ ಭದೇರ್ವಾ-ಚಂಬಾ ರಸ್ತೆಯಲ್ಲಿ ಗುರುವಾರ ಸೇನಾ…

3 hours ago