ಮೈಸೂರು

ಬುದ್ಧ ಗಯಾ ಭೌದ್ಧರ ಆಡಳಿತಕ್ಕೆ ಒಳಪಡಿಸಲು ಆಗ್ರಹಿಸಿ ಪ್ರತಿಭಟನೆ

ಮೈಸೂರು : ಬುದ್ಧ ಗಯಾ ಮಹಾಬೋಧಿ ಮಹಾವಿಹಾರ ಸಂಪೂರ್ಣ ಬೌದ್ಧರ ಆಡಳಿತಕ್ಕೆ ಒಳಪಡಿಸಲು ಒತ್ತಾಯಿಸಿ ಬುದ್ಧ ಗಯಾ ಮಹಾಬೋಧಿ ಮಹಾವಿಹಾರ ಮುಕ್ತಿ ಆಂದೋಲನ ಸಮಿತಿ ವತಿಯಿಂದ ಪ್ರತಿಭಟನೆ ನಡೆಸಲಾಯಿತು.

ಪುರಭವನ ಆವರಣದ ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಮೆ ಎದುರು ಜಮಾಯಿಸಿದ ಕಾರ್ಯಕರ್ತರು ಬುದ್ಧವಂದನೆ ಮೂಲಕ ಪ್ರತಿಭಟಿಸಿದರು.

ಸಾಮ್ರಾಟ್ ಅಶೋಕ ಅಂದು ಸಂಸ್ಥಾಪಿಸಿದ ತಮ್ಮ ಸಾಮ್ರಾಜ್ಯದ ಉದ್ದಗಲಕ್ಕೂ ೮೪ಸಾವಿರ ಸ್ತೂಪಗಳ ಪೈಕಿ ಬುದ್ಧಗಯಾ ಮಹಾವಿಹಾರವು ಒಂದಾಗಿದ್ದು, ಬೌದ್ಧರಿಗೆ ಪವಿತ್ರ ಯಾತ್ರಾ ಸ್ಥಳವಾಗಿದೆ. ಸಾವಿರಾರು ವರ್ಷಗಳ ಕಾಲ ಬೌದ್ಧರ ಆಡಳಿತದಲ್ಲಿದ್ದ ಬುದ್ಧಗಯಾದ ಮಹಾಬೋಧಿ ಮಹಾವಿಹಾರವು ೧೯೧೯ರ ನಂತರ ಅನ್ಯ ಧರ್ಮೀಯರ ಆಡಳಿತದ ಹಿಡಿತದಲ್ಲಿದೆ. ಅದನ್ನು ರದ್ದುಪಡಿಸಿ ಬೌದ್ಧರ ಆಡಳಿತಕ್ಕೆ ನೀಡಬೇಕೆಂದು ಒತ್ತಾಯಿಸಿದರು.

ಕೇಂದ್ರಸರ್ಕಾರ ಕೂಡಲೇ ೧೯೧೯ರ ಬುದ್ಧಗಯಾ ಟೆಂಪಲ್ ಕಾಯ್ದೆಯನ್ನು ರದ್ದುಪಡಿಸಬೇಕು ಎಂದು ಆಗ್ರಹಿಸಿದರು.

ಬುದ್ಧ ಗಯಾ ಮಹಾಬೋಧಿ ಮಹಾವಿಹಾರ ಮುಕ್ತಿ ಆಂದೋಲನ ಸಮಿತಿ ಮುಖಂಡರಾದ ಡಾ.ಆಕಾಶ್ ಲಾಮಾ, ಚಂದ್ರಬೋಧಿ ಪಾಟೀಲ್, ಎಂ.ವೆಂಕಟಸ್ವಾಮಿ, ಶಂಕರ್ ರಾಮಲಿಂಗಯ್ಯ, ಶಂಭುಲಿಂಗಯ್ಯ, ಮಂಜುನಾಥ್, ಪುರುಷೋತ್ತಮ್ ಮತ್ತಿತರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ಆಂದೋಲನ ಡೆಸ್ಕ್

Recent Posts

ದಾವಣಗೆರೆ| ಕಿರು ಮೃಗಾಲಯದಲ್ಲಿ ನಾಲ್ಕು ಜಿಂಕೆಗಳ ಸಾವಿಗೆ ಕಾರಣ ಬಹಿರಂಗ

ದಾವಣಗೆರೆ: ಜಿಲ್ಲೆಯ ಆನಗೋಡಿನ ಇಂದಿರಾ ಪ್ರಿಯದರ್ಶಿನಿ ಕಿರು ಮೃಗಾಲಯದಲ್ಲಿ ನಾಲ್ಕು ಚುಕ್ಕೆ ಜಿಂಕೆಗಳ ಸಾವಿಗೆ ಕಾರಣ ಬಹಿರಂಗವಾಗಿದೆ. ನಾಲ್ಕು ಚುಕ್ಕೆ…

9 mins ago

ವಾಲ್ಮೀಕಿ ಹಗರಣ: ಮಾಜಿ ಸಚಿವ ಬಿ.ನಾಗೇಂದ್ರಗೆ ಮತ್ತೆ ಸಂಕಷ್ಟ

ಬೆಂಗಳೂರು: ವಾಲ್ಮೀಕಿ ಹಗರಣದಲ್ಲಿ ಮಾಜಿ ಸಚಿವ ಬಿ.ನಾಗೇಂದ್ರಗೆ ಮತ್ತೆ ಸಂಕಷ್ಟ ಎದುರಾಗಿದ್ದು, ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ನೀಡಿದ್ದ ಜಾಮೀನು ರದ್ದು…

55 mins ago

ರಾಜ್ಯಪಾಲರ ನಡೆ ಖಂಡಿಸಿ ಪ್ರತಿಭಟನೆ ಮಾಡುತ್ತೇವೆ: ಸಿಎಂ ಸಿದ್ದರಾಮಯ್ಯ ಆಕ್ರೋಶ

ಬೆಂಗಳೂರು: ರಾಜ್ಯಪಾಲರು ಭಾಷಣ ಓದದೇ ಸಂವಿಧಾನ ಉಲ್ಲಂಘಿಸಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಕುರಿತು ವಿಧಾನಸೌಧದಲ್ಲಿ ಮಾತನಾಡಿದ…

1 hour ago

ಭಾಷಣ ಓದದೇ ತೆರಳಿದ ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌: ಕಾಂಗ್ರೆಸ್‌ ನಾಯಕರಿಂದ ಹೈಡ್ರಾಮಾ

ಬೆಂಗಳೂರು: ವಿಧಾನಸೌಧದಲ್ಲಿ ಜಂಟಿ ಅಧಿವೇಶನ ಉದ್ದೇಶಿಸಿ ಭಾಷಣ ಮಾಡಬೇಕಿದ್ದ ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ಅವರು ಕೇವಲ ಎರಡನೇ ಮಾತಿನಲ್ಲಿ…

2 hours ago

ಮುಡಾ ಹಗರಣ: ಸಿಎಂ ಸಿದ್ದರಾಮಯ್ಯಗೆ ಇಂದು ಬಿಗ್ ಡೇ

ಬೆಂಗಳೂರು: ಸಿಎಂ ಸಿದ್ದರಾಮಯ್ಯ ವಿರುದ್ಧದ ಮುಡಾ ಹಗರಣದಲ್ಲಿ ಲೋಕಾಯುಕ್ತ ನೀಡಿರುವ ಕ್ಲೀನ್‌ಚಿಟ್‌ ಕುರಿತು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಇಂದು ಮಹತ್ವದ…

2 hours ago

ರಾಜ್ಯಪಾಲರು-ಸರ್ಕಾರದ ಸಂಘರ್ಷದ ನಡುವೆಯೇ ವಿಧಾನಸೌಧದಲ್ಲಿ ಅಧಿವೇಶನ: ಪೊಲೀಸರಿಂದ ಭದ್ರತೆ

ಬೆಂಗಳೂರು: ರಾಜ್ಯ ಸರ್ಕಾರ ಇಂದಿನಿಂದ ಜನವರಿ.31ರವರೆಗೆ ವಿಧಾನಮಂಡಲ ವಿಶೇಷ ಅಧಿವೇಶನ ಕರೆದಿದ್ದು, ನರೇಗಾ ಯೋಜನೆ ಹೆಸರು ಬದಲಾವಣೆ ಆಕ್ಷೇಪಿಸಿ ಕರೆದಿರುವ…

3 hours ago