ಮೈಸೂರು

ಬುದ್ಧ ಗಯಾ ಭೌದ್ಧರ ಆಡಳಿತಕ್ಕೆ ಒಳಪಡಿಸಲು ಆಗ್ರಹಿಸಿ ಪ್ರತಿಭಟನೆ

ಮೈಸೂರು : ಬುದ್ಧ ಗಯಾ ಮಹಾಬೋಧಿ ಮಹಾವಿಹಾರ ಸಂಪೂರ್ಣ ಬೌದ್ಧರ ಆಡಳಿತಕ್ಕೆ ಒಳಪಡಿಸಲು ಒತ್ತಾಯಿಸಿ ಬುದ್ಧ ಗಯಾ ಮಹಾಬೋಧಿ ಮಹಾವಿಹಾರ ಮುಕ್ತಿ ಆಂದೋಲನ ಸಮಿತಿ ವತಿಯಿಂದ ಪ್ರತಿಭಟನೆ ನಡೆಸಲಾಯಿತು.

ಪುರಭವನ ಆವರಣದ ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಮೆ ಎದುರು ಜಮಾಯಿಸಿದ ಕಾರ್ಯಕರ್ತರು ಬುದ್ಧವಂದನೆ ಮೂಲಕ ಪ್ರತಿಭಟಿಸಿದರು.

ಸಾಮ್ರಾಟ್ ಅಶೋಕ ಅಂದು ಸಂಸ್ಥಾಪಿಸಿದ ತಮ್ಮ ಸಾಮ್ರಾಜ್ಯದ ಉದ್ದಗಲಕ್ಕೂ ೮೪ಸಾವಿರ ಸ್ತೂಪಗಳ ಪೈಕಿ ಬುದ್ಧಗಯಾ ಮಹಾವಿಹಾರವು ಒಂದಾಗಿದ್ದು, ಬೌದ್ಧರಿಗೆ ಪವಿತ್ರ ಯಾತ್ರಾ ಸ್ಥಳವಾಗಿದೆ. ಸಾವಿರಾರು ವರ್ಷಗಳ ಕಾಲ ಬೌದ್ಧರ ಆಡಳಿತದಲ್ಲಿದ್ದ ಬುದ್ಧಗಯಾದ ಮಹಾಬೋಧಿ ಮಹಾವಿಹಾರವು ೧೯೧೯ರ ನಂತರ ಅನ್ಯ ಧರ್ಮೀಯರ ಆಡಳಿತದ ಹಿಡಿತದಲ್ಲಿದೆ. ಅದನ್ನು ರದ್ದುಪಡಿಸಿ ಬೌದ್ಧರ ಆಡಳಿತಕ್ಕೆ ನೀಡಬೇಕೆಂದು ಒತ್ತಾಯಿಸಿದರು.

ಕೇಂದ್ರಸರ್ಕಾರ ಕೂಡಲೇ ೧೯೧೯ರ ಬುದ್ಧಗಯಾ ಟೆಂಪಲ್ ಕಾಯ್ದೆಯನ್ನು ರದ್ದುಪಡಿಸಬೇಕು ಎಂದು ಆಗ್ರಹಿಸಿದರು.

ಬುದ್ಧ ಗಯಾ ಮಹಾಬೋಧಿ ಮಹಾವಿಹಾರ ಮುಕ್ತಿ ಆಂದೋಲನ ಸಮಿತಿ ಮುಖಂಡರಾದ ಡಾ.ಆಕಾಶ್ ಲಾಮಾ, ಚಂದ್ರಬೋಧಿ ಪಾಟೀಲ್, ಎಂ.ವೆಂಕಟಸ್ವಾಮಿ, ಶಂಕರ್ ರಾಮಲಿಂಗಯ್ಯ, ಶಂಭುಲಿಂಗಯ್ಯ, ಮಂಜುನಾಥ್, ಪುರುಷೋತ್ತಮ್ ಮತ್ತಿತರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಈ ಬಾರಿಯ ದಸರಾ ಉದ್ಘಾಟನೆಗೆ ಹೆಚ್.ಡಿ.ದೇವೇಗೌಡರನ್ನು ಆಯ್ಕೆಮಾಡಲಿ

ಪ್ರತಿ ವರ್ಷ ವಿಶ್ವ ವಿಖ್ಯಾತ ನಾಡಹಬ್ಬ ದಸರಾ ಬಹು ವಿಜೃಂಭಣೆಯಿಂದ ಮೈಸೂರಿನಲ್ಲಿ ಹತ್ತು ದಿನಗಳ ಕಾಲ ನಡೆಯುತ್ತದೆ. ಈ ಕಾರ್ಯಕ್ರಮಕ್ಕೆ…

1 min ago

ಮೈಸೂರು ಸ್ವಚ್ಛವಾಗಿಡಲು ಜನರಿಗೆ ಕೆಲ ಅಭ್ಯಾಸ ಅಗತ್ಯ

ಟಿ.ಕೆ.ಹರೀಶ್ ಮನೆ ಮುಂದಿನ ರಸ್ತೆಯ ಕಸ ವಿಲೇವಾರಿಗೆ ನಾಗರಿಕರು ಜಾಗೃತರಾಗಬೇಕು ಮೈಸೂರು ಎಂದರೆ ಕೇವಲ ಒಂದು ನಗರವಲ್ಲ. ಅದು ಕರ್ನಾಟಕದ…

4 mins ago

ರೈಲ್ವೆ ಕೆಳಸೇತುವೆ ಶಿಥಿಲ

ಎಸ್.ಎಸ್.ಭಟ್ ನಂ.ಗೂಡು: ಕಳಚಿ ಬೀಳುತ್ತಿದೆ ಸೀಲಿಂಗ್ ಕಾಂಕ್ರೀಟ್; ವಾಹನ ಸವಾರರಲ್ಲಿ ಆತಂಕ  ನಂಜನಗೂಡು: ನಗರದ ರೈಲು ನಿಲ್ದಾಣಕ್ಕೆ ತಾಗಿದಂತೆ ಮಹಾತ್ಮ…

8 mins ago

ಜೆನ್ ಝೀಗಳಿಗೆ ಒಂದೆಡೆ ದೇಶಾಭಿಮಾನ; ಮತ್ತೊಂದೆಡೆ ಅಸಮಾಧಾನ

ಕೆ.ಎಸ್. ಚಂದ್ರಶೇಖರ ಮೂರ್ತಿ ಮೈಸೂರು: ಸ್ವಾತಂತ್ರ್ಯವೆಂದರೆ ಕೇವಲ ಧ್ವಜಾರೋಹಣ, ದೇಶಭಕ್ತಿ ಗೀತೆಗಳು ಮತ್ತು ಸಿಹಿ ಹಂಚಿಕೆಯ ಸಂಭ್ರಮವಲ್ಲ. ಅದು ಸ್ವಾತಂತ್ರ್ಯದ…

13 mins ago

ಬಿಡದಿ ಹೋರಾಟಕ್ಕೆ ಜೆನ್‌-ಝೀ ಗಳು ಬರಲಿ ; ದೇವನೂರು ಮಹದೇವ ಕರೆ

ಮೈಸೂರು: ಫಲವತ್ತಾದ ಕೃಷಿ ಭೂಮಿಯನ್ನು ಉಳಿಸಿಕೊಳ್ಳುವ ಆಕಾಂಕ್ಷೆ ಪ್ರಭುತ್ವಕ್ಕೆ ಇರಬೇಕು. ಭೂಮಿ ನೀಡುವ ರೈತರ ಬದುಕಿನ ಹೊಣೆಗಾರಿಕೆಯನ್ನು ಸರ್ಕಾರ ವಹಿಸಿಕೊಳ್ಳುತ್ತದೆಯೇ…

9 hours ago