ಮೈಸೂರು

ಬುದ್ಧ ಗಯಾ ಭೌದ್ಧರ ಆಡಳಿತಕ್ಕೆ ಒಳಪಡಿಸಲು ಆಗ್ರಹಿಸಿ ಪ್ರತಿಭಟನೆ

ಮೈಸೂರು : ಬುದ್ಧ ಗಯಾ ಮಹಾಬೋಧಿ ಮಹಾವಿಹಾರ ಸಂಪೂರ್ಣ ಬೌದ್ಧರ ಆಡಳಿತಕ್ಕೆ ಒಳಪಡಿಸಲು ಒತ್ತಾಯಿಸಿ ಬುದ್ಧ ಗಯಾ ಮಹಾಬೋಧಿ ಮಹಾವಿಹಾರ ಮುಕ್ತಿ ಆಂದೋಲನ ಸಮಿತಿ ವತಿಯಿಂದ ಪ್ರತಿಭಟನೆ ನಡೆಸಲಾಯಿತು.

ಪುರಭವನ ಆವರಣದ ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಮೆ ಎದುರು ಜಮಾಯಿಸಿದ ಕಾರ್ಯಕರ್ತರು ಬುದ್ಧವಂದನೆ ಮೂಲಕ ಪ್ರತಿಭಟಿಸಿದರು.

ಸಾಮ್ರಾಟ್ ಅಶೋಕ ಅಂದು ಸಂಸ್ಥಾಪಿಸಿದ ತಮ್ಮ ಸಾಮ್ರಾಜ್ಯದ ಉದ್ದಗಲಕ್ಕೂ ೮೪ಸಾವಿರ ಸ್ತೂಪಗಳ ಪೈಕಿ ಬುದ್ಧಗಯಾ ಮಹಾವಿಹಾರವು ಒಂದಾಗಿದ್ದು, ಬೌದ್ಧರಿಗೆ ಪವಿತ್ರ ಯಾತ್ರಾ ಸ್ಥಳವಾಗಿದೆ. ಸಾವಿರಾರು ವರ್ಷಗಳ ಕಾಲ ಬೌದ್ಧರ ಆಡಳಿತದಲ್ಲಿದ್ದ ಬುದ್ಧಗಯಾದ ಮಹಾಬೋಧಿ ಮಹಾವಿಹಾರವು ೧೯೧೯ರ ನಂತರ ಅನ್ಯ ಧರ್ಮೀಯರ ಆಡಳಿತದ ಹಿಡಿತದಲ್ಲಿದೆ. ಅದನ್ನು ರದ್ದುಪಡಿಸಿ ಬೌದ್ಧರ ಆಡಳಿತಕ್ಕೆ ನೀಡಬೇಕೆಂದು ಒತ್ತಾಯಿಸಿದರು.

ಕೇಂದ್ರಸರ್ಕಾರ ಕೂಡಲೇ ೧೯೧೯ರ ಬುದ್ಧಗಯಾ ಟೆಂಪಲ್ ಕಾಯ್ದೆಯನ್ನು ರದ್ದುಪಡಿಸಬೇಕು ಎಂದು ಆಗ್ರಹಿಸಿದರು.

ಬುದ್ಧ ಗಯಾ ಮಹಾಬೋಧಿ ಮಹಾವಿಹಾರ ಮುಕ್ತಿ ಆಂದೋಲನ ಸಮಿತಿ ಮುಖಂಡರಾದ ಡಾ.ಆಕಾಶ್ ಲಾಮಾ, ಚಂದ್ರಬೋಧಿ ಪಾಟೀಲ್, ಎಂ.ವೆಂಕಟಸ್ವಾಮಿ, ಶಂಕರ್ ರಾಮಲಿಂಗಯ್ಯ, ಶಂಭುಲಿಂಗಯ್ಯ, ಮಂಜುನಾಥ್, ಪುರುಷೋತ್ತಮ್ ಮತ್ತಿತರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ಆಂದೋಲನ ಡೆಸ್ಕ್

Recent Posts

ಇಂದಿನಿಂದ ರಾಜ್ಯ ಮಟ್ಟದ ಹಾಕಿ ಪಂದ್ಯಾವಳಿ

ಲಕ್ಷ್ಮೀಕಾಂತ್ ಕೋಮಾರಪ್ಪ ಯಂಗ್ ಇಂಡಿಯನ್ ಫಾರ್ಮರ್ಸ್ ಅಸೋಸಿಯೇಷನ್ ವತಿಯಿಂದ ಆಯೋಜನೆ; ೮ ತಂಡಗಳು ಭಾಗಿ ಸೋಮವಾರಪೇಟೆ: ಹಲವು ಸಮಾಜಮುಖಿ ಕಾರ್ಯಗಳಿಂದ…

2 hours ago

ಶಿಥಿಲ ಶಾಲಾ ಕಟ್ಟಡಗಳ ತೆರವು ಯಾವಾಗ?

ಮಹಾದೇಶ್ ಎಂ.ಗೌಡ ಮಳೆ ಹಿನ್ನೆಲೆಯಲ್ಲಿ ಹನೂರು ಶೈಕ್ಷಣಿಕ ವಲಯದ ಹಲವು ಶಾಲೆಗಳ ಪೋಷಕರು, ವಿದ್ಯಾರ್ಥಿಗಳಲ್ಲಿ ಹೆಚ್ಚಿದ ಆತಂಕ  ಹನೂರು: ಹನೂರು…

3 hours ago

ಇಲ್ಲಿ ಒಂದಾ ಮಾಡಲು ಹೋದ್ರೆ ಇನ್ನೊಂದಾದೀತು!

ಕೆ.ಎಂ.ಅನುಚೇತನ್ ಸಾರ್ವಜನಿಕ ಸ್ಥಳಗಳಲ್ಲಿ ಮೂತ್ರ ವಿಸರ್ಜನೆಗೆ ಕನ್ನಡಿ ನಿರ್ಬಂಧ ಮೈಸೂರು: ಎಲ್ಲೆಂದರಲ್ಲಿ ಮೂತ್ರ ವಿಸರ್ಜನೆ ಮಾಡಿ ನಗರದ ಸ್ವಚ್ಛತೆಗೆ ಸವಾಲಾಗಿದ್ದವರಿಗೆ…

3 hours ago

ಮಹಾರಾಜ ಕಾಲೇಜು ವಿದ್ಯಾರ್ಥಿನಿಲಯ ದುರ್ಬಲ

ಚಿರಂಜೀವಿ ಸಿ ಹುಲ್ಲಹಳ್ಳಿ ಮೈಸೂರು: ನಗರದ ಶೈಕ್ಷಣಿಕ ಪರಂಪರೆಯ ಭಾಗವಾಗಿರುವ ಮಹಾರಾಜ ಕಾಲೇಜು ವಿದ್ಯಾರ್ಥಿನಿಲಯ ಕಟ್ಟಡ ಈಗ ಆತಂಕದ ಕೇಂದ್ರವಾಗಿದೆ.…

3 hours ago

ಶ್ರೀರಂಗಪಟ್ಟಣ | ನಟೋರಿಯಸ್ ರೌಡಿಶೀಟರ್‌ ಬರ್ಬರ ಹತ್ಯೆ

ಶ್ರೀರಂಗಪಟ್ಟಣ  : ತಾಲೂಕಿನ ಪಾಲಹಳ್ಳಿ ಲಕ್ಷ್ಮೀಪುರ ರಸ್ತೆಯಲ್ಲಿ ಮೈಸೂರಿನ ನಟೋರಿಯಸ್ ರೌಡಿಶೀಟರ್ ನ ಬರ್ಬರ ಹತ್ಯೆ ಮಾಡಿರುವ ಘಟನೆ ನಡೆದಿದೆ.…

13 hours ago