Protest demanding the removal of Goma encroachment
ಪಿರಿಯಾಪಟ್ಟಣ : ಗೋಮಾಳ ಒತ್ತುವರಿ ತೆರವುಗೊಳಿಸಿ ಸಾರ್ವಜನಿಕ ಉಪಯೋಗಕ್ಕೆ ಅನುವು ಮಾಡಿಕೊಂಡಬೇಕೆಂದು ಒತ್ತಾಯಿಸಿ ಬೆಟ್ಟದತುಂಗಾ ಗ್ರಾಮಸ್ಥರು ತಾಲ್ಲೂಕು ಆಡಳಿತ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿದರು.
ಗ್ರಾಮದ ಸ.ನಂ. 118ರಲ್ಲಿ ಬಾಳೆಕಟ್ಟೆ ಜಮೀನಿನಲ್ಲಿ ಸುಮಾರು 2ರಿಂದ 3 ಎಕರೆ ಗೋಮಾಳವನ್ನು ಬಿ.ಟಿ.ಎಂ.ಕೊಪ್ಪಲು ಗ್ರಾಮದ ಸಣ್ಣತಮ್ಮೇಗೌಡ ಎಂಬವರು ಒತ್ತುವರಿ ಮಾಡಿಕೊಂಡಿದ್ದು, ಇವರು ಈಗಾಗಲೇ ಗ್ರಾಮದಲ್ಲಿ ಸರಿ ಸುಮಾರು ೨೫ ಎಕರೆ ಭೂಮಿ ಹಿಡುವಳಿದಾರರಾಗಿದ್ದು, ಗೋಮಾಳವನ್ನು ಅಕ್ರಮಿಸಿಕೊಂಡು ಸರ್ಕಾರಕ್ಕೆ ಅನ್ಯಾಯ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.
ಈ ಗೋಮಾಳ ಒತ್ತುವರಿ ತೆರವಿನ ಬಗ್ಗೆ ಚೆಲುವರಾಜ್ ಎಂಬವರು ತಹಸಿಲ್ದಾರ್ರವರಿಗೆ ದೂರು ಸಲ್ಲಿಸಿದ್ದರೂ ಯಾವುದೇ ಕ್ರಮವಹಿಸದಿರುವುದು ಬೇಸರದ ಸಂಗತಿಯಾಗಿದೆ. ಒತ್ತುವರಿ ಮಾಡಿರುವ ವ್ಯಕ್ತಿಯು ಗೋಮಾಳಕ್ಕೆ ಬಾಳೆ ಗಿಡಗಳನ್ನು ಹಾಕುವುದು ಮತ್ತು ಅಡಕೆ ತೋಟ ಮಾಡಲು ಮುಂದಾಗಿದ್ದಾರೆ. ಆದ್ದರಿಂದ ಈ ಕೂಡಲೇ ಕ್ರಮವಹಿಸಿ ಸಂಬಂಧಪಟ್ಟ ಗೋಮಾಳವನ್ನು ತೆರವು ಮಾಡಿ ಗ್ರಾಮದ ಜಾನುವಾರುಗಳು ಮೇಯಲು ಮತ್ತು ಗ್ರಾಮದ ಎಲ್ಲಾ ಜನರಿಗೆ ಅನುಕೂಲವಾಗುವಂತೆ ಅವಕಾಶ ಕಲ್ಪಿಸಿಕೊಡಬೇಕೆಂದು ಗ್ರಾಮಸ್ಥರು ಒತ್ತಾಯಿತಿಸಿದರು.
ಮನವಿ ಪತ್ರವನ್ನು ಉಪ ತಹಸಿಲ್ದಾರ್ ವಿನೋದ್ ಕುಮಾರ್ ಮತ್ತು ಶಿರಸ್ತೆದಾರ್ ಶಕೀಲಾ ಬಾನು ರವರಿಗೆ ನೀಡಲಾಯಿತು. ಪುರಸಭೆ ನಾಮನಿರ್ದೇಶಿತ ಸದಸ್ಯ ಸಿ.ತಮಣ್ಣಯ್ಯ, ಗ್ರಾಪಂ ಮಾಜಿ ಸದಸ್ಯರಾದ ರಾಜು, ಶಶಿಧರ್, ಮುಖಂಡರಾದ ಚೆಲುವರಾಜ್, ಆರ್.ಡಿ.ಮಹದೇವ್, ಅಬ್ದುಲ್ ವಾಜೀದ್, ಗಣೇಶ, ಕಾಮರಾಜ್, ಚನ್ನಬಸವ, ರಾಜೇಶ್ ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.
ಮೈಸೂರಿನ ಕ್ರಾಫರ್ಡ್ ಹಾಲ್ ಎದುರಿನ ಓವೆಲ್ ಮೈದಾನದಲ್ಲಿ ಕ್ರೀಡಾಪಟುಗಳು ಪ್ರತಿನಿತ್ಯ ಕ್ರೀಡಾಭ್ಯಾಸ ನಡೆಸುತ್ತಾರೆ. ಸಾರ್ವಜನಿಕರೂ ಬೆಳಿಗ್ಗೆ ಹಾಗೂ ಸಂಜೆಯ ವೇಳೆ…
ಒಳಮೀಸಲಾತಿ ವಿಧೇಯಕಕ್ಕೆ ರಾಜ್ಯಪಾಲರು ಅನುಮೋದನೆ ನೀಡಿದ್ದು, ರಾಜ್ಯ ಸರ್ಕಾರ ಒಳಮೀಸಲಾತಿಯಲ್ಲಿ ಎಡಗೈ ಮತ್ತು ಬಲಗೈ ಪಂಗಡಗಳಿಗೆ ಸಮಾನವಾಗಿ ಸೌಲಭ್ಯ ಕಲ್ಪಿಸಬೇಕು.…
ಮೈಸೂರಿನ ವಿವಿಧ ವೃತ್ತಗಳಲ್ಲಿ ಹೊಸದಾಗಿ ಸಿಗ್ನಲ್ ಲೈಟ್ಗಳನ್ನು ಅಳವಡಿಸಿದ್ದಾರೆ. ಆದರೆ ಚಾಮರಾಜಪುರಂನ ನ್ಯಾಯಾಲಯದ ಬಳಿ ವಾಹನ ಸಂಚಾರ ಹೆಚ್ಚಾಗಿದ್ದು, ನ್ಯಾಯಾಲಯದ…
ಚಾಮರಾಜನಗರ ಪಟ್ಟಣದಲ್ಲಿರುವ ನಂದಿ ಭವನದಲ್ಲಿ ಮದುವೆ ಮತ್ತು ಇತರ ಸಮಾರಂಭಗಳು ನಡೆಯುತ್ತವೆ. ಕಾರ್ಯಕ್ರಮಗಳು ಮುಗಿದ ಮೇಲೆ ಉಳಿದ ಆಹಾರ ಪದಾರ್ಥಗಳನ್ನು…
ನಕಲಿ ವಿಡಿಯೋಗಳ ಹಾವಳಿ, ಕೃತಕ ಬುದ್ಧಿಮತ್ತೆ ಬಳಸಿ ಡೀಪ್ಫೇಕ್, ಅಭಿವ್ಯಕ್ತಿ ಸ್ವಾತಂತ್ರ್ಯದ ಹೆಸರಲ್ಲಿ ಏನು ಬೇಕಾದರೂ ಮಾಡಬಹುದು ಎನ್ನುವುದನ್ನು ತಡೆಯುವ…
ಮಹಾದೇಶ್ ಎಂ.ಗೌಡ ನಿರಂತರವಾಗಿ ಚಿರತೆಗಳು ಕಾಣಿಸಿಕೊಳ್ಳುತ್ತಿರುವುದರಿಂದ ಸಾರ್ವಜನಿಕರಲ್ಲಿ ಭೀತಿ ಹನೂರು: ರಾಜ್ಯದ ಪ್ರಸಿದ್ಧ ಧಾರ್ಮಿಕ ಯಾತ್ರಾ ಸ್ಥಳ ಮಲೆಮಹದೇಶ್ವರ ಬೆಟ್ಟಕ್ಕೆ…