ಮೈಸೂರು

ಗೋಮಾಳ ಒತ್ತುವರಿ ತೆರವಿಗೆ ಒತ್ತಾಯಿಸಿ ಪ್ರತಿಭಟನೆ

ಪಿರಿಯಾಪಟ್ಟಣ : ಗೋಮಾಳ ಒತ್ತುವರಿ ತೆರವುಗೊಳಿಸಿ ಸಾರ್ವಜನಿಕ ಉಪಯೋಗಕ್ಕೆ ಅನುವು ಮಾಡಿಕೊಂಡಬೇಕೆಂದು ಒತ್ತಾಯಿಸಿ ಬೆಟ್ಟದತುಂಗಾ ಗ್ರಾಮಸ್ಥರು ತಾಲ್ಲೂಕು ಆಡಳಿತ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿದರು.

ಗ್ರಾಮದ ಸ.ನಂ. 118ರಲ್ಲಿ ಬಾಳೆಕಟ್ಟೆ ಜಮೀನಿನಲ್ಲಿ ಸುಮಾರು 2ರಿಂದ 3 ಎಕರೆ ಗೋಮಾಳವನ್ನು ಬಿ.ಟಿ.ಎಂ.ಕೊಪ್ಪಲು ಗ್ರಾಮದ ಸಣ್ಣತಮ್ಮೇಗೌಡ ಎಂಬವರು ಒತ್ತುವರಿ ಮಾಡಿಕೊಂಡಿದ್ದು, ಇವರು ಈಗಾಗಲೇ ಗ್ರಾಮದಲ್ಲಿ ಸರಿ ಸುಮಾರು ೨೫ ಎಕರೆ ಭೂಮಿ ಹಿಡುವಳಿದಾರರಾಗಿದ್ದು, ಗೋಮಾಳವನ್ನು ಅಕ್ರಮಿಸಿಕೊಂಡು ಸರ್ಕಾರಕ್ಕೆ ಅನ್ಯಾಯ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.

ಈ ಗೋಮಾಳ ಒತ್ತುವರಿ ತೆರವಿನ ಬಗ್ಗೆ ಚೆಲುವರಾಜ್ ಎಂಬವರು ತಹಸಿಲ್ದಾರ್‌ರವರಿಗೆ ದೂರು ಸಲ್ಲಿಸಿದ್ದರೂ ಯಾವುದೇ ಕ್ರಮವಹಿಸದಿರುವುದು ಬೇಸರದ ಸಂಗತಿಯಾಗಿದೆ. ಒತ್ತುವರಿ ಮಾಡಿರುವ ವ್ಯಕ್ತಿಯು ಗೋಮಾಳಕ್ಕೆ ಬಾಳೆ ಗಿಡಗಳನ್ನು ಹಾಕುವುದು ಮತ್ತು ಅಡಕೆ ತೋಟ ಮಾಡಲು ಮುಂದಾಗಿದ್ದಾರೆ. ಆದ್ದರಿಂದ ಈ ಕೂಡಲೇ ಕ್ರಮವಹಿಸಿ ಸಂಬಂಧಪಟ್ಟ ಗೋಮಾಳವನ್ನು ತೆರವು ಮಾಡಿ ಗ್ರಾಮದ ಜಾನುವಾರುಗಳು ಮೇಯಲು ಮತ್ತು ಗ್ರಾಮದ ಎಲ್ಲಾ ಜನರಿಗೆ ಅನುಕೂಲವಾಗುವಂತೆ ಅವಕಾಶ ಕಲ್ಪಿಸಿಕೊಡಬೇಕೆಂದು ಗ್ರಾಮಸ್ಥರು ಒತ್ತಾಯಿತಿಸಿದರು.

ಮನವಿ ಪತ್ರವನ್ನು ಉಪ ತಹಸಿಲ್ದಾರ್ ವಿನೋದ್ ಕುಮಾರ್ ಮತ್ತು ಶಿರಸ್ತೆದಾರ್ ಶಕೀಲಾ ಬಾನು ರವರಿಗೆ ನೀಡಲಾಯಿತು. ಪುರಸಭೆ ನಾಮನಿರ್ದೇಶಿತ ಸದಸ್ಯ ಸಿ.ತಮಣ್ಣಯ್ಯ, ಗ್ರಾಪಂ ಮಾಜಿ ಸದಸ್ಯರಾದ ರಾಜು, ಶಶಿಧರ್, ಮುಖಂಡರಾದ ಚೆಲುವರಾಜ್, ಆರ್.ಡಿ.ಮಹದೇವ್, ಅಬ್ದುಲ್ ವಾಜೀದ್, ಗಣೇಶ, ಕಾಮರಾಜ್, ಚನ್ನಬಸವ, ರಾಜೇಶ್ ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

ಆಂದೋಲನ ಡೆಸ್ಕ್

Recent Posts

ಗಂಡು ಮಗುವಿಗೆ ಜನ್ಮ ನೀಡಿದ ಡಾಲಿ ಧನಂಜಯ್ ಪತ್ನಿ ಧನ್ಯತಾ

ಸ್ಯಾಂಡಲ್‌ವುಡ್‌ ನಟ ಡಾಲಿ ಧನಂಜಯ್‌ ಹಾಗೂ ಧನ್ಯತಾ ದಂಪತಿಗೆ ಗಂಡು ಮಗು ಜನಿಸಿದೆ. ಈ ಸಿಹಿ ಸುದ್ದಿಯನ್ನು ಡಾಲಿ ಧನಂಜಯ್‌…

36 mins ago

ನೇಪಾಳದ ರೋಲ್ಪಾದಲ್ಲಿ ಪ್ರಪಾತಕ್ಕೆ ಬಿದ್ದ ಜೀಪ್:‌ 20 ಮಂದಿ ಸಾವು

ಕಠ್ಮಂಡು: ಜೀಪ್‌ ಪ್ರಪಾತಕ್ಕೆ ಬಿದ್ದು 20 ಮಂದಿ ಸಾವನ್ನಪ್ಪಿರುವ ಘಟನೆ ನೇಪಾಳದ ರೋಲ್ಪಾದಲ್ಲಿ ನಡೆದಿದ್ದು, ಭಾರೀ ಮಳೆಯಿಂದ ರಕ್ಷಣಾ ಕಾರ್ಯಾಚರಣೆಗೆ…

4 hours ago

ಈ ತಿಂಗಳು ಸಾಮಾನ್ಯಕ್ಕಿಂತ ಹೆಚ್ಚಿನ ಮಳೆ: ಅಧಿಕ ಉಷ್ಣಾಂಶ

ನವದೆಹಲಿ: ಈ ಬಾರಿ ಮೇ ತಿಂಗಳಿನಲ್ಲಿ ದೇಶದ ಹಲವೆಡೆ ಸಾಮಾನ್ಯಕ್ಕಿಂತ ಹೆಚ್ಚಿನ ಮಳೆ ಹಾಗೂ ಹೆಚ್ಚಿನ ಉಷ್ಣಾಂಶ ದಾಖಲಾಗಲಿದೆ ಎಂದು…

4 hours ago

ಪಾಕಿಸ್ತಾನದಲ್ಲಿ ಮತ್ತೊಬ್ಬ ಉಗ್ರ ನಿಗೂಢ ಸಾವು

ಇಸ್ಲಾಮಾಬಾದ್:‌ ನಿಷೇಧಿತ ಸಂಘಟನೆ ಜೈಶ್-ಎ-ಮೊಹಮ್ಮದ್‌ನ ಉನ್ನತ ಕಮಾಂಡರ್‌ ಪಾಕಿಸ್ತಾನದ ಬಹಾವಲ್ಪುರದಲ್ಲಿ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾನೆ. ಉನ್ನತ ಉಗ್ರಗಾಮಿ ಕಾರ್ಯಕರ್ತನನ್ನು ಅಪರಿಚಿತ ವಾಹನವೊಂದು…

4 hours ago

ಏಪ್ರಿಲ್‌ನಲ್ಲಿ ಹೊಸ ದಾಖಲೆಯ 2.43 ಲಕ್ಷ ಕೋಟಿ ರೂ ಜಿಎಸ್‌ಟಿ ಸಂಗ್ರಹ

ನವದೆಹಲಿ: ಅಮೇರಿಕಾ-ಇರಾನ್‌ ಯುದ್ಧದ ಹೊರತಾಗಿಯೂ ಏಪ್ರಿಲ್.‌2026ರಲ್ಲಿ ಒಟ್ಟು ಜಿಎಸ್‌ಟಿ ಸಂಗ್ರಹವು ದಾಖಲೆಗರಿಷ್ಠ ರೂ 2.43 ಲಕ್ಷ ಕೋಟಿ ತಲುಪಿದೆ. ಏಪ್ರಿಲ್‌ನಲ್ಲಿ…

4 hours ago

ಗ್ಯಾಸ್ ಬೆಲೆ ಗಗನಕ್ಕೆ : ಕೇಂದ್ರದ ವಿರುದ್ಧ ಸಿಎಂ ಸಿದ್ದರಾಮಯ್ಯ ವಾಗ್ದಾಳಿ

ಬೆಂಗಳೂರು : ವಿಧಾನಸಭಾ ಚುನಾವಣೆ ಮುಗಿಯುತ್ತಿದ್ದಂತೆ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರವನ್ನು 993 ರೂ. ಏಕಾಏಕಿ ಹೆಚ್ಚಿಸಿರುವ ಕೇಂದ್ರ ಸರ್ಕಾರದ…

15 hours ago