ಮೈಸೂರು

ಗೋಮಾಳ ಒತ್ತುವರಿ ತೆರವಿಗೆ ಒತ್ತಾಯಿಸಿ ಪ್ರತಿಭಟನೆ

ಪಿರಿಯಾಪಟ್ಟಣ : ಗೋಮಾಳ ಒತ್ತುವರಿ ತೆರವುಗೊಳಿಸಿ ಸಾರ್ವಜನಿಕ ಉಪಯೋಗಕ್ಕೆ ಅನುವು ಮಾಡಿಕೊಂಡಬೇಕೆಂದು ಒತ್ತಾಯಿಸಿ ಬೆಟ್ಟದತುಂಗಾ ಗ್ರಾಮಸ್ಥರು ತಾಲ್ಲೂಕು ಆಡಳಿತ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿದರು.

ಗ್ರಾಮದ ಸ.ನಂ. 118ರಲ್ಲಿ ಬಾಳೆಕಟ್ಟೆ ಜಮೀನಿನಲ್ಲಿ ಸುಮಾರು 2ರಿಂದ 3 ಎಕರೆ ಗೋಮಾಳವನ್ನು ಬಿ.ಟಿ.ಎಂ.ಕೊಪ್ಪಲು ಗ್ರಾಮದ ಸಣ್ಣತಮ್ಮೇಗೌಡ ಎಂಬವರು ಒತ್ತುವರಿ ಮಾಡಿಕೊಂಡಿದ್ದು, ಇವರು ಈಗಾಗಲೇ ಗ್ರಾಮದಲ್ಲಿ ಸರಿ ಸುಮಾರು ೨೫ ಎಕರೆ ಭೂಮಿ ಹಿಡುವಳಿದಾರರಾಗಿದ್ದು, ಗೋಮಾಳವನ್ನು ಅಕ್ರಮಿಸಿಕೊಂಡು ಸರ್ಕಾರಕ್ಕೆ ಅನ್ಯಾಯ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.

ಈ ಗೋಮಾಳ ಒತ್ತುವರಿ ತೆರವಿನ ಬಗ್ಗೆ ಚೆಲುವರಾಜ್ ಎಂಬವರು ತಹಸಿಲ್ದಾರ್‌ರವರಿಗೆ ದೂರು ಸಲ್ಲಿಸಿದ್ದರೂ ಯಾವುದೇ ಕ್ರಮವಹಿಸದಿರುವುದು ಬೇಸರದ ಸಂಗತಿಯಾಗಿದೆ. ಒತ್ತುವರಿ ಮಾಡಿರುವ ವ್ಯಕ್ತಿಯು ಗೋಮಾಳಕ್ಕೆ ಬಾಳೆ ಗಿಡಗಳನ್ನು ಹಾಕುವುದು ಮತ್ತು ಅಡಕೆ ತೋಟ ಮಾಡಲು ಮುಂದಾಗಿದ್ದಾರೆ. ಆದ್ದರಿಂದ ಈ ಕೂಡಲೇ ಕ್ರಮವಹಿಸಿ ಸಂಬಂಧಪಟ್ಟ ಗೋಮಾಳವನ್ನು ತೆರವು ಮಾಡಿ ಗ್ರಾಮದ ಜಾನುವಾರುಗಳು ಮೇಯಲು ಮತ್ತು ಗ್ರಾಮದ ಎಲ್ಲಾ ಜನರಿಗೆ ಅನುಕೂಲವಾಗುವಂತೆ ಅವಕಾಶ ಕಲ್ಪಿಸಿಕೊಡಬೇಕೆಂದು ಗ್ರಾಮಸ್ಥರು ಒತ್ತಾಯಿತಿಸಿದರು.

ಮನವಿ ಪತ್ರವನ್ನು ಉಪ ತಹಸಿಲ್ದಾರ್ ವಿನೋದ್ ಕುಮಾರ್ ಮತ್ತು ಶಿರಸ್ತೆದಾರ್ ಶಕೀಲಾ ಬಾನು ರವರಿಗೆ ನೀಡಲಾಯಿತು. ಪುರಸಭೆ ನಾಮನಿರ್ದೇಶಿತ ಸದಸ್ಯ ಸಿ.ತಮಣ್ಣಯ್ಯ, ಗ್ರಾಪಂ ಮಾಜಿ ಸದಸ್ಯರಾದ ರಾಜು, ಶಶಿಧರ್, ಮುಖಂಡರಾದ ಚೆಲುವರಾಜ್, ಆರ್.ಡಿ.ಮಹದೇವ್, ಅಬ್ದುಲ್ ವಾಜೀದ್, ಗಣೇಶ, ಕಾಮರಾಜ್, ಚನ್ನಬಸವ, ರಾಜೇಶ್ ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

ಆಂದೋಲನ ಡೆಸ್ಕ್

Recent Posts

ಮೈಸೂರು | ಠಾಣಾ ಮಟ್ಟದಲ್ಲಿ ರೌಡಿ ಪ್ರತಿಬಂಧಕ ದಳ ಸ್ಥಾಪನೆ

ಮೈಸೂರು : ನಗರದಲ್ಲಿ ರೌಡಿಗಳ ಚಟುವಟಿಕೆಯನ್ನು ಹತ್ತಿಕ್ಕಲು ಮುಂದಾಗಿರುವ ನಗರ ಪೊಲೀಸ್ ಆಯುಕ್ತರಾದ ಸೀಮಾ ಲಾಟ್ಕರ್ ಅವರು, ಸರ್ಕಾರದ ಆದೇಶದನ್ವಯ…

3 hours ago

ಮೈಸೂರು ʼಜಯದೇವʼಕ್ಕೆ ಹೃದಯ ಬಿರಿಯುವಷ್ಟು ಒತ್ತಡ

ಮೈಸೂರು: ದಶಕಗಳ ಹಿಂದೆ ಖಾಸಗಿ ಆಸ್ಪತ್ರೆಗಳಲ್ಲಿ ಹೃದಯ ಸಂಬಂಧಿ ಕಾಯಿಲೆಗಳಿಗೆ ದುಬಾರಿ ವೆಚ್ಚದ ಚಿಕಿತ್ಸೆ ಪಡೆಯುವುದನ್ನು ತಗ್ಗಿಸುವ ಜತೆಗೆ ಬೆಂಗಳೂರಿನ…

4 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ : ಚಿತ್ರೋದ್ಯಮವೂ ಪೈರಸಿ ಎಂಬ ಪೆಡಂಬೂತವೂ

ನಾಳಿದ್ದು 21ರಂದು ನಡೆಯುವ ನೀಟ್ ಪರೀಕ್ಷೆಯ ಹಿನ್ನೆಲೆಯಲ್ಲಿ ಟೆಲಿಗ್ರಾಂ ಆಪ್‌ಅನ್ನು ಜೂ. 27ರ ವರೆಗೆ ತಾತ್ಕಾಲಿಕವಾಗಿ ಕೇಂದ್ರ ಸರ್ಕಾರ ಬ್ಯಾನ್…

4 hours ago

ಮೀಸಲಾತಿ ಸಾಂವಿಧಾನಿಕ ಹಕ್ಕು ; ಸಮಾನತೆಯ ಮೆಟ್ಟಿಲು

ಮೀಸಲಾತಿ ಸೌಲಭ್ಯ ಇದ್ದರೂ ಕಠಿಣ ಪರೀಕ್ಷೆ ಪಾಸ್ ಮಾಡಲೇಬೇಕು ಟಿ.ಕೆ. ಹರೀಶ್ ಐತಿಹಾಸಿಕವಾಗಿ ಮತ್ತು ಸಾಮಾಜಿಕವಾಗಿ ಶೋಷಣೆಗೊಳಗಾಗಿ, ಶಿಕ್ಷಣ ಹಾಗೂ…

4 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜೂನ್‌ 19  ಶುಕ್ರವಾರ  

5 hours ago

ಮುಂಗಾರು ಮತ್ತೆ ಚುರುಕು ; ಮೈಸೂರು, ಮಂಡ್ಯ, ಕೊಡಗಿನಲ್ಲಿ ಮಳೆ ಸಾಧ್ಯತೆ

ಬೆಂಗಳೂರು : ಕರ್ನಾಟಕದಲ್ಲಿ ಮುಂಗಾರು ಮತ್ತೆ ಚುರುಕುಗೊಂಡಿದ್ದು, ಕರಾವಳಿ, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ…

13 hours ago