ಮೈಸೂರು

ಹುಣಸೂರು: ಮಾರ್ಚ್‌.1ಕ್ಕೆ ರಾಗಿ ಖರೀದಿ ಕೇಂದ್ರಕ್ಕಾಗಿ ಪ್ರತಿಭಟನೆ

ಮೈಸೂರು: ಜಿಲ್ಲೆಯ ಹುಣಸೂರು ತಾಲ್ಲೂಕಿನ ಉಪವಿಭಾಗಾಧಿಕಾರಿ ಕಚೇರಿ ಎದುರು ಮಾರ್ಚ್‌.1 ರಂದು ಬೆಂಬಲ ಬೆಲೆಯಲ್ಲಿ ರಾಗಿ ಖರೀದಿ ಕೇಂದ್ರವನ್ನು ಶೀಘ್ರವೇ ಆರಂಭಿಸಬೇಕೆಂದು ಆಗ್ರಹಿಸಿ ರೈತ ಸಂಘದಿಂದ ಪ್ರತಿಭಟನೆ ನಡೆಸಲಾಗುವುದು ಎಂದು ರೈತ ಸಂಘದ ಜಿಲ್ಲಾಧ್ಯಕ್ಷ ಹೊಸೂರು ಕುಮಾರ್‌ ತಿಳಿಸಿದ್ದಾರೆ.

ಈ ಕುರಿತು ಇಂದು(ಫೆಬ್ರವರಿ.25) ಪತ್ರಿಕಾ ಹೇಳಿಕೆ ನೀಡಿರುವ ಅವರು, ರಾಜ್ಯದಲ್ಲಿ ಅಧಿಕ ಪ್ರಮಾಣದಲ್ಲಿ ರಾಗಿ ಬೆಳೆಯುವವರು ಹಳೇ ಮೈಸೂರು ಭಾಗದವರಾಗಿದ್ದಾರೆ. ಆದರೆ ಈ ಭಾಗದ ರೈತರು ಆರ್ಥಿಕ ಸಮಸ್ಯೆ ಎದುರಿಸುತ್ತಿದ್ದು, ದಲ್ಲಾಳಿಗಳಿಗೆ ಕಡಿಮೆ ದರದಲ್ಲಿ ರಾಗಿ ಮಾರಾಟ ಮಾಡುತ್ತಿದ್ದಾರೆ. ಹಾಗಾಗಿ ರೈತರು ನಷ್ಟ ಎದುರಿಸುವಂತಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ರಾಜ್ಯ ಸರ್ಕಾರ ರೈತರಿಗೆ ಉಪಯೋಗವಾಗುವಂತಹ ಯಾವುದೇ ಯೋಜನೆಗಳನ್ನು ಸಮಯಕ್ಕೆ ಸರಿಯಾಗಿ ಆರಂಭಿಸುತ್ತಿಲ್ಲ. ಅಲ್ಲದೇ ಭತ್ತ ಖರೀದಿ ಕೇಂದ್ರ, ರಾಗಿ ಮತ್ತು ಮುಸುಕಿನ ಜೋಳಕ್ಕೆ ವೈಜ್ಞಾನಿಕ ದರ ನಿಗಧಿ ಮಾಡಿದ್ದರೂ ಸಹ ಖರೀದಿ ಕೇಂದ್ರ ಸಕಾಲಕ್ಕೆ ಪ್ರಾರಂಭಿಸುವ ಪ್ರಯತ್ನವನ್ನು ಸರ್ಕಾರ ಮಾಡದೇ ವೈಜ್ಞಾನಿಕ ದರ ಇದ್ದರೂ ರೈತರಿಗೆ ಅನುಕೂಲವಾಗುತ್ತಿಲ್ಲ ಎಂದು ಆರೋಪ ಮಾಡಿದ್ದಾರೆ.

ಇನ್ನು ರೈತರ ಬೆಳೆ ದಲ್ಲಾಳಿಗಳ ಪಾಲಾಗುತ್ತಿದ್ದು, ಎಪಿಎಂಸಿ ಇದ್ದರೂ ಕೂಡ ಯಾಔಉದೇ ಅನುಕೂಲವಾಗದೇ ತಮ್ಮ ತಮ್ಮ ಹೊಲಗಳಲ್ಲಿಯೇ ಫಸಲಿನ ದರ ನಿಗಧಿಗೊಳಿಸಿ ದಲ್ಲಾಳಿಗಳಿಗೆ ಮಾರಾಟ ಮಾಡುತ್ತಿದ್ದಾರೆ. ರೈತರು ಈ ಮೂಲಕ ತಾವು ಬೆಳೆದ ಬೆಳೆಗಳನ್ನು ಕಡಿಮೆ ದರಕ್ಕೆ ದಲ್ಲಾಳಿಗಳಿಗೆ ಮಾರಾಟ ಮಾಡಿ ಬಂದ ಹಣವನ್ನು ತಮ್ಮ ಕಷ್ಟಗಳಿಗೆ ಬಳಸಿಕೊಳ್ಳುವ ಪರಿಸ್ಥಿತಿ ಎದುರಾಗಿದೆ. ಹೀಗಾಗಿ ಸರ್ಕಾರ ರಾಗಿ ಖರೀದಿಸುವ ಕೇಂದ್ರಕ್ಕೆ ಚಾಲನೇ ನೀಡಬೇಕು ಎಂದು ಆಗ್ರಹಿಸಿದ್ದಾರೆ.

ಅರ್ಚನ ಎಸ್‌ ಎಸ್

Recent Posts

ಟಿಎಎಸ್‌ಎಂಎಸಿ ವಿರುದ್ಧ ಪ್ರತಿಭಟನೆ: ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈ ಪೊಲೀಸ್‌ ವಶಕ್ಕೆ

ಚೆನ್ನೈ: ಸರ್ಕಾರಿ ಸ್ವಾಮ್ಯದ ಮದ್ಯ ಮಾರಾಟ ಮಳಿಗೆ ಟಿಎಎಸ್‌ಎಂಸಿ ನಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಿ ಪ್ರತಿಭಟನೆ ಆಯೋಜಿಸಿದ್ದ ತಮಿಳುನಾಡು…

8 mins ago

ನಟ ಪುನೀತ್‌ 50ನೇ ಹುಟ್ಟು ಹಬ್ಬ: ಕುಟುಂಬಸ್ಥರಿಂದ ಸಮಾಧಿಗೆ ಪೂಜೆ

ಬೆಂಗಳೂರು: ಇಂದು ನಟ ದಿವಂಗತ ಪುನೀತ್‌ ರಾಜ್‌ಕುಮಾರ್‌ ಅವರ 50ನೇ ವರ್ಷದ ಜನ್ಮದಿನ ಹಿನ್ನಲೆಯಲ್ಲಿ ಕಂಠೀರವ ಸ್ಟುಡಿಯೋದಲ್ಲಿನ ಅಪ್ಪು ಸಮಾಧಿಗೆ…

25 mins ago

ಮಳೆಯ ನೆನಪು. . . ಮನದ ಕಡಲು

‘ಆಂದೋಲನ’ ಸಂದರ್ಶನದಲ್ಲಿ ಯೋಗರಾಜ್ ಭಟ್ ಮನದ ಮಾತು ಚಿರಂಜೀವಿ ಸಿ. ಹುಲ್ಲಹಳ್ಳಿ ಮೈಸೂರು: ಕನ್ನಡ ಸಿನಿ ಪ್ರೇಕ್ಷಕರನ್ನು ‘ಮುಂಗಾರು ಮಳೆ’ಯಲ್ಲಿ…

1 hour ago

ತಂತ್ರಜ್ಞಾನದ ಬಳಕೆ; ʼಸಕಾಲದಲ್ಲಿʼ ದಾಖಲೆ ಲಭ್ಯ

ಸಾಲಿಗ್ರಾಮ ತಾಲ್ಲೂಕಿನ ಮಿರ್ಲೆ ನಾಡಕಚೇರಿಯ ಕಾರ್ಯವೈಖರಿಗೆ ಮೆಚ್ಚುಗೆ ಕೆ.ಟಿ.ಮೋಹನ್‌ ಕುಮಾರ್‌ ಸಾಲಿಗ್ರಾಮ: ಸರ್ಕಾರದ ವಿವಿಧ ಇಲಾಖೆಗಳಲ್ಲಿ ಆಧುನಿಕ ತಂತ್ರಜ್ಞಾನವನ್ನು ಅಳವಡಿಸಿದ್ದರೂ…

1 hour ago

ಲೋಡ್‌ ಶೆಡ್ಡಿಂಗ್‌ ಬರೆಗೆ ಹೈರಾಣಾದ ಜನ..!

ವಿದ್ಯುತ್ ಕಣ್ಣಾಮುಚ್ಚಾಲೆಗೆ ವಿದ್ಯಾರ್ಥಿಗಳು ಕಂಗಾಲು; ಕುಡಿಯುವ ನೀರಿಗೂ ಹಾಹಾಕಾರ ಕೃಷ್ಣ ಸಿದ್ದಾಪುರ ಸಿದ್ದಾಪುರ: ನಿರಂತರ ವಿದ್ಯುತ್ ಲೋಡ್ ಶೆಡ್ಡಿಂಗ್‌ನಿಂದ ಜನತೆ…

2 hours ago

ಶಾಂತಿಯ ತೋಟದಲ್ಲಿ ವಿಷ ಬೀಜ ಬಿತ್ತುವ ಕೆಲಸ: ಬಿವೈವಿ ಆರೋಪ

ಬೆಂಗಳೂರು: ಸರ್ವ ಜನಾಂಗದ ಶಾಂತಿಯ ತೋಟದಲ್ಲಿ ಕಾಂಗ್ರೆಸ್‌ನವರೇ ವಿಷ ಬೀಜ ಬಿತ್ತುವ ಕೆಲಸ ಮಾಡುತ್ತಿದ್ದಾರೆ ಎಂದು ಹೇಳುವ ಮೂಲಕ ಡಿಸಿಎಂ…

2 hours ago