ಮೈಸೂರು

ಹುಣಸೂರು: ಮಾರ್ಚ್‌.1ಕ್ಕೆ ರಾಗಿ ಖರೀದಿ ಕೇಂದ್ರಕ್ಕಾಗಿ ಪ್ರತಿಭಟನೆ

ಮೈಸೂರು: ಜಿಲ್ಲೆಯ ಹುಣಸೂರು ತಾಲ್ಲೂಕಿನ ಉಪವಿಭಾಗಾಧಿಕಾರಿ ಕಚೇರಿ ಎದುರು ಮಾರ್ಚ್‌.1 ರಂದು ಬೆಂಬಲ ಬೆಲೆಯಲ್ಲಿ ರಾಗಿ ಖರೀದಿ ಕೇಂದ್ರವನ್ನು ಶೀಘ್ರವೇ ಆರಂಭಿಸಬೇಕೆಂದು ಆಗ್ರಹಿಸಿ ರೈತ ಸಂಘದಿಂದ ಪ್ರತಿಭಟನೆ ನಡೆಸಲಾಗುವುದು ಎಂದು ರೈತ ಸಂಘದ ಜಿಲ್ಲಾಧ್ಯಕ್ಷ ಹೊಸೂರು ಕುಮಾರ್‌ ತಿಳಿಸಿದ್ದಾರೆ.

ಈ ಕುರಿತು ಇಂದು(ಫೆಬ್ರವರಿ.25) ಪತ್ರಿಕಾ ಹೇಳಿಕೆ ನೀಡಿರುವ ಅವರು, ರಾಜ್ಯದಲ್ಲಿ ಅಧಿಕ ಪ್ರಮಾಣದಲ್ಲಿ ರಾಗಿ ಬೆಳೆಯುವವರು ಹಳೇ ಮೈಸೂರು ಭಾಗದವರಾಗಿದ್ದಾರೆ. ಆದರೆ ಈ ಭಾಗದ ರೈತರು ಆರ್ಥಿಕ ಸಮಸ್ಯೆ ಎದುರಿಸುತ್ತಿದ್ದು, ದಲ್ಲಾಳಿಗಳಿಗೆ ಕಡಿಮೆ ದರದಲ್ಲಿ ರಾಗಿ ಮಾರಾಟ ಮಾಡುತ್ತಿದ್ದಾರೆ. ಹಾಗಾಗಿ ರೈತರು ನಷ್ಟ ಎದುರಿಸುವಂತಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ರಾಜ್ಯ ಸರ್ಕಾರ ರೈತರಿಗೆ ಉಪಯೋಗವಾಗುವಂತಹ ಯಾವುದೇ ಯೋಜನೆಗಳನ್ನು ಸಮಯಕ್ಕೆ ಸರಿಯಾಗಿ ಆರಂಭಿಸುತ್ತಿಲ್ಲ. ಅಲ್ಲದೇ ಭತ್ತ ಖರೀದಿ ಕೇಂದ್ರ, ರಾಗಿ ಮತ್ತು ಮುಸುಕಿನ ಜೋಳಕ್ಕೆ ವೈಜ್ಞಾನಿಕ ದರ ನಿಗಧಿ ಮಾಡಿದ್ದರೂ ಸಹ ಖರೀದಿ ಕೇಂದ್ರ ಸಕಾಲಕ್ಕೆ ಪ್ರಾರಂಭಿಸುವ ಪ್ರಯತ್ನವನ್ನು ಸರ್ಕಾರ ಮಾಡದೇ ವೈಜ್ಞಾನಿಕ ದರ ಇದ್ದರೂ ರೈತರಿಗೆ ಅನುಕೂಲವಾಗುತ್ತಿಲ್ಲ ಎಂದು ಆರೋಪ ಮಾಡಿದ್ದಾರೆ.

ಇನ್ನು ರೈತರ ಬೆಳೆ ದಲ್ಲಾಳಿಗಳ ಪಾಲಾಗುತ್ತಿದ್ದು, ಎಪಿಎಂಸಿ ಇದ್ದರೂ ಕೂಡ ಯಾಔಉದೇ ಅನುಕೂಲವಾಗದೇ ತಮ್ಮ ತಮ್ಮ ಹೊಲಗಳಲ್ಲಿಯೇ ಫಸಲಿನ ದರ ನಿಗಧಿಗೊಳಿಸಿ ದಲ್ಲಾಳಿಗಳಿಗೆ ಮಾರಾಟ ಮಾಡುತ್ತಿದ್ದಾರೆ. ರೈತರು ಈ ಮೂಲಕ ತಾವು ಬೆಳೆದ ಬೆಳೆಗಳನ್ನು ಕಡಿಮೆ ದರಕ್ಕೆ ದಲ್ಲಾಳಿಗಳಿಗೆ ಮಾರಾಟ ಮಾಡಿ ಬಂದ ಹಣವನ್ನು ತಮ್ಮ ಕಷ್ಟಗಳಿಗೆ ಬಳಸಿಕೊಳ್ಳುವ ಪರಿಸ್ಥಿತಿ ಎದುರಾಗಿದೆ. ಹೀಗಾಗಿ ಸರ್ಕಾರ ರಾಗಿ ಖರೀದಿಸುವ ಕೇಂದ್ರಕ್ಕೆ ಚಾಲನೇ ನೀಡಬೇಕು ಎಂದು ಆಗ್ರಹಿಸಿದ್ದಾರೆ.

ಅರ್ಚನ ಎಸ್‌ ಎಸ್

Recent Posts

ಓದುಗರ ಪತ್ರ: ಮೇಕೆದಾಟು ಯೋಜನೆ ಶೀಘ್ರ ಅನುಷ್ಠಾನವಾಗಲಿ

ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…

6 hours ago

ಓದುಗರ ಪತ್ರ: ಫುಟ್‌ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ಚುರುಕುಗೊಳ್ಳಲಿ

ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್‌ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…

6 hours ago

ಓದುಗರ ಪತ್ರ: ಕೂಡ್ಲಾಪುರ ಗ್ರಾಮಕ್ಕೆ ಕಬಿನಿ ನೀರು ಕೊಡಿ

ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…

6 hours ago

ಗಾಮೀಣ ಜನರ ಏಳಿಗೆಗೆ IHDUA ಪಣ

ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್‌ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…

6 hours ago

ಸತ್ಯಮಂಗಲ-ಮೀಣ್ಯಂ ರಸ್ತೆಯಲ್ಲಿ ಸಂಚಾರ ದುಸ್ತರ

ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…

6 hours ago

ಪಿರಿಯಾಪಟ್ಟಣ: ಗರಿಗೆದರಿದ ತಂಬಾಕು ಕೃಷಿ ಚಟುವಟಿಕೆ

ನವೀನ್‌ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…

6 hours ago