ಎಚ್.ಡಿ.ಕೋಟೆ : ಒಕ್ಕಲಿಗ ಸಮುದಾಯ ಮತ್ತು ಮುಖಂಡರ ಬಗ್ಗೆ ಅಶ್ಲೀಲ ಪದಗಳಿಂದ ನಿಂದನೆ ಮಾಡಿರುವ ಕಾಂಗ್ರೆಸ್ ಮುಖಂಡ, ಬೋವಿ ಅಭಿವೃದ್ಧಿ ನಿಗಮದ ಮಾಜಿ ಅಧ್ಯಕ್ಷ ಬೀಚನಹಳ್ಳಿ ಸೀತಾರಾಮ್ ಅವರನ್ನು ಮೈಸೂರು ಜಿಲ್ಲೆಯಿಂದಲೇ ಗಡಿಪಾರು ಮಾಡಬೇಕು ಎಂದು ಮಾಜಿ ಸಂಸದ ಪ್ರತಾಪ್ ಸಿಂಹ ಆಗ್ರಹಿಸಿದರು.
ತಾಲ್ಲೂಕು ಒಕ್ಕಲಿಗರ ಸಮುದಾಯದ ವತಿಯಿಂದ ಪಟ್ಟಣದಲ್ಲಿ ನಡೆದ ಬೃಹತ್ ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಸೀತಾರಾಮ್ ವಿರುದ್ಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಿ ಅವರು ಅಕ್ರಮವಾಗಿ ಕಬಳಿಸಲು ಮುಂದಾಗಿರುವ ಕಬಿನಿ ಜಲಾಶಯದ ಸಮೀಪದಲ್ಲಿರುವ ಜಮೀನನ್ನು ಸರ್ಕಾರ ವಾಪಸ್ ತೆಗೆದುಕೊಳ್ಳಬೇಕೆಂದು ಆಗ್ರಹಿಸಿದರು.
ರಾಜ್ಯದ ಅಭಿವೃದ್ಧಿಗೆ ಶ್ರಮಿಸಿದ ನಾಡಪ್ರಭು ಕೆಂಪೇಗೌಡ, ನಾಡಗೀತೆ ರಚಿಸಿದ ರಾಷ್ಟ್ರಕವಿ ಕುವೆಂಪು, ರೈತರ ಭೂಮಿಗಳಿಗೆ ನೀರು ಒದಗಿಸಲು ಶ್ರಮಿಸಿದ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ, ರಾಜ್ಯದ ಅಭಿವೃದ್ಧಿಗೆ ಸಹಕರಿಸಿದ ಎಸ್.ಎಂ. ಕೃಷ್ಣ ಒಕ್ಕಲಿಗ ಸಮುದಾಯ ಮತ್ತು ಸಮುದಾಯದ ಮುಖಂಡರುಗಳ ಬಗ್ಗೆ ಜಿ.ವಿ.ಸೀತಾರಾಮ್ ಅವಹೇಳನಕಾರಿಯಾಗಿ ಮಾತನಾಡಿರುವುದು ಒಕ್ಕಲಿಗರನ್ನು ಆಕ್ರೋಶಗೊಳ್ಳುವಂತೆ ಮಾಡಿದೆ. ದೇಶದ ಬೆನ್ನೆಲುಬುಬಾಗಿ ಒಕ್ಕಲುತನ ಮಾಡಿ ರೈತಾಪಿ ವರ್ಗದ ಮೂಲಕ ಗುರುತಿಸಿಕೊಂಡು ತಮ್ಮ ಪಾಡಿಗೆ ಜೀವನ ನಡೆಸುತ್ತಿರುವ ಒಕ್ಕಲಿಗ ಸಮುದಾಯದ ಬಗ್ಗೆ ಹಗುರವವಾಗಿ ಮಾತನಾಡುವ ನೈತಿಕತೆ ಯಾರಿಗೂ ಇಲ್ಲ. ಒಂದು ಸಮುದಾಯ ಹಾಗೂ ಮುಖಂಡರ ಬಗ್ಗೆ ಮಾತನಾಡಬೇಕಾದರೆ ಪರಿಜ್ಞಾನ ಇಟ್ಟುಕೊಂಡು ಮಾತನಾಡಬೇಕು. ತಾಲ್ಲೂಕಿಗೆ ಸೀತಾರಾಮ್ ಬಂದರೆ ಆತನನ್ನು ತಾಲ್ಲೂಕಿನಿಂದ ಹೊರಗೆ ಕಳುಹಿಸುವವರೆಗೂ ಹೋರಾಟ ನಡೆಸಬೇಕು ಎಂದು ಕರೆ ನೀಡಿದರು.
ಪಟ್ಟಣದ ಗದ್ದಿಗೆ ಸರ್ಕಲ್ನಿಂದ ತಾಲ್ಲೂಕು ಆಡಳಿತ ಕಚೇರಿಯವರೆಗೆ ಸಾವಿರಾರು ಜನರು ಬೃಹತ್ ಪ್ರತಿಭಟನೆ ಮೆರವಣಿಗೆ ನಡೆಸಿ, ಜಿ.ವಿ. ಸೀತಾರಾಮ್ ಅವರ ಪ್ರತಿಕೃತಿ ದಹನ ಮಾಡಿದರು. ನಂತರ ತಹಸಿಲ್ದಾರ್ ಶ್ರೀನಿವಾಸ್ ಅವರಿಗೆ ಮನವಿ ಪತ್ರ ಸಲ್ಲಿಸಲಾಯಿತು.
ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ಗಾಳಿ ಮಳೆಗೆ ಜಗಲಿ ಕಟ್ಟೆಯ ಬುಗರಿ ಮರ ಬಿದ್ದು ಮನೆ ಜಖಂಗೊಂಡಿರುವ…
ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ತಾಲ್ಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಮದ್ದೂರು ವಲಯದ ಮಾರಿಗುಡಿ ಬೀಟ್…
ನವದೆಹಲಿ: ದೇಶದಲ್ಲಿ ಕಚ್ಚಾ ತೈಲ ಸಾಕಷ್ಟು ಲಭ್ಯವಿದೆ. ಭಾರತವು ಕಚ್ಚಾ ತೈಲಕ್ಕಾಗಿ ಸಾಕಷ್ಟು ಸಂಗ್ರಹಣಾ ಸೌಲಭ್ಯಗಳು ಮತ್ತು ವಿಶ್ವಾಸಾರ್ಹ ಪೂರೈಕೆ…
ಮೈಸೂರು: ರಸ್ತೆ ಅಪಘಾತದಿಂದ ಹಲವರು ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. ಆದ್ದರಿಂದ ರಸ್ತೆ ಅಪಘಾತಗಳನ್ನು ತಡೆಗಟ್ಟಲು ಕ್ರಮ ಕೈಗೊಳ್ಳಿ ಎಂದು ಜಿಲ್ಲಾಧಿಕಾರಿ ಲಕ್ಷ್ಮೀಕಾಂತರೆಡ್ಡಿ…
ಬೆಂಗಳೂರು: ಮೈಸೂರು ನಗರ ಸೇರಿದಂತೆ ರಾಜ್ಯದಲ್ಲಿರುವ ಪಾರಂಪರಿಕ ಕಟ್ಟಡಗಳ ಸಂರಕ್ಷಣೆಗೆ ಹೆಚ್ಚಿನ ಅನುದಾನ ಒದಗಿಸಬೇಕೆಂದು ಎಂಎಲ್ಸಿ ಕೆ.ಶಿವಕುಮಾರ್ ಒತ್ತಾಯಿಸಿದ್ದಾರೆ. ಈ…
ಬೆಂಗಳೂರು: ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು ಮಾಡಿ ಹೊರಡಿಸಿದ್ದ ಆದೇಶಕ್ಕೆ ಹೈಕೋರ್ಟ್ ಮಧ್ಯಂತರ ತಡೆಯಾಜ್ಞೆ ನೀಡಿದೆ. ತಿಮರೋಡಿ ಅವರನ್ನು ದಕ್ಷಿಣ…