ಎಚ್.ಡಿ.ಕೋಟೆ : ಒಕ್ಕಲಿಗ ಸಮುದಾಯ ಮತ್ತು ಮುಖಂಡರ ಬಗ್ಗೆ ಅಶ್ಲೀಲ ಪದಗಳಿಂದ ನಿಂದನೆ ಮಾಡಿರುವ ಕಾಂಗ್ರೆಸ್ ಮುಖಂಡ, ಬೋವಿ ಅಭಿವೃದ್ಧಿ ನಿಗಮದ ಮಾಜಿ ಅಧ್ಯಕ್ಷ ಬೀಚನಹಳ್ಳಿ ಸೀತಾರಾಮ್ ಅವರನ್ನು ಮೈಸೂರು ಜಿಲ್ಲೆಯಿಂದಲೇ ಗಡಿಪಾರು ಮಾಡಬೇಕು ಎಂದು ಮಾಜಿ ಸಂಸದ ಪ್ರತಾಪ್ ಸಿಂಹ ಆಗ್ರಹಿಸಿದರು.
ತಾಲ್ಲೂಕು ಒಕ್ಕಲಿಗರ ಸಮುದಾಯದ ವತಿಯಿಂದ ಪಟ್ಟಣದಲ್ಲಿ ನಡೆದ ಬೃಹತ್ ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಸೀತಾರಾಮ್ ವಿರುದ್ಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಿ ಅವರು ಅಕ್ರಮವಾಗಿ ಕಬಳಿಸಲು ಮುಂದಾಗಿರುವ ಕಬಿನಿ ಜಲಾಶಯದ ಸಮೀಪದಲ್ಲಿರುವ ಜಮೀನನ್ನು ಸರ್ಕಾರ ವಾಪಸ್ ತೆಗೆದುಕೊಳ್ಳಬೇಕೆಂದು ಆಗ್ರಹಿಸಿದರು.
ರಾಜ್ಯದ ಅಭಿವೃದ್ಧಿಗೆ ಶ್ರಮಿಸಿದ ನಾಡಪ್ರಭು ಕೆಂಪೇಗೌಡ, ನಾಡಗೀತೆ ರಚಿಸಿದ ರಾಷ್ಟ್ರಕವಿ ಕುವೆಂಪು, ರೈತರ ಭೂಮಿಗಳಿಗೆ ನೀರು ಒದಗಿಸಲು ಶ್ರಮಿಸಿದ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ, ರಾಜ್ಯದ ಅಭಿವೃದ್ಧಿಗೆ ಸಹಕರಿಸಿದ ಎಸ್.ಎಂ. ಕೃಷ್ಣ ಒಕ್ಕಲಿಗ ಸಮುದಾಯ ಮತ್ತು ಸಮುದಾಯದ ಮುಖಂಡರುಗಳ ಬಗ್ಗೆ ಜಿ.ವಿ.ಸೀತಾರಾಮ್ ಅವಹೇಳನಕಾರಿಯಾಗಿ ಮಾತನಾಡಿರುವುದು ಒಕ್ಕಲಿಗರನ್ನು ಆಕ್ರೋಶಗೊಳ್ಳುವಂತೆ ಮಾಡಿದೆ. ದೇಶದ ಬೆನ್ನೆಲುಬುಬಾಗಿ ಒಕ್ಕಲುತನ ಮಾಡಿ ರೈತಾಪಿ ವರ್ಗದ ಮೂಲಕ ಗುರುತಿಸಿಕೊಂಡು ತಮ್ಮ ಪಾಡಿಗೆ ಜೀವನ ನಡೆಸುತ್ತಿರುವ ಒಕ್ಕಲಿಗ ಸಮುದಾಯದ ಬಗ್ಗೆ ಹಗುರವವಾಗಿ ಮಾತನಾಡುವ ನೈತಿಕತೆ ಯಾರಿಗೂ ಇಲ್ಲ. ಒಂದು ಸಮುದಾಯ ಹಾಗೂ ಮುಖಂಡರ ಬಗ್ಗೆ ಮಾತನಾಡಬೇಕಾದರೆ ಪರಿಜ್ಞಾನ ಇಟ್ಟುಕೊಂಡು ಮಾತನಾಡಬೇಕು. ತಾಲ್ಲೂಕಿಗೆ ಸೀತಾರಾಮ್ ಬಂದರೆ ಆತನನ್ನು ತಾಲ್ಲೂಕಿನಿಂದ ಹೊರಗೆ ಕಳುಹಿಸುವವರೆಗೂ ಹೋರಾಟ ನಡೆಸಬೇಕು ಎಂದು ಕರೆ ನೀಡಿದರು.
ಪಟ್ಟಣದ ಗದ್ದಿಗೆ ಸರ್ಕಲ್ನಿಂದ ತಾಲ್ಲೂಕು ಆಡಳಿತ ಕಚೇರಿಯವರೆಗೆ ಸಾವಿರಾರು ಜನರು ಬೃಹತ್ ಪ್ರತಿಭಟನೆ ಮೆರವಣಿಗೆ ನಡೆಸಿ, ಜಿ.ವಿ. ಸೀತಾರಾಮ್ ಅವರ ಪ್ರತಿಕೃತಿ ದಹನ ಮಾಡಿದರು. ನಂತರ ತಹಸಿಲ್ದಾರ್ ಶ್ರೀನಿವಾಸ್ ಅವರಿಗೆ ಮನವಿ ಪತ್ರ ಸಲ್ಲಿಸಲಾಯಿತು.
ಕಠ್ಮಂಡು : ಟಿಬೆಟ್ ಗಡಿಗೆ ಹೊಂದಿಕೊಂಡಿರುವ ನೇಪಾಳದ ಉತ್ತರದ ರಸುವಾ ಜಿಲ್ಲೆಯಲ್ಲಿ ಬುಧವಾರ ಸಂಭವಿಸಿದ ಭೀಕರ ಹಠಾತ್ ಪ್ರವಾಹಕ್ಕೆ ಕನಿಷ್ಠ…
ಕಠ್ಮಂಡು : ನೆರೆಯ ರಾಷ್ಟ್ರ ನೇಪಾಳದಲ್ಲಿ ಹಿಮಕುಸಿತದ ಪರಿಣಾಮ ಉಂಟಾದ ಭೀಕರ ಆಕಸ್ಮಿಕ ಪ್ರವಾಹ ಜಲಪ್ರಳಯವನ್ನೇ ಸೃಷ್ಟಿಸಿದೆ. ಕೋಶಿ ನದಿಯ…
ಬೆಂಗಳೂರು: ರಾಜೀನಾಮೆಗೆ ಸಂಬಂಧಿಸಿದ ಯಾವುದೇ ಚರ್ಚೆ ನಡೆದಿಲ್ಲ. ನನ್ನ ರಾಜೀನಾಮೆ ಬಗ್ಗೆ ಕೇಳಿಬರುತ್ತಿರುವ ವರದಿಗಳು ಸಂಪೂರ್ಣವಾಗಿ ಸತ್ಯಕ್ಕೆ ದೂರವಾಗಿವೆ ಎಂದು ಸಚಿವ…
ಹುಣಸೂರು: ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವ 2026ರ ದಸರಾ ಗಜಪಯಣಕ್ಕೆ ಇಂದು ಅದ್ಧೂರಿ ಚಾಲನೆ ದೊರೆತಿದೆ. ಮೈಸೂರು ಜಿಲ್ಲಾ…
ತಮಿಳುನಾಡಿಗೆ ಮುಂದಿನ ಹದಿನೈದು ದಿನಗಳ ಕಾಲ ನಿತ್ಯ ಒಂಬತ್ತು ಸಾವಿರ ಕ್ಯುಸೆಕ್ಸ್ ಕಾವೇರಿ ನದಿ ನೀರು ಹರಿಸಬೇಕಾಗಿರುವುದು ಅಘಾತಕಾರಿ ಸಂಗತಿಯಾಗಿದೆ.…
ಮೈಸೂರು ನಗರವು ‘ಸ್ವಚ್ಛ ನಗರಿ’, ‘ಸಾಂಸ್ಕೃತಿಕ ನಗರಿ’ ಮತ್ತು ‘ಪಾರಂಪರಿಕನಗರಿ’ ಎಂದೇ ಖ್ಯಾತವಾಗಿದೆ. ಆದರೆ, ಇತ್ತೀಚಿನ ದಿನಗಳಲ್ಲಿ ಈ ಹೆಮ್ಮೆಯ…