ಮೈಸೂರು

ಜುಲೈ 18ಕ್ಕೆ ರಾಜ್ಯ ಸರ್ಕಾರದ ವಿರುದ್ಧ ರೈತ ಸಂಘದ ಪ್ರತಿಭಟನೆ

ಮೈಸೂರು: ರಾಜ್ಯ ಸರ್ಕಾರದ ರೈತ ವಿರೋಧಿ ನೀತಿಗಳನ್ನು ಖಂಡಿಸಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜುಲೈ 18 ಎಲ್ಲ ಜಿಲ್ಲಾಧಿಕಾರಿ ಕಚೇರಿಗಳ ಎದುರು ಪ್ರತಿಭಟನೆ ನಡೆಸಲಾಗುವುದು ಎಂದು ರಾಜ್ಯ ರೈತ ಸಂಘದ ಅಧ್ಯಕ್ಷ ಬಡಗಲಪುರ ನಾಗೇಂದ್ರ ತಿಳಿಸಿದರು.

ಅಂದು ಬೆಳಿಗ್ಗೆ 11 ರಿಂದ ಮಧ್ಯಾಹ್ನ 2 ಗಂಟೆಯವರೆಗೆ ಪ್ರತಿಭಟನೆ ನಡೆಸಲಾಗುವುದು. ಕೃಷಿಕರ ಆತ್ಮಹತ್ಯೆ ತಡೆಗಟ್ಟಲು ಸರ್ಕಾರ ಕ್ರಮಕೈಗೊಳ್ಳಬೇಕು. ರಾಜ್ಯದ ಜನರು ಕೋಮುವಾದಿಗಳನ್ನು ಅಧಿಕಾರದಿಂದ ದೂರವಿಟ್ಟು, ಬಹಳ ನಿರೀಕ್ಷೆಯಿಂದ ಕಾಂಗ್ರೆಸ್‌ ಅನ್ನು ಅಧಿಕಾರಕ್ಕೆ ತಂದರೆ. ಆದರೆ ಅಧಿಕಾರಸ್ಥರ ಮುಖ ಬದಲಾಗಿವೆ ಹೊರತು, ಜನರ ಆಶೋತ್ತರಗಳು ಈಡೇರಿಲ್ಲ. ಆದ್ದರಿಂದ, ಈ ಬಗ್ಗೆ ಸರ್ಕಾರ ಎಚ್ಚೆತ್ತುಕೊಳ್ಳುವಂತೆ ಮಾಡಲು ಹೋರಾಟದ ಹಾದಿ ಹಿಡಿದಿದ್ದೇವೆ ಎಂದು ಅವರು ಶನಿವಾರ(ಜು.13) ನಡೆದ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು.

ಕಾಂಗ್ರೆಸ್‌ ಸರ್ಕಾರ ಬಂದ ವರ್ಷದ ಅವಧಿಯಲ್ಲೇ, ಎಸ್‌ಸಿ, ಎಸ್‌ಟಿ ವರ್ಗದವರಿಗೆ ಮೀಸಲಿಟ್ಟಿದ್ದ ಅನುದಾನವನ್ನು ದುರಪಯೋಗ ಮಾಡಿಕೊಂಡಿರುವ ಆರೋಪಕ್ಕೆ ಒಳಗಾಗಿದೆ. ಸರ್ಕಾರಿ ಕಚೇರಿಯಲ್ಲಿ ಭ್ರಷ್ಟಚಾರ ಎಗ್ಗಿಲ್ಲದೆ ನಡೆಯುತ್ತಿದೆ. ಜನಸಾಮಾನ್ಯರು ಬಯಸಿದ ಬದಲಾವಣೆ ಆಗಿಲ್ಲ. ಭೂಮಾಫಿಯಾದ ಅಕ್ರಮ ನಿರಂತರವಾಗಿ ನಡೆಯುತ್ತಲೇ ಇದೆ ಎಂದು ಆರೋಪಿಸಿದ ಅವರು ಸರ್ಕಾರ ರೈತ ಹಾಗೂ ಜನಸ್ನೇಹಿ ಆಗಿ ಕಾರ್ಯನಿರ್ವಹಿಸಬೇಕು ಎಂದರು.

 

 

 

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

5 ಹುಲಿಗಳ ದರ್ಶನ : ಸೆರೆಗೆ ಆನೆಗಳ ನೆರವು ; ಗ್ರಾಮದಲ್ಲಿ ನಿಷೇಧಾಜ್ಞೆ

ಚಾಮರಾಜನಗರ : ಜಿಲ್ಲೆಯ ನಂಜೇದೇವನಪುರ ಗ್ರಾಮದ ಕಲ್ಲು ಕ್ವಾರಿಯೊಂದರಲ್ಲಿ 5 ಹುಲಿಗಳ ಇರುವಿಕೆ ಡ್ರೋಣ್‌ನಲ್ಲಿ ಸೆರೆಯಾಗಿದ್ದು, ಅರಣ್ಯ ಇಲಾಖೆ ಸಿಬ್ಬಂದಿ…

3 mins ago

ಸಾರ್ವಜನಿಕರ ಅಹವಾಲು ಸ್ವೀಕಾರ : ಹಲವು ಸಮಸ್ಯೆಗಳಿಗೆ ಸ್ಥಳದಲ್ಲೇ ಪರಿಹಾರ ಕಲ್ಪಿಸಿದ ಸಚಿವ ಮಹದೇವಪ್ಪ

ಮೈಸೂರು : ಬೆಳಗಾವಿಯಲ್ಲಿ ನಡೆದ ಚಳಿಗಾಲದ ವಿಧಾನಮಂಡಲ ಅಧಿವೇಶನದಲ್ಲಿ ಪಾಲ್ಗೊಂಡಿದ್ದ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ.ಮಹದೇವಪ್ಪ ಅವರು ಸೋಮವಾರ ನಗರದಲ್ಲಿ…

8 mins ago

ಜಿಲ್ಲಾಸ್ಪತ್ರೆಗಳ ಮೇಲ್ದರ್ಜೆಗೆ ಚಿಂತನೆ : ಸಚಿವ ದಿನೇಶ್‌ ಗುಂಡೂರಾವ್‌

ಬೆಂಗಳೂರು : ಜನರಿಗೆ ಉತ್ತಮ ಆರೋಗ್ಯ ಸೇವೆ ನೀಡುವ ನಿಟ್ಟಿನಲ್ಲಿ ರಾಜ್ಯದ ಎಲ್ಲ ಜಿಲ್ಲಾಸ್ಪತ್ರೆಗಳನ್ನು ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳಾಗಿ ಮೇಲ್ದರ್ಜೆಗೇರಿಸಲು…

16 mins ago

India-New Zealand | ಮುಕ್ತ ವ್ಯಾಪಾರ ಒಪ್ಪಂದ : ಭಾರಿ ಪ್ರಮಾಣದ ಸುಂಕ ಕಡಿತ

ವೆಲ್ಲಿಂಗ್ಟನ್ : ಭಾರತದೊಂದಿಗೆ ಮುಕ್ತ ವ್ಯಾಪಾರ ಒಪ್ಪಂದದ ಮಾತುಕತೆ ಅಂತಿಮವಾಗಿದೆ ಎಂದು ನ್ಯೂಜಿಲೆಂಡ್ ಪ್ರಧಾನಿ ಕ್ರಿಸ್ಟೋಫರ್ ಲುಕ್ಸನ್ ಸೋಮವಾರ ಹೇಳಿದ್ದಾರೆ.…

22 mins ago

ಪ್ರಾಚ್ಯವಿದ್ಯಾ ಸಂಶೋಧನಾಲಯ ಉತ್ಕೃಷ್ಠ ಜ್ಞಾನ ಗ್ರಂಥಗಳನ್ನು ಪ್ರಕಟಿಸಲಿ : ಭಾರತೀ ಸ್ವಾಮೀಜಿ ಆಶಯ

ಮೈಸೂರು : ಸಂಸ್ಕೃತ ಗ್ರಂಥ, ಶಾಸ್ತ್ರ ಗ್ರಂಥ, ವೇದಾಂತ ವಿಚಾರದ ಗ್ರಂಥಗಳನ್ನು ಅಧ್ಯಯನ ಮಾಡಿದರೆ ಜೀವನ ಸಾರ್ಥಕಗೊಳ್ಳಲಿದೆ ಎಂದು ಶೃಂಗೇರಿ…

31 mins ago

ಮೈಸೂರು | ಸೆಸ್ಕ್ ಕಚೇರಿಯಲ್ಲಿ ಮೇಲ್ದರ್ಜೆಗೇರಿಸಿದ ಇವಿ ಫಾಸ್ಟ್ ಚಾರ್ಜಿಂಗ್ ಘಟಕ ಉದ್ಘಾಟನೆ

ಮೈಸೂರು : ನವೀಕರಿಸಬಹುದಾದ ಇಂಧನ ಬಳಕೆಯನ್ನು ಉತ್ತೇಜಿಸುವ ಮತ್ತು ಪರಿಸರ ಸ್ನೇಹಿ ಸಾರಿಗೆ ವ್ಯವಸ್ಥೆಯನ್ನು ಬೆಳೆಸುವ ಉದ್ದೇಶದಿಂದ ಚಾಮುಂಡೇಶ್ವರಿ ವಿದ್ಯುತ್…

58 mins ago