ಮೈಸೂರು: ರಾಜ್ಯ ಸರ್ಕಾರದ ರೈತ ವಿರೋಧಿ ನೀತಿಗಳನ್ನು ಖಂಡಿಸಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜುಲೈ 18 ಎಲ್ಲ ಜಿಲ್ಲಾಧಿಕಾರಿ ಕಚೇರಿಗಳ ಎದುರು ಪ್ರತಿಭಟನೆ ನಡೆಸಲಾಗುವುದು ಎಂದು ರಾಜ್ಯ ರೈತ ಸಂಘದ ಅಧ್ಯಕ್ಷ ಬಡಗಲಪುರ ನಾಗೇಂದ್ರ ತಿಳಿಸಿದರು.
ಅಂದು ಬೆಳಿಗ್ಗೆ 11 ರಿಂದ ಮಧ್ಯಾಹ್ನ 2 ಗಂಟೆಯವರೆಗೆ ಪ್ರತಿಭಟನೆ ನಡೆಸಲಾಗುವುದು. ಕೃಷಿಕರ ಆತ್ಮಹತ್ಯೆ ತಡೆಗಟ್ಟಲು ಸರ್ಕಾರ ಕ್ರಮಕೈಗೊಳ್ಳಬೇಕು. ರಾಜ್ಯದ ಜನರು ಕೋಮುವಾದಿಗಳನ್ನು ಅಧಿಕಾರದಿಂದ ದೂರವಿಟ್ಟು, ಬಹಳ ನಿರೀಕ್ಷೆಯಿಂದ ಕಾಂಗ್ರೆಸ್ ಅನ್ನು ಅಧಿಕಾರಕ್ಕೆ ತಂದರೆ. ಆದರೆ ಅಧಿಕಾರಸ್ಥರ ಮುಖ ಬದಲಾಗಿವೆ ಹೊರತು, ಜನರ ಆಶೋತ್ತರಗಳು ಈಡೇರಿಲ್ಲ. ಆದ್ದರಿಂದ, ಈ ಬಗ್ಗೆ ಸರ್ಕಾರ ಎಚ್ಚೆತ್ತುಕೊಳ್ಳುವಂತೆ ಮಾಡಲು ಹೋರಾಟದ ಹಾದಿ ಹಿಡಿದಿದ್ದೇವೆ ಎಂದು ಅವರು ಶನಿವಾರ(ಜು.13) ನಡೆದ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು.
ಕಾಂಗ್ರೆಸ್ ಸರ್ಕಾರ ಬಂದ ವರ್ಷದ ಅವಧಿಯಲ್ಲೇ, ಎಸ್ಸಿ, ಎಸ್ಟಿ ವರ್ಗದವರಿಗೆ ಮೀಸಲಿಟ್ಟಿದ್ದ ಅನುದಾನವನ್ನು ದುರಪಯೋಗ ಮಾಡಿಕೊಂಡಿರುವ ಆರೋಪಕ್ಕೆ ಒಳಗಾಗಿದೆ. ಸರ್ಕಾರಿ ಕಚೇರಿಯಲ್ಲಿ ಭ್ರಷ್ಟಚಾರ ಎಗ್ಗಿಲ್ಲದೆ ನಡೆಯುತ್ತಿದೆ. ಜನಸಾಮಾನ್ಯರು ಬಯಸಿದ ಬದಲಾವಣೆ ಆಗಿಲ್ಲ. ಭೂಮಾಫಿಯಾದ ಅಕ್ರಮ ನಿರಂತರವಾಗಿ ನಡೆಯುತ್ತಲೇ ಇದೆ ಎಂದು ಆರೋಪಿಸಿದ ಅವರು ಸರ್ಕಾರ ರೈತ ಹಾಗೂ ಜನಸ್ನೇಹಿ ಆಗಿ ಕಾರ್ಯನಿರ್ವಹಿಸಬೇಕು ಎಂದರು.
ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…
ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…
ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…
ಮಹೇಶ್ ಕರೋಟಿ ಹೇಮಾವತಿ ನದಿ ದಡದಲ್ಲೇ ನೀರಿಗಾಗಿ ಹಾಹಾಕಾರ ಕಿಕ್ಕೇರಿ: ಮಂದಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಕ್ಕಮಂದಗೆರೆ ಗ್ರಾಮವು ಹೇಮಾವತಿ…
ನವೀನ್ ಡಿಸೋಜ ಇಂದು ರಾಷ್ಟ್ರೀಯ ಜಂತುಹುಳು ನಿವಾರಣಾ ದಿನ ಜಂತುಹುಳು ಬಾಧೆ ತಡೆಗೆ ಆರೋಗ್ಯ ಇಲಾಖೆಯ ಮಹತ್ವದ ಹೆಜ್ಜೆ ಮಡಿಕೇರಿ:…