protest janivara case cet
ನಂಜನಗೂಡು: ಶಿವಮೊಗ್ಗ ಹಾಗೂ ಬೀದರ್ನಲ್ಲಿ ಸಿಇಟಿ ಪರೀಕ್ಷಾ ವಿದ್ಯಾರ್ಥಿಗಳ ಜನಿವಾರ ತೆಗೆಸಿರುವುದನ್ನು ಖಂಡಿಸಿ ನಂಜನಗೂಡು ಬ್ರಾಹ್ಮಣ ಮಹಾಸಭಾ ಹಾಗೂ ವಿಪ್ರಕೂಟದವರು ನಗರದ ಕಪಿಲಾ ಸ್ನಾನ ಘಟ್ಟಕ್ಕೆ ತೆರಳಿ ಅಲ್ಲಿ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು.
ಶನಿವಾರ ಸಂಜೆ ಕಪಿಲಾ ಸ್ನಾನ ಘಟ್ಟಕ್ಕೆ ಆಗಮಿಸಿದ ನೂರಾರು ವಿಪ್ರರು, ಅಲ್ಲಿ ಜನಿವಾರ ಹಿಡಿದು ಗಾಯತ್ರಿ ಮಂತ್ರ ಪಠಿಸಿ ವಿನೂತನ ಪ್ರತಿಭಟನೆಗೆ ನಾಂದಿ ಹಾಡಿದರು.
ನಂತರ ಊಟಿ ರಸ್ತೆಯ ಚಿಂತಾಮಣಿ ಗಣಪತಿ ದೇವಾಲಯಕ್ಕೆ ಆಗಮಿಸಿ ಪಂಜಿನ ಮೆರವಣಿಗೆ ನಡೆಸಿ, ಜನಿವಾರ ತೆಗೆಸಿದವರ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಇದನ್ನೂ ಓದಿ:- ಬ್ರಾಹ್ಮಣರ ಬುದ್ದಿ ಜನಿವಾರದಲ್ಲಲ್ಲ…ಅವರ ತಲೆಯಲ್ಲಿದೆ ; ಪ್ರತಾಪ್ ಸಿಂಹ
ಈ ಘಟನೆ ಇಡೀ ಬ್ರಾಹ್ಮಣ ಸಮೂಹಕ್ಕೆ ಮಾಡಿದ ಅವಮಾನವಾಗಿದೆ. ವಿಪ್ರರಿಗೆ ತಾಯಿ ಗಾಯತ್ರಿ ದೇವಿಯಷ್ಟೇ ಜನಿವಾರವೂ ಮುಖ್ಯ. ಜನಿವಾರವಿಲ್ಲದೆ ಬ್ರಾಹ್ಮಣ್ಯವೇ ಇಲ್ಲ. ಇಂಥ ಪವಿತ್ರವಾದ ಜನಿವಾರ ತೆಗೆಸಿದವರ ವಿರುದ್ಧ ತಕ್ಷಣ ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿದರು.
ಶ್ರೀಕಂಠೇಶ್ವರ ದೇವಾಲಯದವರೆಗೂ ಪಂಜಿನ ಮೆರವಣಿಗೆ ನಡೆಸಿ ತಮ್ಮ ಆಕ್ರೋಶ ವ್ಯಕ್ತಪಡಿಸಿದರು. ಪ್ರತಿಭಟನೆಯಲ್ಲಿ ತಾಲ್ಲೂಕು ಬ್ರಾಹ್ಮಣ ಸಭಾದ ಅಧ್ಯಕ್ಷ ಆರ್.ಗೋವರ್ಧನ್ ಹಾಗೂ ಮುಖಂಡರಾದ ಯು.ಎನ್.ಪದ್ಮನಾಭರಾವ್, ಶ್ರೀಕಂಠೇಶ್ವರ ದೇವಾಲಯದ ಆಗಮಿಕ ನೀಲಕಂಠ ದೀಕ್ಷಿತ್, ವಳಗುಡಿ ಶಿವಣ್ಣ, ಕೃಷ್ಣ ಜೋಯ್ಸ್, ನಗರಸಭಾ ಸದಸ್ಯ ಕಪಿಲೇಶ, ಇ.ಕೆ.ರಾಮ್ ಮೋಹನ , ರಮೇಶ, ಉಮೇಶ, ಸತೀಶ ದಳವಾಯಿ, ಸವಿತಾ ನಾಗೇಂದ್ರ, ರಮ್ಯಾ ರಾಘವೇಂದ್ರ, ಸುಧಾಮಣಿ, ನೂರಾರು ವಿಪ್ರರು ಭಾಗಿಯಾಗಿದ್ದರು.
ರಾಮನಗರ: ಕನಕಪುರದಲ್ಲಿ ಕಾಡಾನೆ ಹಾವಳಿ ಮುಂದುವರಿದಿದ್ದು, ಕಾಡಂಚಿನ ಗ್ರಾಮದ ಬಳಿ ಸುಮಾರು 40 ಕಾಡಾನೆಗಳು ಕನಕಪುರ ತಾಲ್ಲೂಕಿನ ಕಾಡುಶಿವನಹಳ್ಳಿ ಬಳಿ…
ಬೆಂಗಳೂರು:ಇತ್ತೀಚೆಗೆ ನಿರ್ಮಾಪಕ ಕನಕಪುರ ಶ್ರೀನಿವಾಸ್ ಕನ್ನಡ ಚಿತ್ರರಂಗದ ಹಲವರ ಬಗ್ಗೆ ನಾಲಿಗೆ ಹರಿಬಿಟ್ಟಿದ್ದರು. ಅಶ್ಲೀಲವಾಗಿ ಮಾತನಾಡಿದ್ದರು. ಈ ವಿಚಾರಕ್ಕೆ ಸಂಬಂಧಿಸಿದಂತೆ…
ಮೈಸೂರು: ಶಾಸಕ ಜಿ.ಟಿ.ದೇವೇಗೌಡ ಜೆಡಿಎಸ್ ಪಕ್ಷದಿಂದ ದೂರ ಉಳಿದಿರುವ ವಿಚಾರಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಪ್ರತಿಕ್ರಿಯೆ ನೀಡಿದ್ದಾರೆ. ಈ…
ಮೈಸೂರು: ರಾಜ್ಯ ಸರ್ಕಾರದ ವೈಫಲ್ಯಗಳನ್ನು ಮುಚ್ಚಿಕೊಳ್ಳಲು ಕೇಂದ್ರ ಬಜೆಟ್ ಬಗ್ಗೆ ಟೀಕೆ ಮಾಡಲಾಗುತ್ತಿದೆ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಆಕ್ರೋಶ…
ಮಡಿಕೇರಿ: ಎಸ್ಡಿಪಿಐ ರಾಜ್ಯಾಧ್ಯಕ್ಷ ಮಜಿದ್ ಪ್ರಯಾಣಿಸುತ್ತಿದ್ದ ಕಾರ್ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದ್ದು, ಅದೃಷ್ಟವಶಾತ್ ಪಾರಾಗಿದ್ದಾರೆ. ಕೊಡಗು ಜಿಲ್ಲೆ ಕುಶಾಲನಗರ ತಾಲ್ಲೂಕಿನ…
ಮೈಸೂರಿನ ಜಲಪುರಿ ಬಡಾವಣೆಯ ಪೊಲೀಸ್ ಆಸ್ಪತ್ರೆ ಮುಂಭಾಗದ ರಸ್ತೆ ತೀರಾ ಹದಗೆಟ್ಟಿದೆ. ಕಾಳಿಕಾಂಬ ರಸ್ತೆ ದುರಸ್ತಿ ಕಾಮಗಾರಿ ನಡೆಯುತ್ತಿರುವುದರಿಂದ ಕೆಲವು…