ಮೈಸೂರು

ಸಿಇಟಿ ಪರೀಕ್ಷೆಯಲ್ಲಿ ಜನಿವಾರ ತೆಗೆಸಿದ ಪ್ರಕರಣ ಖಂಡಿಸಿ ವಿಪ್ರರ ಪ್ರತಿಭಟನೆ

ನಂಜನಗೂಡು: ಶಿವಮೊಗ್ಗ ಹಾಗೂ ಬೀದರ್‌ನಲ್ಲಿ ಸಿಇಟಿ ಪರೀಕ್ಷಾ ವಿದ್ಯಾರ್ಥಿಗಳ ಜನಿವಾರ ತೆಗೆಸಿರುವುದನ್ನು ಖಂಡಿಸಿ ನಂಜನಗೂಡು ಬ್ರಾಹ್ಮಣ ಮಹಾಸಭಾ ಹಾಗೂ ವಿಪ್ರಕೂಟದವರು ನಗರದ ಕಪಿಲಾ ಸ್ನಾನ ಘಟ್ಟಕ್ಕೆ ತೆರಳಿ ಅಲ್ಲಿ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು.

ಶನಿವಾರ ಸಂಜೆ ಕಪಿಲಾ ಸ್ನಾನ ಘಟ್ಟಕ್ಕೆ ಆಗಮಿಸಿದ ನೂರಾರು ವಿಪ್ರರು, ಅಲ್ಲಿ ಜನಿವಾರ ಹಿಡಿದು ಗಾಯತ್ರಿ ಮಂತ್ರ ಪಠಿಸಿ ವಿನೂತನ ಪ್ರತಿಭಟನೆಗೆ ನಾಂದಿ ಹಾಡಿದರು.

ನಂತರ ಊಟಿ ರಸ್ತೆಯ ಚಿಂತಾಮಣಿ ಗಣಪತಿ ದೇವಾಲಯಕ್ಕೆ ಆಗಮಿಸಿ ಪಂಜಿನ ಮೆರವಣಿಗೆ ನಡೆಸಿ, ಜನಿವಾರ ತೆಗೆಸಿದವರ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಇದನ್ನೂ ಓದಿ:- ಬ್ರಾಹ್ಮಣರ ಬುದ್ದಿ ಜನಿವಾರದಲ್ಲಲ್ಲ…ಅವರ ತಲೆಯಲ್ಲಿದೆ ; ಪ್ರತಾಪ್‌ ಸಿಂಹ

ಈ ಘಟನೆ ಇಡೀ ಬ್ರಾಹ್ಮಣ ಸಮೂಹಕ್ಕೆ ಮಾಡಿದ ಅವಮಾನವಾಗಿದೆ. ವಿಪ್ರರಿಗೆ ತಾಯಿ ಗಾಯತ್ರಿ ದೇವಿಯಷ್ಟೇ ಜನಿವಾರವೂ ಮುಖ್ಯ. ಜನಿವಾರವಿಲ್ಲದೆ ಬ್ರಾಹ್ಮಣ್ಯವೇ ಇಲ್ಲ. ಇಂಥ ಪವಿತ್ರವಾದ ಜನಿವಾರ ತೆಗೆಸಿದವರ ವಿರುದ್ಧ ತಕ್ಷಣ ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿದರು.

ಶ್ರೀಕಂಠೇಶ್ವರ ದೇವಾಲಯದವರೆಗೂ ಪಂಜಿನ ಮೆರವಣಿಗೆ ನಡೆಸಿ ತಮ್ಮ ಆಕ್ರೋಶ ವ್ಯಕ್ತಪಡಿಸಿದರು. ಪ್ರತಿಭಟನೆಯಲ್ಲಿ ತಾಲ್ಲೂಕು ಬ್ರಾಹ್ಮಣ ಸಭಾದ ಅಧ್ಯಕ್ಷ ಆರ್.ಗೋವರ್ಧನ್ ಹಾಗೂ ಮುಖಂಡರಾದ ಯು.ಎನ್.ಪದ್ಮನಾಭರಾವ್, ಶ್ರೀಕಂಠೇಶ್ವರ ದೇವಾಲಯದ ಆಗಮಿಕ ನೀಲಕಂಠ ದೀಕ್ಷಿತ್, ವಳಗುಡಿ ಶಿವಣ್ಣ, ಕೃಷ್ಣ ಜೋಯ್ಸ್, ನಗರಸಭಾ ಸದಸ್ಯ ಕಪಿಲೇಶ, ಇ.ಕೆ.ರಾಮ್ ಮೋಹನ , ರಮೇಶ, ಉಮೇಶ, ಸತೀಶ ದಳವಾಯಿ, ಸವಿತಾ ನಾಗೇಂದ್ರ, ರಮ್ಯಾ ರಾಘವೇಂದ್ರ, ಸುಧಾಮಣಿ, ನೂರಾರು ವಿಪ್ರರು ಭಾಗಿಯಾಗಿದ್ದರು.

ಆಂದೋಲನ ಡೆಸ್ಕ್

Recent Posts

ಮೈಸೂರಲ್ಲಿ ಸಂಭ್ರಮದ ಹನುಮೋತ್ಸವ ; ಮೆರವಣಿಗೆಯಲ್ಲಿ ಸಾಗಿದ ಅತ್ಯಾಕರ್ಷಕ ಹನುಮಮೂರ್ತಿಗಳು

ಮೈಸೂರು : ಸಾಂಸ್ಕೃತಿಕ ರಾಜಧಾನಿ ಮೈಸೂರಿನಲ್ಲಿ ಹನುಮ ಜಯಂತ್ಯೋತ್ಸವ ಸಮಿತಿ ವತಿಯಿಂದ ಶನಿವಾರ ನಡೆದ ಏಳನೇ ವರ್ಷದ ಹನುಮೋತ್ಸವ ಮೆರವಣಿಗೆಯು…

42 mins ago

ಫೇಸ್‌ಬುಕ್‌ ಕಹಾನಿ | ಪ್ರೀತಿ ಹರಸಿ ಬಂದವನಿಗೆ ಹನಿಟ್ರ್ಯಾಪ್‌ ಗಾಳದ ಶಂಕೆ ; ಹಣಕ್ಕೆ ಡಿಮ್ಯಾಂಡ್‌….

ಮನೆಯಲ್ಲಿ ರಾತ್ರಿಯಿಡೀ ಕೂಡಿಹಾಕಿ ಹಲ್ಲೆ ನಡೆಸಿದ ಮೂವರು ಆರೋಪಿಗಳು; ಹನಿಟ್ರ್ಯಾಪ್ ಶಂಕೆ, ತನಿಖೆ ಚುರುಕು ಮಡಿಕೇರಿ : ಸಾಮಾಜಿಕ ಜಾಲತಾಣದಲ್ಲಿ…

1 hour ago

ಯುನಿಟಿ ಮಾಲ್‌ ನಿರ್ಮಾಣಕ್ಕೆ ವಿರೋಧ ಇಲ್ಲ : ಸಂಸದ ಯದುವೀರ್‌

ಮೈಸೂರು : ನಗರದಲ್ಲಿ ಯುನಿಟಿ ಮಾಲ್ ನಿರ್ಮಿಸಲು ನಮ್ಮ ವಿರೋಧ ಇಲ್ಲ. ಆದರೆ, ಸರ್ಕಾರ ಗೊಂದಲವಿಲ್ಲದ ಸ್ಥಳ ನೀಡದೆ ದಿಕ್ಕು…

1 hour ago

ಮೈಸೂರಲ್ಲಿ ಎರಡು ದಿನ ಮಾಗಿ ಸಂಭ್ರಮ : ಅವರೆಕಾಯಿ ಸೊಗಡು ಜೋರು…

ಮೈಸೂರು : ಚುಮು ಚುಮು ಚಳಿಯ ನಡುವೆ ನಗರದ ನಂಜರಾಜ ಬಹದ್ದೂರ್ ಛತ್ರದಲ್ಲಿ ಗ್ರಾಹಕರ ಆಕರ್ಷಿಸುವ ಹಾಗೂ ಗ್ರಾಮೀಣ ಸೊಗಡಿನ…

1 hour ago

ಡಿ.16 ರಂದು ಮಳವಳ್ಳಿಗೆ ರಾಷ್ಟ್ರಪತಿ ಆಗಮನ : ಭದ್ರತಾ ವ್ಯವಸ್ಥೆ ಪರಿಶೀಲನೆ

ಮಂಡ್ಯ : ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಸುತ್ತೂರಿನ ಆದಿ ಜಗದ್ಗುರು ಶ್ರೀ ಶಿವರಾತ್ರಿ ಶಿವ ಯೋಗಿಗಳರವರ 1066ನೇ ಜಯಂತಿ…

2 hours ago

ಬಾಲಕಿಗೆ ಲೈಂಗಿಕ ಕಿರುಕುಳ ಆರೋಪ : ಗ್ರಾ.ಪಂ ಮಾಜಿ ಅಧ್ಯಕ್ಷನ ವಿರುದ್ಧ ದೂರು

ಸಿದ್ದಾಪುರ : ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಡಿ ಗ್ರಾ.ಪಂ. ಮಾಜಿ ಅಧ್ಯಕ್ಷನ ವಿರುದ್ಧ ಸಿದ್ದಾಪುರ ಪೊಲೀಸ್ ಠಾಣೆಯಲ್ಲಿ…

2 hours ago