protest janivara case cet
ನಂಜನಗೂಡು: ಶಿವಮೊಗ್ಗ ಹಾಗೂ ಬೀದರ್ನಲ್ಲಿ ಸಿಇಟಿ ಪರೀಕ್ಷಾ ವಿದ್ಯಾರ್ಥಿಗಳ ಜನಿವಾರ ತೆಗೆಸಿರುವುದನ್ನು ಖಂಡಿಸಿ ನಂಜನಗೂಡು ಬ್ರಾಹ್ಮಣ ಮಹಾಸಭಾ ಹಾಗೂ ವಿಪ್ರಕೂಟದವರು ನಗರದ ಕಪಿಲಾ ಸ್ನಾನ ಘಟ್ಟಕ್ಕೆ ತೆರಳಿ ಅಲ್ಲಿ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು.
ಶನಿವಾರ ಸಂಜೆ ಕಪಿಲಾ ಸ್ನಾನ ಘಟ್ಟಕ್ಕೆ ಆಗಮಿಸಿದ ನೂರಾರು ವಿಪ್ರರು, ಅಲ್ಲಿ ಜನಿವಾರ ಹಿಡಿದು ಗಾಯತ್ರಿ ಮಂತ್ರ ಪಠಿಸಿ ವಿನೂತನ ಪ್ರತಿಭಟನೆಗೆ ನಾಂದಿ ಹಾಡಿದರು.
ನಂತರ ಊಟಿ ರಸ್ತೆಯ ಚಿಂತಾಮಣಿ ಗಣಪತಿ ದೇವಾಲಯಕ್ಕೆ ಆಗಮಿಸಿ ಪಂಜಿನ ಮೆರವಣಿಗೆ ನಡೆಸಿ, ಜನಿವಾರ ತೆಗೆಸಿದವರ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಇದನ್ನೂ ಓದಿ:- ಬ್ರಾಹ್ಮಣರ ಬುದ್ದಿ ಜನಿವಾರದಲ್ಲಲ್ಲ…ಅವರ ತಲೆಯಲ್ಲಿದೆ ; ಪ್ರತಾಪ್ ಸಿಂಹ
ಈ ಘಟನೆ ಇಡೀ ಬ್ರಾಹ್ಮಣ ಸಮೂಹಕ್ಕೆ ಮಾಡಿದ ಅವಮಾನವಾಗಿದೆ. ವಿಪ್ರರಿಗೆ ತಾಯಿ ಗಾಯತ್ರಿ ದೇವಿಯಷ್ಟೇ ಜನಿವಾರವೂ ಮುಖ್ಯ. ಜನಿವಾರವಿಲ್ಲದೆ ಬ್ರಾಹ್ಮಣ್ಯವೇ ಇಲ್ಲ. ಇಂಥ ಪವಿತ್ರವಾದ ಜನಿವಾರ ತೆಗೆಸಿದವರ ವಿರುದ್ಧ ತಕ್ಷಣ ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿದರು.
ಶ್ರೀಕಂಠೇಶ್ವರ ದೇವಾಲಯದವರೆಗೂ ಪಂಜಿನ ಮೆರವಣಿಗೆ ನಡೆಸಿ ತಮ್ಮ ಆಕ್ರೋಶ ವ್ಯಕ್ತಪಡಿಸಿದರು. ಪ್ರತಿಭಟನೆಯಲ್ಲಿ ತಾಲ್ಲೂಕು ಬ್ರಾಹ್ಮಣ ಸಭಾದ ಅಧ್ಯಕ್ಷ ಆರ್.ಗೋವರ್ಧನ್ ಹಾಗೂ ಮುಖಂಡರಾದ ಯು.ಎನ್.ಪದ್ಮನಾಭರಾವ್, ಶ್ರೀಕಂಠೇಶ್ವರ ದೇವಾಲಯದ ಆಗಮಿಕ ನೀಲಕಂಠ ದೀಕ್ಷಿತ್, ವಳಗುಡಿ ಶಿವಣ್ಣ, ಕೃಷ್ಣ ಜೋಯ್ಸ್, ನಗರಸಭಾ ಸದಸ್ಯ ಕಪಿಲೇಶ, ಇ.ಕೆ.ರಾಮ್ ಮೋಹನ , ರಮೇಶ, ಉಮೇಶ, ಸತೀಶ ದಳವಾಯಿ, ಸವಿತಾ ನಾಗೇಂದ್ರ, ರಮ್ಯಾ ರಾಘವೇಂದ್ರ, ಸುಧಾಮಣಿ, ನೂರಾರು ವಿಪ್ರರು ಭಾಗಿಯಾಗಿದ್ದರು.
ಬೆಂಗಳೂರು: ವಿಧಾನಸಭೆಯ ಕಲಾಪದಲ್ಲಿಂದು ಹನೂರು ಎನ್ಕೌಂಟರ್ ಪ್ರಕರಣ ಭಾರೀ ಚರ್ಚೆಗೆ ಕಾರಣವಾಯಿತು. ಕಲಾಪ ಆರಂಭವಾದ ತಕ್ಷಣವೇ ವಿಷಯ ಪ್ರಸ್ತಾಪಿಸಿದ ಆರ್.ಅಶೋಕ್,…
ಕೊಡಗು: ಸಿದ್ದಾಪುರ ವ್ಯಾಪ್ತಿಯ ಶಿಲ್ಪ ಎಸ್ಟೇಟ್ನಲ್ಲಿ ಕೆಲಸ ನಿರ್ವಹಿಸುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ಏಕಾಏಕಿ ದಾಳಿ ನಡೆಸಿದೆ. ಬಂಗಾಳ ಮೂಲದ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ಗುಂಡಿನ ದಾಳಿಗೆ ಬಲಿಯಾಗಿದ್ದ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಕಾವೇರಿ ವನ್ಯಜೀವಿ ಧಾಮ ವ್ಯಾಪ್ತಿಯಲ್ಲಿ ನಡೆದ ಎನ್ಕೌಂಟರ್ ಘಟನೆಯ…
ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಕಾವೇರಿ ವನ್ಯಜೀವಿಧಾಮದ ಹನೂರು ವಲಯದ ಶಾಗ್ಯ ಬೀಟ್ ವ್ಯಾಪ್ತಿಯ ಹೊಳೆಮುರಿ ದಟ್ಟಿ ಅರಣ್ಯ ಪ್ರದೇಶದಲ್ಲಿ…
ಅನ್ಬುರಾಜ್ ಅರಣ್ಯ ಇಲಾಖೆ ಮತ್ತೆ ತನ್ನ ಇತಿಹಾಸವನ್ನು ಹಿಂದಕ್ಕೆ ಕೊಂಡೊಯ್ಯುತ್ತಿರುವಂತೆ ಕಾಣುತ್ತಿದೆ. ಜನವಿರೋಧಿ ಧೋರಣೆಯನ್ನು ಅನುಸರಿಸಿ, ಅರಣ್ಯದ ಅಂಚಿನಲ್ಲಿ ವಾಸಿಸುವ…