ಮೈಸೂರು

ಸಿಇಟಿ ಪರೀಕ್ಷೆಯಲ್ಲಿ ಜನಿವಾರ ತೆಗೆಸಿದ ಪ್ರಕರಣ ಖಂಡಿಸಿ ವಿಪ್ರರ ಪ್ರತಿಭಟನೆ

ನಂಜನಗೂಡು: ಶಿವಮೊಗ್ಗ ಹಾಗೂ ಬೀದರ್‌ನಲ್ಲಿ ಸಿಇಟಿ ಪರೀಕ್ಷಾ ವಿದ್ಯಾರ್ಥಿಗಳ ಜನಿವಾರ ತೆಗೆಸಿರುವುದನ್ನು ಖಂಡಿಸಿ ನಂಜನಗೂಡು ಬ್ರಾಹ್ಮಣ ಮಹಾಸಭಾ ಹಾಗೂ ವಿಪ್ರಕೂಟದವರು ನಗರದ ಕಪಿಲಾ ಸ್ನಾನ ಘಟ್ಟಕ್ಕೆ ತೆರಳಿ ಅಲ್ಲಿ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು.

ಶನಿವಾರ ಸಂಜೆ ಕಪಿಲಾ ಸ್ನಾನ ಘಟ್ಟಕ್ಕೆ ಆಗಮಿಸಿದ ನೂರಾರು ವಿಪ್ರರು, ಅಲ್ಲಿ ಜನಿವಾರ ಹಿಡಿದು ಗಾಯತ್ರಿ ಮಂತ್ರ ಪಠಿಸಿ ವಿನೂತನ ಪ್ರತಿಭಟನೆಗೆ ನಾಂದಿ ಹಾಡಿದರು.

ನಂತರ ಊಟಿ ರಸ್ತೆಯ ಚಿಂತಾಮಣಿ ಗಣಪತಿ ದೇವಾಲಯಕ್ಕೆ ಆಗಮಿಸಿ ಪಂಜಿನ ಮೆರವಣಿಗೆ ನಡೆಸಿ, ಜನಿವಾರ ತೆಗೆಸಿದವರ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಇದನ್ನೂ ಓದಿ:- ಬ್ರಾಹ್ಮಣರ ಬುದ್ದಿ ಜನಿವಾರದಲ್ಲಲ್ಲ…ಅವರ ತಲೆಯಲ್ಲಿದೆ ; ಪ್ರತಾಪ್‌ ಸಿಂಹ

ಈ ಘಟನೆ ಇಡೀ ಬ್ರಾಹ್ಮಣ ಸಮೂಹಕ್ಕೆ ಮಾಡಿದ ಅವಮಾನವಾಗಿದೆ. ವಿಪ್ರರಿಗೆ ತಾಯಿ ಗಾಯತ್ರಿ ದೇವಿಯಷ್ಟೇ ಜನಿವಾರವೂ ಮುಖ್ಯ. ಜನಿವಾರವಿಲ್ಲದೆ ಬ್ರಾಹ್ಮಣ್ಯವೇ ಇಲ್ಲ. ಇಂಥ ಪವಿತ್ರವಾದ ಜನಿವಾರ ತೆಗೆಸಿದವರ ವಿರುದ್ಧ ತಕ್ಷಣ ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿದರು.

ಶ್ರೀಕಂಠೇಶ್ವರ ದೇವಾಲಯದವರೆಗೂ ಪಂಜಿನ ಮೆರವಣಿಗೆ ನಡೆಸಿ ತಮ್ಮ ಆಕ್ರೋಶ ವ್ಯಕ್ತಪಡಿಸಿದರು. ಪ್ರತಿಭಟನೆಯಲ್ಲಿ ತಾಲ್ಲೂಕು ಬ್ರಾಹ್ಮಣ ಸಭಾದ ಅಧ್ಯಕ್ಷ ಆರ್.ಗೋವರ್ಧನ್ ಹಾಗೂ ಮುಖಂಡರಾದ ಯು.ಎನ್.ಪದ್ಮನಾಭರಾವ್, ಶ್ರೀಕಂಠೇಶ್ವರ ದೇವಾಲಯದ ಆಗಮಿಕ ನೀಲಕಂಠ ದೀಕ್ಷಿತ್, ವಳಗುಡಿ ಶಿವಣ್ಣ, ಕೃಷ್ಣ ಜೋಯ್ಸ್, ನಗರಸಭಾ ಸದಸ್ಯ ಕಪಿಲೇಶ, ಇ.ಕೆ.ರಾಮ್ ಮೋಹನ , ರಮೇಶ, ಉಮೇಶ, ಸತೀಶ ದಳವಾಯಿ, ಸವಿತಾ ನಾಗೇಂದ್ರ, ರಮ್ಯಾ ರಾಘವೇಂದ್ರ, ಸುಧಾಮಣಿ, ನೂರಾರು ವಿಪ್ರರು ಭಾಗಿಯಾಗಿದ್ದರು.

ಆಂದೋಲನ ಡೆಸ್ಕ್

Recent Posts

ನಾಡಿನ ಖ್ಯಾತ ಕಲಾವಿದ ಕೆ.ಟಿ.ಶಿವಪ್ರಸಾದ್‌ ನಿಧನ

ಬೆಂಗಳೂರು: ನಾಡಿನ ಖ್ಯಾತ ಹಾಗೂ ಅಂತರಾಷ್ಟ್ರೀಯ ಖ್ಯಾತಿಯ ಕಲಾವಿದರಾದ, ದಲಿತ ಸಂಘರ್ಷ ಸಮಿತಿಯ ಕಾರ್ಯಕರ್ತ ‌ಕೆ.ಟಿ. ಶಿವಪ್ರಸಾದ್(77) ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ.…

10 mins ago

ಕೈಕೊಟ್ಟ ಮುಂಗಾರು: 126 ವರ್ಷಗಳಲ್ಲೇ ಮೂರನೇ ಬಾರಿ ದೇಶದಲ್ಲಿ ಮಳೆ ಕೊರತೆ

ನವದೆಹಲಿ: ದೇಶದಲ್ಲಿ ಈ ಬಾರಿ ಮುಂಗಾರು ಮಳೆ ಸಂಪೂರ್ಣವಾಗಿ ಕೈಕೊಟ್ಟಿದ್ದು, ಕಳೆದ 126 ವರ್ಷಗಳ ಇತಿಹಾಸದಲ್ಲೇ ಜೂನ್‌ ತಿಂಗಳಿನಲ್ಲಿ ಮೂರನೇ…

41 mins ago

ಅಪ್ಪಟ ಸಮಾಜವಾದಿ, ಗುಡಿಸಲೂ ಇರದಿದ್ದ ಜೋಗಿ ಕಿಶನ್ ಪಟ್ನಾಯಕ್

ಪ್ರೊ.ರವಿವರ್ಮಕುಮಾರ್, ಸಮಾಜವಾದಿ ಚಿಂತಕರು ಹಾಗೂ ಮಾಜಿ ಅಡ್ವೋಕೇಟ್ ಜನರಲ್ ಇಂದು ಕಿಶನ್ ಜನ್ಮದಿನ; ಅವರ ನೆನಪು ನಮ್ಮೊಡನೆ ಸದಾ ಹಸಿರಾಗಿರಲಿ.…

9 hours ago

ಶೀಘ್ರವೇ ಆಟೋ ಬಾಡಿಗೆ ಪರಿಷ್ಕೃತ ದರ ಪ್ರಕಟ

ನವೀನ್ ಡಿಸೋಜ ಮಡಿಕೇರಿಯಲ್ಲಿ ನಡೆದ ಸಾರಿಗೆ ಪ್ರಾಧಿಕಾರದ ಸಭೆಯಲ್ಲಿ ದರ ಹೆಚ್ಚಳಕ್ಕೆ ನಿರ್ಧಾರ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಆಟೋ ರಿಕ್ಷಾ…

9 hours ago

ಜೇನು ಕೃಷಿಗೆ ಸರ್ಕಾರದ ಬಲ

ಎಚ್.ಎಸ್.ದಿನೇಶ್‌ಕುಮಾರ್ ಮೈಸೂರು: ಕುರಿ ಸಾಕಾಣಿಕೆ, ಹೈನುಗಾರಿಕೆ ಹೀಗೆ ರೈತರಿಗೆ ಉಪಯೋಗವಾಗುವಂತಹ ಹಲವಾರು ಯೋಜನೆಗಳನ್ನು ರಾಜ್ಯ ಸರ್ಕಾರ ಹಮ್ಮಿಕೊಂಡಿದೆ. ಇದೀಗ ರೈತರು…

9 hours ago

ಜು.20ಕ್ಕೆ ವಿಧಾನಪರಿಷತ್ ಐದು ಸ್ಥಾನ ತೆರವು

ಕೆ.ಬಿ.ರಮೇಶನಾಯಕ ಮೈಸೂರು: ರಾಜ್ಯದಲ್ಲಿ ಜುಲೈ ೨೦ಕ್ಕೆ ತೆರವಾಗಲಿರುವ ವಿಧಾನಪರಿಷತ್‌ನ ಐದು ನಾಮನಿರ್ದೇಶಿತ ಸ್ಥಾನಗಳಿಗೆ ಸದಸ್ಯರನ್ನು ನೇಮಕ ಮಾಡುವುದಕ್ಕೆ ದಿನಗಣನೆ ಶುರುವಾಗಿದೆ.…

9 hours ago