ಮೈಸೂರು : ರಾಜ್ಯ ಸರಕಾರವು ಅಪೌಷ್ಟಿಕ ಮಕ್ಕಳ ಆರೈಕೆಗೆ ಅನೇಕ ಯೋಜನೆಗಳನ್ನು ಜಾರಿಗೆ ತಂದಿದ್ದು, ಸರಕಾರದ ಸವಲತ್ತು ಅರ್ಹ ಅಪೌಷ್ಠಿಕ ಮಕ್ಕಳಿಗೆ ತಲುಪುವಂತೆ ಅಧಿಕಾರಿಗಳು ಕ್ರಮವಹಿಸಿ ಎಂದು ರಾಜ್ಯ ಮಕ್ಕಳ ಹಕ್ಕುಗಳ ಆಯೋಗದ ಅಧ್ಯಕ್ಷ ಶಶಿಧರ್ ಕೂಸುಂಬೆ ಅಧಿಕಾರಿಗಳಿಗೆ ಸೂಚಿಸಿದರು.
ಕೆ.ಆರ್ ಆಸ್ಪತ್ರೆ ಆವರಣದಲ್ಲಿರುವ ಚೆಲುವಂಬ ಆಸ್ಪತ್ರೆಯ ಮಕ್ಕಳ ಆಸ್ಪತ್ರೆಗೆ ಗುರುವಾರ ಭೇಟಿ ನೀಡಿ ಪರಿಶೀಲಿಸಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಅಪೌಷ್ಟಿಕ ಮಕ್ಕಳ ಸಂಖ್ಯೆ ಕಡಿಮೆಯಾಗಬೇಕು ಹಾಗೂ ಗುರುತಿಸಲಾಗುವ ಅಪೌಷ್ಠಿಕ ಮಕ್ಕಳಿಗೆ ಸರಿಯಾದ ಆರೈಕೆ ಒದಗಿಸಿ ಅವರನ್ನು ಗುಣಮುಖರಾಗುವಂತೆ ನೋಡಿಕೊಳ್ಳಬೇಕು ಎಂದರು.
ಇದನ್ನು ಓದಿ: ಮಕ್ಕಳ ಅಪೌಷ್ಟಿಕತೆ ನಿವಾರಣೆಗೆ ಸೂಕ್ತ ಕ್ರಮ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್
ಜಿಲ್ಲೆಯಲ್ಲಿ 91 ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ, ಆದರೆ ಆಸ್ಪತ್ರೆಯಲ್ಲಿರುವ ವಾರ್ಡ್ ಗಳಲ್ಲಿ ಒಂದು ಮಕ್ಕಳು ಕೂಡ ದಾಖಲಾಗಿಲ್ಲ. ಸರಕಾರ ನೀಡುತ್ತಿರುವ ಸವಲತ್ತು ಆ ಮಕ್ಕಳಿಗೆ ತಲುಪುತ್ತಿಲ್ಲ, ಇನ್ನೂ 3 ದಿನಗಳಲ್ಲಿ ಸಂಬಂಧಪಟ್ಟ ಅಧಿಕಾರಿಗಳು ಸಭೆ ನಡೆಸಿ 91 ಮಕ್ಕಳನ್ನು ಗುರುತಿಸಿ ಪಾಳಿ ವ್ಯವಸ್ಥೆಯಲ್ಲಿ ಚಿಕಿತ್ಸೆ ನೀಡಿ ನಮಗೆ ವರದಿ ನೀಡಬೇಕು ಇಲ್ಲವಾದರೆ ಸಂಬಂಧಪಟ್ಟ ಅಧಿಕಾರಿಗಳ ಮೇಲೆ ಕ್ರಮ ವಹಿಸಲಾಗುವುದು ಎಚ್ಚರಿಕೆ ನೀಡಿದರು.
ಚಲುವಾಂಬ ಆಸ್ಪತ್ರೆಯಲ್ಲಿ ಅಳವಡಿಸಲಾಗಿರುವ ಮಕ್ಕಳ ಅಪೌಷ್ಟಿಕ ಪುನರ್ವಸತಿ ಕೇಂದ್ರ ಎಂಬ ಫಲಕವನ್ನು ತೆಗೆದು ಮಕ್ಕಳ ಅಪೌಷ್ಟಿಕ ಪುನರ್ ಚೇತನ ಘಟಕ ಎಂದು ನಾಮಫಲಕವನ್ನು ಅಳವಡಿಸುವಂತೆ ಅಧಿಕಾರಿಗಳಿಗೆ ತಿಳಿಸಿದರು.
ಈ ಸಂದರ್ಭದಲ್ಲಿ ರಾಜ್ಯ ಮಕ್ಕಳ ಹಕ್ಕುಗಳ ಆಯೋಗದ ಸದಸ್ಯ ಡಾ.ತಿಪ್ಪೇಸ್ವಾಮಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳಾದ ಡಾ. ಕುಮಾರಸ್ವಾಮಿ ಸೇರಿದಂತೆ ಮತ್ತಿತರ ಅಧಿಕಾರಿಗಳು ಉಪಸ್ಥಿತರಿದ್ದರು.
ಮಂಡ್ಯ: ಕುಡಿಯುವ ನೀರಿನ ಗುಣಮಟ್ಟವು ನೇರವಾಗಿ ಆರೋಗ್ಯದ ಮೇಲೆ ಪರಿಣಾಮ ಬೀರುವುದರಿಂದ ಸುರಕ್ಷಿತ, ಶುದ್ಧ ಮತ್ತು ರಾಸಾಯನಿಕ ಮುಕ್ತ ನೀರನ್ನು…
ಬೆಂಗಳೂರು: ಬಜೆಟ್ ಅಧಿವೇಶನದ ನಡುವೆಯೇ ಸಿಎಂ ಸಿದ್ದರಾಮಯ್ಯ ನಾಳೆ ಮೈಸೂರಿಗೆ ಆಗಮಿಸಲಿದ್ದಾರೆ. ನಾಳೆ ಬೆಳಿಗ್ಗೆ 10 ಗಂಟೆಗೆ ಎಚ್ಎಎಲ್ ವಿಮಾನ…
ಬೆಂಗಳೂರು: ಇರಾನ್-ಇಸ್ರೇಲ್ ಯುದ್ಧ ಭಾರತದ ಮೇಲೂ ಪರಿಣಾಮ ಬೀರಿದ್ದು, ಗ್ಯಾಸ್ ಸಿಲಿಂಡರ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿದೆ. ಈ ಬಗ್ಗೆ ಗೃಹ…
ಟೆಹರಾನ್: ಇರಾನ್ ಸಂಘರ್ಷ ಹನ್ನೊಂದನೇ ದಿನಕ್ಕೆ ಕಾಲಿಟ್ಟಿದೆ. ಆದರೆ ಅಮೇರಿಕಾದ ಶ್ವೇತಭವನದ ಹೇಳಿಕೆಗಳನ್ನು ಗಮನಿಸಿದರೆ, ಈ ಯುದ್ಧದ ಅಂತ್ಯ ಯಾವಾಗ…
ಭೇರ್ಯ ಮಹೇಶ್: ಕೆ.ಆರ್.ನಗರ ತಾಲ್ಲೂಕು ವರದಿಗಾರರು ಕೆ.ಆರ್.ನಗರ: ಧಾರ್ಮಿಕ ಸ್ಥಳಗಳು ಕಟುಕರ ಕೇರಿಗಳಾಗಬಾರದು. ಜೀವ ತೆಗೆಯುವ ಮೃತ್ಯು ಕೂಪವಾಗಬಾರದು, ಪ್ರಾಣಿಹಿಂಸೆ…
ಹನೂರು: ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕಿನ ಪ್ರಸಿದ್ಧ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದ ರಸ್ತೆಯಲ್ಲಿ ಮತ್ತೆ ಚಿರತೆ ಕಾಣಿಸಿಕೊಂಡಿದ್ದು, ಭಕ್ತರಲ್ಲಿ…