ಮೈಸೂರು : ರಾಜ್ಯ ಸರಕಾರವು ಅಪೌಷ್ಟಿಕ ಮಕ್ಕಳ ಆರೈಕೆಗೆ ಅನೇಕ ಯೋಜನೆಗಳನ್ನು ಜಾರಿಗೆ ತಂದಿದ್ದು, ಸರಕಾರದ ಸವಲತ್ತು ಅರ್ಹ ಅಪೌಷ್ಠಿಕ ಮಕ್ಕಳಿಗೆ ತಲುಪುವಂತೆ ಅಧಿಕಾರಿಗಳು ಕ್ರಮವಹಿಸಿ ಎಂದು ರಾಜ್ಯ ಮಕ್ಕಳ ಹಕ್ಕುಗಳ ಆಯೋಗದ ಅಧ್ಯಕ್ಷ ಶಶಿಧರ್ ಕೂಸುಂಬೆ ಅಧಿಕಾರಿಗಳಿಗೆ ಸೂಚಿಸಿದರು.
ಕೆ.ಆರ್ ಆಸ್ಪತ್ರೆ ಆವರಣದಲ್ಲಿರುವ ಚೆಲುವಂಬ ಆಸ್ಪತ್ರೆಯ ಮಕ್ಕಳ ಆಸ್ಪತ್ರೆಗೆ ಗುರುವಾರ ಭೇಟಿ ನೀಡಿ ಪರಿಶೀಲಿಸಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಅಪೌಷ್ಟಿಕ ಮಕ್ಕಳ ಸಂಖ್ಯೆ ಕಡಿಮೆಯಾಗಬೇಕು ಹಾಗೂ ಗುರುತಿಸಲಾಗುವ ಅಪೌಷ್ಠಿಕ ಮಕ್ಕಳಿಗೆ ಸರಿಯಾದ ಆರೈಕೆ ಒದಗಿಸಿ ಅವರನ್ನು ಗುಣಮುಖರಾಗುವಂತೆ ನೋಡಿಕೊಳ್ಳಬೇಕು ಎಂದರು.
ಇದನ್ನು ಓದಿ: ಮಕ್ಕಳ ಅಪೌಷ್ಟಿಕತೆ ನಿವಾರಣೆಗೆ ಸೂಕ್ತ ಕ್ರಮ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್
ಜಿಲ್ಲೆಯಲ್ಲಿ 91 ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ, ಆದರೆ ಆಸ್ಪತ್ರೆಯಲ್ಲಿರುವ ವಾರ್ಡ್ ಗಳಲ್ಲಿ ಒಂದು ಮಕ್ಕಳು ಕೂಡ ದಾಖಲಾಗಿಲ್ಲ. ಸರಕಾರ ನೀಡುತ್ತಿರುವ ಸವಲತ್ತು ಆ ಮಕ್ಕಳಿಗೆ ತಲುಪುತ್ತಿಲ್ಲ, ಇನ್ನೂ 3 ದಿನಗಳಲ್ಲಿ ಸಂಬಂಧಪಟ್ಟ ಅಧಿಕಾರಿಗಳು ಸಭೆ ನಡೆಸಿ 91 ಮಕ್ಕಳನ್ನು ಗುರುತಿಸಿ ಪಾಳಿ ವ್ಯವಸ್ಥೆಯಲ್ಲಿ ಚಿಕಿತ್ಸೆ ನೀಡಿ ನಮಗೆ ವರದಿ ನೀಡಬೇಕು ಇಲ್ಲವಾದರೆ ಸಂಬಂಧಪಟ್ಟ ಅಧಿಕಾರಿಗಳ ಮೇಲೆ ಕ್ರಮ ವಹಿಸಲಾಗುವುದು ಎಚ್ಚರಿಕೆ ನೀಡಿದರು.
ಚಲುವಾಂಬ ಆಸ್ಪತ್ರೆಯಲ್ಲಿ ಅಳವಡಿಸಲಾಗಿರುವ ಮಕ್ಕಳ ಅಪೌಷ್ಟಿಕ ಪುನರ್ವಸತಿ ಕೇಂದ್ರ ಎಂಬ ಫಲಕವನ್ನು ತೆಗೆದು ಮಕ್ಕಳ ಅಪೌಷ್ಟಿಕ ಪುನರ್ ಚೇತನ ಘಟಕ ಎಂದು ನಾಮಫಲಕವನ್ನು ಅಳವಡಿಸುವಂತೆ ಅಧಿಕಾರಿಗಳಿಗೆ ತಿಳಿಸಿದರು.
ಈ ಸಂದರ್ಭದಲ್ಲಿ ರಾಜ್ಯ ಮಕ್ಕಳ ಹಕ್ಕುಗಳ ಆಯೋಗದ ಸದಸ್ಯ ಡಾ.ತಿಪ್ಪೇಸ್ವಾಮಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳಾದ ಡಾ. ಕುಮಾರಸ್ವಾಮಿ ಸೇರಿದಂತೆ ಮತ್ತಿತರ ಅಧಿಕಾರಿಗಳು ಉಪಸ್ಥಿತರಿದ್ದರು.
ಗದಗ: ತಾಲ್ಲೂಕಿನ ಲಕ್ಕುಂಡಿ ಗ್ರಾಮದ ಬಗೆದಷ್ಟೂ ಪುರಾತನ ವಸ್ತುಗಳು ಪತ್ತೆಯಾಗುತ್ತಲೇ ಇವೆ. ಇದೀಗ ಚೌಕಿಮಠ ಕುಟುಂಬದ ವಾಸದ ಮನೆಯೊಳಗೆ ಅಪರೂಪದ…
ಹನೂರು: ಜಮೀನಿನಲ್ಲಿ ಬೆಳೆದಿರುವ ತರಕಾರಿ ಬೆಳೆಗಳನ್ನು ಕಾಡಾನೆಗಳ ಹಿಂಡು ಕಳೆದ ಮೂರು ದಿನಗಳಿಂದ ರಾತ್ರಿ ವೇಳೆ ದಾಳಿ ನಡೆಸಿ ಬೆಳೆ…
ಹೈದರಾಬಾದ್: ಭಾರತದ ಖ್ಯಾತ ಬ್ಯಾಡ್ಮಿಂಟನ್ ತಾರೆ ಸೈನಾ ನೆಹ್ವಾಲ್ ಅವರು ಅಂತರರಾಷ್ಟೀಯ ಪಂದ್ಯಾವಳಿಗೆ ನಿವೃತ್ತಿ ಘೋಷಿಸಿದ್ದಾರೆ. ಗಾಯದ ಸಮಸ್ಯೆಯಿಂದ ಬಳಲುತ್ತಿದ್ದ…
ನವದೆಹಲಿ: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದ ನಿತಿನ್ ನಬಿನ್ ಅವರು ಪಕ್ಷದ ಪ್ರಮುಖರು ಹಾಗೂ ಕಾರ್ಯಕರ್ತರ ಹರ್ಷೋದ್ಘಾರದ ನಡುವೆ…
ಮೈಸೂರು: ಯುವಕನೊಬ್ಬನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಮೈಸೂರಿನ ಉದಯಗಿರಿ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಶಹಬಾಜ್ ಎಂಬಾತನೇ ಕೊಲೆಯಾದ ಯುವಕನಾಗಿದ್ದಾನೆ.…
ಎಚ್.ಡಿ.ಕೋಟೆ: ಕಬಿನಿ ಜಲಾಶಯವನ್ನು ಉಳಿಸುವಂತೆ ಒತ್ತಾಯಿಸಿ ರೈತ ಸಂಘಟನೆಯಿಂದ ಪ್ರತಿಭಟನೆ ನಡೆಸಲಾಯಿತು. ಎಚ್.ಡಿ.ಕೋಟೆ ತಾಲ್ಲೂಕು ಕಚೇರಿ ಮುಂದೆ ಜಮಾಯಿಸಿದ ರೈತ…