ಮೈಸೂರು

ಅರ್ಹ ಅಪೌಷ್ಟಿಕ ಮಕ್ಕಳಿಗೆ ಸವಲತ್ತು ತಲುಪಿಸಿ : ಮಕ್ಕಳ ಆಯೋಗದ ಅಧ್ಯಕ್ಷರ ಸೂಚನೆ

ಮೈಸೂರು : ರಾಜ್ಯ ಸರಕಾರವು ಅಪೌಷ್ಟಿಕ ಮಕ್ಕಳ ಆರೈಕೆಗೆ ಅನೇಕ ಯೋಜನೆಗಳನ್ನು ಜಾರಿಗೆ ತಂದಿದ್ದು, ಸರಕಾರದ ಸವಲತ್ತು ಅರ್ಹ ಅಪೌಷ್ಠಿಕ ಮಕ್ಕಳಿಗೆ ತಲುಪುವಂತೆ ಅಧಿಕಾರಿಗಳು ಕ್ರಮವಹಿಸಿ ಎಂದು ರಾಜ್ಯ ಮಕ್ಕಳ ಹಕ್ಕುಗಳ ಆಯೋಗದ ಅಧ್ಯಕ್ಷ ಶಶಿಧರ್ ಕೂಸುಂಬೆ ಅಧಿಕಾರಿಗಳಿಗೆ ಸೂಚಿಸಿದರು.

ಕೆ.ಆರ್ ಆಸ್ಪತ್ರೆ ಆವರಣದಲ್ಲಿರುವ ಚೆಲುವಂಬ ಆಸ್ಪತ್ರೆಯ ಮಕ್ಕಳ ಆಸ್ಪತ್ರೆಗೆ ಗುರುವಾರ ಭೇಟಿ ನೀಡಿ ಪರಿಶೀಲಿಸಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಅಪೌಷ್ಟಿಕ ಮಕ್ಕಳ ಸಂಖ್ಯೆ ಕಡಿಮೆಯಾಗಬೇಕು ಹಾಗೂ ಗುರುತಿಸಲಾಗುವ ಅಪೌಷ್ಠಿಕ ಮಕ್ಕಳಿಗೆ ಸರಿಯಾದ ಆರೈಕೆ ಒದಗಿಸಿ ಅವರನ್ನು ಗುಣಮುಖರಾಗುವಂತೆ ನೋಡಿಕೊಳ್ಳಬೇಕು ಎಂದರು.

ಇದನ್ನು ಓದಿ: ಮಕ್ಕಳ ಅಪೌಷ್ಟಿಕತೆ ನಿವಾರಣೆಗೆ ಸೂಕ್ತ ಕ್ರಮ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್ 

ಜಿಲ್ಲೆಯಲ್ಲಿ 91 ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ, ಆದರೆ ಆಸ್ಪತ್ರೆಯಲ್ಲಿರುವ ವಾರ್ಡ್ ಗಳಲ್ಲಿ ಒಂದು ಮಕ್ಕಳು ಕೂಡ ದಾಖಲಾಗಿಲ್ಲ. ಸರಕಾರ ನೀಡುತ್ತಿರುವ ಸವಲತ್ತು ಆ ಮಕ್ಕಳಿಗೆ ತಲುಪುತ್ತಿಲ್ಲ, ಇನ್ನೂ 3 ದಿನಗಳಲ್ಲಿ ಸಂಬಂಧಪಟ್ಟ ಅಧಿಕಾರಿಗಳು ಸಭೆ ನಡೆಸಿ 91 ಮಕ್ಕಳನ್ನು ಗುರುತಿಸಿ ಪಾಳಿ ವ್ಯವಸ್ಥೆಯಲ್ಲಿ ಚಿಕಿತ್ಸೆ ನೀಡಿ ನಮಗೆ ವರದಿ ನೀಡಬೇಕು ಇಲ್ಲವಾದರೆ ಸಂಬಂಧಪಟ್ಟ ಅಧಿಕಾರಿಗಳ ಮೇಲೆ ಕ್ರಮ ವಹಿಸಲಾಗುವುದು ಎಚ್ಚರಿಕೆ ನೀಡಿದರು.

ಚಲುವಾಂಬ ಆಸ್ಪತ್ರೆಯಲ್ಲಿ ಅಳವಡಿಸಲಾಗಿರುವ ಮಕ್ಕಳ ಅಪೌಷ್ಟಿಕ ಪುನರ್ವಸತಿ ಕೇಂದ್ರ ಎಂಬ ಫಲಕವನ್ನು ತೆಗೆದು ಮಕ್ಕಳ ಅಪೌಷ್ಟಿಕ ಪುನರ್ ಚೇತನ ಘಟಕ ಎಂದು ನಾಮಫಲಕವನ್ನು ಅಳವಡಿಸುವಂತೆ ಅಧಿಕಾರಿಗಳಿಗೆ ತಿಳಿಸಿದರು.

ಈ ಸಂದರ್ಭದಲ್ಲಿ ರಾಜ್ಯ ಮಕ್ಕಳ ಹಕ್ಕುಗಳ ಆಯೋಗದ ಸದಸ್ಯ ಡಾ.ತಿಪ್ಪೇಸ್ವಾಮಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳಾದ ಡಾ. ಕುಮಾರಸ್ವಾಮಿ ಸೇರಿದಂತೆ ಮತ್ತಿತರ ಅಧಿಕಾರಿಗಳು ಉಪಸ್ಥಿತರಿದ್ದರು.

ಆಂದೋಲನ ಡೆಸ್ಕ್

Recent Posts

ದಸರಾ ವೆಬ್‌ಸೈಟ್‌ ಲೋಕಾರ್ಪಣೆ : ಅ.11ರಿಂದ 21ರವರೆಗೆ ನಡೆಯಲಿರುವ ಕಾರ್ಯಕ್ರಮಗಳ ಮಾಹಿತಿ

ಮೈಸೂರು: ನಾಡಹಬ್ಬ ದಸರಾ ಮಹೋತ್ಸವದ ಅಂಗವಾಗಿ ನಡೆಯಲಿರುವ ಕಾರ್ಯಕ್ರಮಗಳನ್ನು ಜನರಿಗೆ ತಿಳಿಸಲು ಹಾಗೂ ಪ್ರವಾಸಿಗರಿಗೆ ಉಪಯುಕ್ತವಾದ ಮಾಹಿತಿ ಕೊಡಲು ದಸರಾ-೨೦೨೬ರ…

5 hours ago

ತಮಿಳುನಾಡಿಗೆ ಕಾವೇರಿ ನೀರು: 3 ಸಾವಿರ ಕ್ಯೂಸೆಕ್‌ಗೆ ಇಳಿಸಲು ರಾಜ್ಯ ಸರ್ಕಾರ ಮನವಿ

ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರ ಮತ್ತೆ ಮುನ್ನೆಲೆಗೆ ಬಂದಿದೆ. 6 ಸಾವಿರ ಕ್ಯೂಸೆಕ್‌ ನೀರನ್ನು 3 ಸಾವಿರ…

8 hours ago

ರಾಜ್ಯ ರಾಜಕೀಯದಲ್ಲಿ ಮತ್ತೊಂದು ಮಹತ್ವದ ಬೆಳವಣಿಗೆ: ಸೆಪ್ಟೆಂಬರ್.18 ರಿಂದ ಅಮಿತ್ ಶಾ 2 ದಿನ ರಾಜ್ಯ ಪ್ರವಾಸ ‌

ಹುಬ್ಬಳ್ಳಿ: ಸೆಪ್ಟೆಂಬರ್ 18ರಿಂದ ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜ್ಯದಲ್ಲಿ 2 ದಿನಗಳ ಪ್ರವಾಸ ಕೈಗೊಳ್ಳಲಿದ್ದಾರೆ. ಸೆಪ್ಟೆಂಬರ್ 18ರ…

8 hours ago

ರಾಮನಗುಡ್ಡ ಕೆರೆ ಭರ್ತಿ : ಕೋಡಿ ಬಿದ್ದು ಹರಿದ ನೀರು

ಮಹಾದೇಶ್. ಎಂ ಗೌಡ ಹನೂರು: ತಾಲ್ಲೂಕಿನ ಮಂಗಲ ಗ್ರಾಮದ ಹುಲುಸುಗುಡ್ಡೆ ಬಳಿ ಇರುವ ಐತಿಹಾಸಿಕ ರಾಮನಗುಡ್ಡ ಕೆರೆ ಸಂಪೂರ್ಣ ಭರ್ತಿಯಾಗಿ…

12 hours ago

ಓದುಗರ ಪತ್ರ: ಕೊನೆಗೊಳ್ಳಲಿ ಸಂಘರ್ಷ!

ಕೊನೆಗೊಳ್ಳಲಿ ಸಂಘರ್ಷ! ಯುದ್ಧವನು ಕೊನೆಗಾಣಿಸಲು ರಾಜತಾಂತ್ರಿಕ ಮಾತುಕತೆಯೇ ಉತ್ತಮವೆಂಬ ಭಾರತದ ನಿಲುವಿಗೆ ಬ್ರಿಕ್ಸ್ ನಾಯಕರು ಒಕ್ಕೊರಲಿನಿಂದ ಒಪ್ಪಿರುವುದು ಸ್ವಾಗತಾರ್ಹ! ಇದಲ್ಲವೇ…

17 hours ago

ಓದುಗರ ಪತ್ರ: ಚುರುಕಾಗಲಿ 6ರ ಪ್ಲಾಟ್ ಫಾರಂ ಟಿಕೆಟ್ ಕೌಂಟರ್

ಮೈಸೂರಿನ ನೈಋತ್ಯ ರೈಲ್ವೆಗೆ ಸೇರಿರುವ ಅಶೋಕ ಪುರಂ ರೈಲು ನಿಲ್ದಾಣದಲ್ಲಿ ಪ್ಲಾಟ್ ಫಾರಂ ೬ರ ಕಡೆ ರೈಲು ಪ್ರಯಾಣಿಕರಿಗೆ ಅನುಕೂಲವಾಗಲೆಂದು…

17 hours ago