ಸರಗೂರು : ಈ ಹಿಂದೆ ನೇರಳೆ-ಮಾಗುಡಿಲು ಗ್ರಾಮಕ್ಕೆ ನೇರವಾಗಿ ಕೆಎಸ್ಆರ್ಟಿಸಿ ಬಸ್ ಸೇವೆ ಇತ್ತು. ಈಗ ಆ ಬಸ್ ನೇರಳೆಗೆ ಬರುತ್ತಿಲ್ಲ ಎಂಬ ದೂರು ಗ್ರಾಮಸ್ಥರಿಂದ ಕೇಳಿಬಂದಿದೆ.
ಶಾಲೆ, ಕಾಲೇಜು, ಆಸ್ಪತ್ರೆ ಸೇರಿದಂತೆ ದೈನಂದಿನ ಕೆಲಸಗಳಿಗೆ ಗ್ರಾಮಸ್ಥರು ಬೀಚನಳ್ಳಿಯ ಗಣೇಶಗುಡಿ ಬಳಿ ಬಂದು ಹ್ಯಾಂಡ್ಪೋಸ್ಟ್ ಮೂಲಕ ಸರಗೂರಿಗೆ ಹೋಗಬೇಕಾಗಿದೆ. ಈ ಮಾರ್ಗ 17 ಕಿಲೋಮೀಟರ್ ದೂರವಾಗುತ್ತಿದೆ. ಆದರೆ ನೇರಳೆ-ಮಾಗುಡಿಲು-ನೀಲವಾಗಿಲು-ತುಂಬಸೋಗೆ ಮಾರ್ಗವು ಕೇವಲ 6 ಕಿಲೋಮೀಟರ್ ಮಾತ್ರವಾಗಿದೆ. ಹೀಗಾಗಿ ನೇರಳೆ-ಮಾಗುಡಿಲು ಗ್ರಾಮಕ್ಕೆ ನೇರ ಬಸ್ ಕಲ್ಪಿಸಬೇಕು ಎಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.
ಗ್ರಾಮಕ್ಕೆ ನೇರ ಬಸ್ ಸೇವೆಯನ್ನು ಪುನಃಸ್ಥಾಪಿಸಬೇಕು. ಇಲ್ಲವಾದರೆ ವಿದ್ಯಾರ್ಥಿಗಳು ಮತ್ತು ರೋಗಿಗಳು ತೊಂದರೆಗೀಡಾಗುತ್ತಾರೆ ಎಂದು ಗ್ರಾಮಸ್ಥ ಶಿವಕುಮಾರ್ ಹೇಳಿದ್ದಾರೆ.
ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…
ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…
ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…
ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…
ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…