ಸರಗೂರು : ಈ ಹಿಂದೆ ನೇರಳೆ-ಮಾಗುಡಿಲು ಗ್ರಾಮಕ್ಕೆ ನೇರವಾಗಿ ಕೆಎಸ್ಆರ್ಟಿಸಿ ಬಸ್ ಸೇವೆ ಇತ್ತು. ಈಗ ಆ ಬಸ್ ನೇರಳೆಗೆ ಬರುತ್ತಿಲ್ಲ ಎಂಬ ದೂರು ಗ್ರಾಮಸ್ಥರಿಂದ ಕೇಳಿಬಂದಿದೆ.
ಶಾಲೆ, ಕಾಲೇಜು, ಆಸ್ಪತ್ರೆ ಸೇರಿದಂತೆ ದೈನಂದಿನ ಕೆಲಸಗಳಿಗೆ ಗ್ರಾಮಸ್ಥರು ಬೀಚನಳ್ಳಿಯ ಗಣೇಶಗುಡಿ ಬಳಿ ಬಂದು ಹ್ಯಾಂಡ್ಪೋಸ್ಟ್ ಮೂಲಕ ಸರಗೂರಿಗೆ ಹೋಗಬೇಕಾಗಿದೆ. ಈ ಮಾರ್ಗ 17 ಕಿಲೋಮೀಟರ್ ದೂರವಾಗುತ್ತಿದೆ. ಆದರೆ ನೇರಳೆ-ಮಾಗುಡಿಲು-ನೀಲವಾಗಿಲು-ತುಂಬಸೋಗೆ ಮಾರ್ಗವು ಕೇವಲ 6 ಕಿಲೋಮೀಟರ್ ಮಾತ್ರವಾಗಿದೆ. ಹೀಗಾಗಿ ನೇರಳೆ-ಮಾಗುಡಿಲು ಗ್ರಾಮಕ್ಕೆ ನೇರ ಬಸ್ ಕಲ್ಪಿಸಬೇಕು ಎಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.
ಗ್ರಾಮಕ್ಕೆ ನೇರ ಬಸ್ ಸೇವೆಯನ್ನು ಪುನಃಸ್ಥಾಪಿಸಬೇಕು. ಇಲ್ಲವಾದರೆ ವಿದ್ಯಾರ್ಥಿಗಳು ಮತ್ತು ರೋಗಿಗಳು ತೊಂದರೆಗೀಡಾಗುತ್ತಾರೆ ಎಂದು ಗ್ರಾಮಸ್ಥ ಶಿವಕುಮಾರ್ ಹೇಳಿದ್ದಾರೆ.
ಈಗಿನ ಕಾಲದ ಮಕ್ಕಳಿಗೆ ಎಲ್ಲವೂ ಕ್ಷಣ ಮಾತ್ರದಲ್ಲಿ ಅರ್ಥವಾಗುವುದರಿಂದ ಅವರ ವರ್ತನೆಯಲ್ಲಿ ಸಹಜತೆಯನ್ನು ಕಾಣಬಹುದು. ಇಂದಿನ ಮಕ್ಕಳಿಗೆ ಭಯ ಇಲ್ಲ…
ನಟ ಹಾಗೂ ನಿರ್ದೇಶಕ ದುನಿಯಾ ವಿಜಯ್ ಮತ್ತು ನಾಗರತ್ನ ದಂಪತಿಯ ವಿವಾಹ ವಿಚ್ಛೇದನಕ್ಕೆ ರಾಜ್ಯ ಹೈಕೋರ್ಟ್ ಸಮ್ಮತಿ ನೀಡಿರುವುದು ಮಾಧ್ಯಮಗಳ…
ಮೈಸೂರಿನ ಶಾರದಾದೇವಿ ನಗರದಲ್ಲಿ ಹೊಸ ಬಸ್ ನಿಲ್ದಾಣವನ್ನು ಸುಮಾರು ಮೂರು ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಿಸಲಾಗಿದೆ. ಆದರೆ ಈ ಬಸ್…
ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್ ರಾಷ್ಟ್ರೀಯ ಸ್ವಯಂ ಸೇವಾ ಸಂಘವು ಆರಂಭವಾಗಿ ನೂರು ವರ್ಷ ತುಂಬಿದ ಸ್ಮರಣಾರ್ಥವಾಗಿ ಸಂಘದ ಉದ್ದೇಶ…
ಅಕ್ಷತಾ ‘ಹವ್ಯಾಸ ಮನುಷ್ಯನ ಕನಸುಗಳಿಗೆ ಗರಿ ಮೂಡಿಸುತ್ತದೆ. ಕನಸು ಕಾಣುವ ವ್ಯಕ್ತಿಗೆ ಅವಕಾಶಗಳ ದಾರಿ ತೆರೆದುಕೊಳ್ಳುತ್ತವೆ’ ಇದು ಬೆಂಗಳೂರಿನಲ್ಲಿ ನೆಲೆಸಿರುವ…
ಸಿರಿ ಮೈಸೂರು ಆ ದಿನ ನಾನು ಸಾಮಾನ್ಯವಾಗಿ ಹೋಗದಂತಹ ಒಂದು ಅಪರೂಪದ ಸ್ಥಳಕ್ಕೆ ಹೋಗಿದ್ದೆ. ಮೈಸೂರಿನಿಂದ ಐದಾರು ಗಂಟೆಗಳ ಪ್ರಯಾಣದ…