ಸರಗೂರು : ಈ ಹಿಂದೆ ನೇರಳೆ-ಮಾಗುಡಿಲು ಗ್ರಾಮಕ್ಕೆ ನೇರವಾಗಿ ಕೆಎಸ್ಆರ್ಟಿಸಿ ಬಸ್ ಸೇವೆ ಇತ್ತು. ಈಗ ಆ ಬಸ್ ನೇರಳೆಗೆ ಬರುತ್ತಿಲ್ಲ ಎಂಬ ದೂರು ಗ್ರಾಮಸ್ಥರಿಂದ ಕೇಳಿಬಂದಿದೆ.
ಶಾಲೆ, ಕಾಲೇಜು, ಆಸ್ಪತ್ರೆ ಸೇರಿದಂತೆ ದೈನಂದಿನ ಕೆಲಸಗಳಿಗೆ ಗ್ರಾಮಸ್ಥರು ಬೀಚನಳ್ಳಿಯ ಗಣೇಶಗುಡಿ ಬಳಿ ಬಂದು ಹ್ಯಾಂಡ್ಪೋಸ್ಟ್ ಮೂಲಕ ಸರಗೂರಿಗೆ ಹೋಗಬೇಕಾಗಿದೆ. ಈ ಮಾರ್ಗ 17 ಕಿಲೋಮೀಟರ್ ದೂರವಾಗುತ್ತಿದೆ. ಆದರೆ ನೇರಳೆ-ಮಾಗುಡಿಲು-ನೀಲವಾಗಿಲು-ತುಂಬಸೋಗೆ ಮಾರ್ಗವು ಕೇವಲ 6 ಕಿಲೋಮೀಟರ್ ಮಾತ್ರವಾಗಿದೆ. ಹೀಗಾಗಿ ನೇರಳೆ-ಮಾಗುಡಿಲು ಗ್ರಾಮಕ್ಕೆ ನೇರ ಬಸ್ ಕಲ್ಪಿಸಬೇಕು ಎಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.
ಗ್ರಾಮಕ್ಕೆ ನೇರ ಬಸ್ ಸೇವೆಯನ್ನು ಪುನಃಸ್ಥಾಪಿಸಬೇಕು. ಇಲ್ಲವಾದರೆ ವಿದ್ಯಾರ್ಥಿಗಳು ಮತ್ತು ರೋಗಿಗಳು ತೊಂದರೆಗೀಡಾಗುತ್ತಾರೆ ಎಂದು ಗ್ರಾಮಸ್ಥ ಶಿವಕುಮಾರ್ ಹೇಳಿದ್ದಾರೆ.
ಸೋಮವಾರಪೇಟೆ: ಇಲ್ಲಿನ ಹೋಂಸ್ಟೇ ಒಂದರಲ್ಲಿ ಇಂದು ಬೆಳಿಗ್ಗೆ ಸಂಭವಿಸಿದ ಗ್ಯಾಸ್ ಸೋರಿಕೆಯಿಂದ ಮೈಸೂರಿನ ಯುವತಿ ಮೃತಪಟ್ಟಿದ್ದಾಳೆ. ಮೈಸೂರಿನ ಯರಗನಹಳ್ಳಿಯ ಪಾಪಣ್ಣ…
ಬೆಂಗಳೂರು: ರಾಜ್ಯದಲ್ಲಿ ಮುಂದಿನ ಎಂಟು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದ ಕರಾವಳಿ…
ಕೊಳ್ಳೇಗಾಲ: ತಾಲ್ಲೂಕಿನ ಜಕ್ಕಳ್ಳಿ ಬಳಿ ಚಿರತೆ ನಾಯಿಯೊಂದನ್ನು ಕೊಂದು ತಿಂದುಹಾಕಿದ್ದು, ಗ್ರಾಮಸ್ಥರು, ಕೂಲಿ ಕಾರ್ಮಿಕರು ಭಯಭೀತರಾಗಿದ್ದಾರೆ. ವೀರಮಾದು ಅವರ ತೋಟದ…
ನವದೆಹಲಿ: ಪಶ್ಚಿಮ ಏಷ್ಯಾದಲ್ಲಿನ ಉದ್ವಿಗ್ನತೆ ಮತ್ತು ಜಾಗತಿಕ ಮಾರುಕಟ್ಟೆಯಲ್ಲಿ ಅಡುಗೆ ಅನಿಲದ ಬೆಲೆ ಏರಿಕೆಯಾಗಿದ್ದರೂ, ಭಾರತದಲ್ಲಿ ಗೃಹಬಳಕೆಯ ಎಲ್ಪಿಜಿ ಸಿಲಿಂಡರ್…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಮೇವು ಮೇಯುವ ವೇಳೆ ಆಕಸ್ಮಿಕವಾಗಿ ಬಾವಿಯಲ್ಲಿ ಬಿದ್ದಿದ್ದ ಹಸುವನ್ನು ಅಗ್ನಿಶಾಮಕ…
ವಾಷಿಂಗ್ಟನ್: ಭಾರತದ ಜನನ ಪ್ರಮಾಣ ಗಣನೀಯವಾಗಿ ಕುಸಿತವಾಗುತ್ತಿದೆ. ಭಾರತದಲ್ಲಿ ಯಥಾಸ್ಥಿತಿ ಕಾಯ್ದುಕೊಳ್ಳಲು ಅಗತ್ಯವಿರುವ ಜನಸಂಖ್ಯೆಗಿಂತ ಸಂತಾನೋತ್ಪತ್ತಿಯ ದರ ಕಡಿಮೆಯಾಗಿದೆ ಎಂದು…