ಮೈಸೂರು

ಭ್ರಷ್ಟಾಚಾರ ಮುಕ್ತ ಸಮಾಜ ನಿರ್ಮಾಣಕ್ಕೆ ಸಾರ್ವಜನಿಕರ ಸಹಕಾರ ಅಗತ್ಯ : ಕೆ.ಎನ್. ಫಣೀಂದ್ರ

ಮೈಸೂರು : ಭ್ರಷ್ಟಾಚಾರ ಮುಕ್ತ ಸಮಾಜವನ್ನು ನಿರ್ಮಾಣ ಮಾಡಲು ಸಾರ್ವಜನಿಕರ ಸಹಕಾರ ಅತ್ಯಗತ್ಯ. ಕೊಡುವವರು ಇರುವವರೆಗೂ ಭ್ರಷ್ಟಚಾರ ನಡೆಯುತ್ತಲೇ ಇರುತ್ತದೆ ಎಂದು ಉಪ ಲೋಕಾಯುಕ್ತ ಕೆ .ಎನ್ ಫಣೀಂದ್ರ ಹೇಳಿದರು.

ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಗುರುವಾರ ಹಮ್ಮಿಕೊಂಡಿದ್ದ ದೂರುಗಳ ವಿಚಾರಣೆ ಹಾಗೂ ಪ್ರಕರಣಗಳ ವಿಲೇವಾರಿ ವಿಚಾರವಾಗಿ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಹಾಗೂ ದೂರುದಾರರು ಹಾಗೂ ಎದುರುದಾರರ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಮಾನವ ಆರೋಗ್ಯವಂತ ಜೀವನ ಮಾಡಬೇಕು. ಇದಕ್ಕೆ ಅವಶ್ಯಕತೆ ಇರುವ ಸೌಲಭ್ಯಗಳನ್ನು ಸರ್ಕಾರ ಒದಗಿಸಬೇಕು. ಹೆಣ್ಣು ಮಗುವಾಗಲೀ ಗಂಡು ಮಗುವಾಗಲಿ ಭ್ರೂಣ ಹತ್ಯೆ ಮಾಡುವ ಹಾಗಿಲ್ಲ. ಇದು ಶಿಕ್ಷಾರ್ಹ ಅಪರಾಧ. ನಾವು ಭ್ರಷ್ಟಚಾರವನ್ನು ಮುಕ್ತ ಮಾಡಬೇಕು. ಅಧಿಕಾರಿಗಳು ಈ ನಿಟ್ಟಿನಲ್ಲಿ ಕಾರ್ಯ ನಿರ್ವಹಿಸಬೇಕು ಎಂದು ಸಲಹೆ ನೀಡಿದರು.

ದೂರುದಾರರು 4 ಎಕರೆ ಜಮೀನನ್ನು ಬೇರೆಯವರಿಂದ ಕೊಂಡುಕೊಂಡು ಇದ್ದೆವು. ಆದರೆ ನಮಗೆ ಮೂರೂವರೆ ಎಕರೆ ಮಾತ್ರ ಖಾತೆ ಆಗಿದೆ ಎಂದು ದೂರು ಸಲ್ಲಿಸಿದ್ದರು. ಇದಕ್ಕೆ ಪ್ರತಿಕ್ರಿಸಿದ ಸರ್ವೇ ಇಲಾಖೆಯ ಅಧಿಕಾರಿ 20 ಗುಂಟೆ ಜಮೀನು ರಸ್ತೆಗೆ ಹೋಗಿರುತ್ತದೆ. ಅಲ್ಲಿ ಇರುವುದು ಮೂರೂವರೆ ಎಕರೆ ಜಮೀನು ಮಾತ್ರ ಇದೆ ಎಂದು ಮಾಹಿತಿ ನೀಡಿದರು. ಇದಕ್ಕೆ ಪ್ರತಿಕ್ರಿಸಿದ ಉಪ ಲೋಕಾಯುಕ್ತರಾದ ಫಣೀಂದ್ರ ಅವರು ದೂರುದಾರರಿಗೆ ಸಮಾಧಾನ ಇಲ್ಲ ಅಂದರೆ ಜೆಡಿಎಲ್ ಆರ್ ಅವರಿಗೆ ಅಪೀಲು ಸಲ್ಲಿಸುವಂತೆ ಅಲ್ಲಿಯೂ ನಿಮಗೆ ಸಮಾಧಾನ ಆಗದೆ ಇದ್ದರೆ ನೀವು ನ್ಯಾಯಾಲಯಕ್ಕೆ ಹೋಗಬಹುದು ಎಂದು ಹೇಳಿದರು.

ಹಿಂದೆ ತಾತ್ಕಾಲಿಕ ಪಡಿತರ ಚೀಟಿ ನೀಡಿದ್ದರು. ಹೊಸ ಪಡಿತರ ಚೀಟಿ ನೀಡಿಲ್ಲ ಎಂದು ದೂರು ನೀಡಿದ್ದರು, ಎದುರುದಾರರಾದ ಆಹಾರ ನಿರೀಕ್ಷಕರು ಪಡಿತರ ಚೀಟಿ ನೀಡಲು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಆಧಾರ್ ಕಾರ್ಡ್ ನೀಡಬೇಕು. ಇವರು ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಸಿಲ್ಲ. ಪಡಿತರ ಚೀಟಿ ಅರ್ಜಿ ಸಲ್ಲಿಸಲು ಅವಕಾಶ ನೀಡಿದ ತಕ್ಷಣ ಹೊಸ ಪಡಿತರ ಚೀಟಿ ನೀಡಲಾಗುವುದು ಎಂದು ತಿಳಿಸಿದರು. ಒಂದು ತಿಂಗಳ ಒಳಗೆ ಹೊಸ ಪಡಿತರ ಚೀಟಿ ನೀಡಲು ಸೂಚನೆ ನೀಡಲಾಯಿತು.

ಹುಣಸೂರು ತಾಲ್ಲೂಕಿನಲ್ಲಿ ಸರ್ಕಾರಿ ಜಾಗವನ್ನು 2 ಬಾರಿ ತೆರವುಗೊಳಿಸಿದರು ಖಾಸಗಿ ವ್ಯಕ್ತಿ ಪುನಃ ಅತಿಕ್ರಮಿಸಿದ್ದಾನೆ. ಈ ಬಗ್ಗೆ ಗಂಭೀರ ಕ್ರಮ ಕೈಗೊಂಡು ತೆರವು ಗೊಳಿಸುವಂತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅವರಿಗೆ ಸೂಚನೆ ನೀಡಿದರು.

ಲೋಕಾಯುಕ್ತ ಜಂಟಿ ನಿಬಂಧಕರು(ವಿಚಾರಣೆ) ವಿ.ಎನ್.ವಿಮಲಾ, ಲೋಕಾಯುಕ್ತ ಕಾರ್ಯದರ್ಶಿ ಕಿರಣ್ ಪಾಟೀಲ್, ಮೈಸೂರು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಅಮರ್ ನಾಥ್, ಜಿಲ್ಲಾಧಿಕಾರಿ ಜಿ.ಲಕ್ಷ್ಮಿಕಾಂತರೆಡ್ಡಿ, ಮೈಸೂರು ಪೋಲಿಸ್ ಆಯುಕ್ತೆ ಸೀಮಾ ಲಾಟ್ಕರ್ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಯುಕೇಸ್ ಕುಮಾರ್, ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ವಿಷ್ಣುವರ್ಧನ, ಮೈಸೂರು ಲೋಕಾಯುಕ್ತ ಎಸ್ಪಿ ಟಿ.ಜೆ.ಉದೇಶ್ ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

ಆಂದೋಲನ ಡೆಸ್ಕ್

Recent Posts

ಬ್ರಹ್ಮಗಿರಿ ತಪ್ಪಲಿನಲ್ಲಿ ಧಾರಾಕಾರ ಮಳೆ: ಭಾಗಮಂಡಲ, ತ್ರಿವೇಣಿ ಸಂಗಮದಲ್ಲಿ ನೀರಿನ ಪ್ರಮಾಣ ಏರಿಕೆ

ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮಳೆಯ ಅಬ್ಬರ ದಿನದಿಂದ ದಿನಕ್ಕೆ ತೀವ್ರಗೊಳ್ಳುತ್ತಿದೆ. ಬ್ರಹ್ಮಗಿರಿ ತಪ್ಪಲಿನಲ್ಲಿ ಧಾರಾಕಾರ ಮಳೆ ಸುರಿಯುತ್ತಿರುವ ಪರಿಣಾಮ ಭಾಗಮಂಡಲ…

13 hours ago

ದಟ್ಟವಾದ ತೋಟದಲ್ಲಿ ಅಡಗಿದ್ದ ಓರ್ವ ಲಷ್ಕರ್‌ ಉಗ್ರನ ಹತ್ಯೆ

ಶ್ರೀನಗರ: ಜಮ್ಮು-ಕಾಶ್ಮೀರದಲ್ಲಿ ಐದು ದಿನಗಳಿಂದ ಭದ್ರತಾ ಪಡೆಗಳ ಕಣ್ಣಿಗೆ ಮಣ್ಣೆರಚಿ ತಪ್ಪಿಸಿಕೊಳ್ಳುತ್ತಿದ್ದ ಶಂಕಿತ ಲಷ್ಕರ್‌ ಎ ತೊಯ್ಬಾ ಉಗ್ರನನ್ನು ಭದ್ರತಾ…

14 hours ago

ಹಾಸನದಲ್ಲಿ ಮುಂದುವರಿದ ಮಳೆಯ ಅಬ್ಬರ

ಹಾಸನ: ಜಿಲ್ಲೆಯಲ್ಲಿ ಮಳೆಯ ಅಬ್ಬರ ಮುಂದುವರಿದಿದ್ದು, ಭಾರೀ ಗಾಳಿಯೊಂದಿಗೆ ಮಳೆಯಾಗುತ್ತಿದೆ. ಧಾರಾಕಾರ ಮಳೆಯಾಗುತ್ತಿರುವ ಪರಿಣಾಮ ಗೊರೂರಿನಲ್ಲಿರುವ ಹೇಮಾವತಿ ಜಲಾಶಯಕ್ಕೆ 16,593…

14 hours ago

ರಾಜ್ಯದಲ್ಲಿ ಭಾರೀ ಮಳೆ ಎಚ್ಚರಿಕೆ: 7 ಜಿಲ್ಲೆಗಳಲ್ಲಿ ಆರೆಂಜ್‌ ಅಲರ್ಟ್‌ ಘೋಷಣೆ

ಬೆಂಗಳೂರು: ಕರ್ನಾಟಕದ ಮಲೆನಾಡು, ಕರಾವಳಿ ಭಾಗದಲ್ಲಿ ಭಾರೀ ಮಳೆಯಾಗುತ್ತಿದ್ದು, ಮುಂದಿನ ಕೆಲವು ದಿನಗಳು ಧಾರಾಕಾರ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ…

14 hours ago

ವಯನಾಡಿನಲ್ಲಿ ಭೂಕುಸಿತ: ನಾಪತ್ತೆಯಾದ ಐವರ ಶೋಧ ಕಾರ್ಯಕ್ಕೆ ಮಳೆ ಅಡ್ಡಿ

ವಯನಾಡು: ಬೆಳಿಗ್ಗೆಯಿಂದಲೇ ವಯನಾಡಿನಲ್ಲಿ ಮಳೆಯ ನಡುವೆ ರಕ್ಷಣಾ ಕಾರ್ಯಾಚರಣೆ ಮುಂದುವರಿದಿದ್ದು, ನಾಪತ್ತೆಯಾಗಿರುವ ಐವರಿಗೆ ಶೋಧ ಕಾರ್ಯ ಕಾರ್ಯ ನಡೆಯುತ್ತಿದೆ. ಮೆಪ್ಪಾಡಿ…

16 hours ago

ಕೆಆರ್‌ಎಸ್‌ ಜಲಾಶಯದ ಒಳಹರಿವಿನಲ್ಲಿ ಗಣನೀಯ ಏರಿಕೆ

ಮಂಡ್ಯ: ಕಾವೇರಿ ಜಲಾನಯದ ಪ್ರದೇಶ ಹಾಗೂ ಕೊಡಗಿನಲ್ಲಿ ಮುಂಗಾರು ಮಳೆ ಚುರುಕುಗೊಂಡ ಹಿನ್ನೆಲೆಯಲ್ಲಿ ಪ್ರಸಿದ್ಧ ಕೃಷ್ಣರಾಜಸಾಗರ ಜಲಾಶಯಕ್ಕೆ ನೀರಿನ ಒಳಹರಿವು…

16 hours ago