ಮೈಸೂರು

ಭ್ರಷ್ಟಾಚಾರ ಮುಕ್ತ ಸಮಾಜ ನಿರ್ಮಾಣಕ್ಕೆ ಸಾರ್ವಜನಿಕರ ಸಹಕಾರ ಅಗತ್ಯ : ಕೆ.ಎನ್. ಫಣೀಂದ್ರ

ಮೈಸೂರು : ಭ್ರಷ್ಟಾಚಾರ ಮುಕ್ತ ಸಮಾಜವನ್ನು ನಿರ್ಮಾಣ ಮಾಡಲು ಸಾರ್ವಜನಿಕರ ಸಹಕಾರ ಅತ್ಯಗತ್ಯ. ಕೊಡುವವರು ಇರುವವರೆಗೂ ಭ್ರಷ್ಟಚಾರ ನಡೆಯುತ್ತಲೇ ಇರುತ್ತದೆ ಎಂದು ಉಪ ಲೋಕಾಯುಕ್ತ ಕೆ .ಎನ್ ಫಣೀಂದ್ರ ಹೇಳಿದರು.

ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಗುರುವಾರ ಹಮ್ಮಿಕೊಂಡಿದ್ದ ದೂರುಗಳ ವಿಚಾರಣೆ ಹಾಗೂ ಪ್ರಕರಣಗಳ ವಿಲೇವಾರಿ ವಿಚಾರವಾಗಿ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಹಾಗೂ ದೂರುದಾರರು ಹಾಗೂ ಎದುರುದಾರರ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಮಾನವ ಆರೋಗ್ಯವಂತ ಜೀವನ ಮಾಡಬೇಕು. ಇದಕ್ಕೆ ಅವಶ್ಯಕತೆ ಇರುವ ಸೌಲಭ್ಯಗಳನ್ನು ಸರ್ಕಾರ ಒದಗಿಸಬೇಕು. ಹೆಣ್ಣು ಮಗುವಾಗಲೀ ಗಂಡು ಮಗುವಾಗಲಿ ಭ್ರೂಣ ಹತ್ಯೆ ಮಾಡುವ ಹಾಗಿಲ್ಲ. ಇದು ಶಿಕ್ಷಾರ್ಹ ಅಪರಾಧ. ನಾವು ಭ್ರಷ್ಟಚಾರವನ್ನು ಮುಕ್ತ ಮಾಡಬೇಕು. ಅಧಿಕಾರಿಗಳು ಈ ನಿಟ್ಟಿನಲ್ಲಿ ಕಾರ್ಯ ನಿರ್ವಹಿಸಬೇಕು ಎಂದು ಸಲಹೆ ನೀಡಿದರು.

ದೂರುದಾರರು 4 ಎಕರೆ ಜಮೀನನ್ನು ಬೇರೆಯವರಿಂದ ಕೊಂಡುಕೊಂಡು ಇದ್ದೆವು. ಆದರೆ ನಮಗೆ ಮೂರೂವರೆ ಎಕರೆ ಮಾತ್ರ ಖಾತೆ ಆಗಿದೆ ಎಂದು ದೂರು ಸಲ್ಲಿಸಿದ್ದರು. ಇದಕ್ಕೆ ಪ್ರತಿಕ್ರಿಸಿದ ಸರ್ವೇ ಇಲಾಖೆಯ ಅಧಿಕಾರಿ 20 ಗುಂಟೆ ಜಮೀನು ರಸ್ತೆಗೆ ಹೋಗಿರುತ್ತದೆ. ಅಲ್ಲಿ ಇರುವುದು ಮೂರೂವರೆ ಎಕರೆ ಜಮೀನು ಮಾತ್ರ ಇದೆ ಎಂದು ಮಾಹಿತಿ ನೀಡಿದರು. ಇದಕ್ಕೆ ಪ್ರತಿಕ್ರಿಸಿದ ಉಪ ಲೋಕಾಯುಕ್ತರಾದ ಫಣೀಂದ್ರ ಅವರು ದೂರುದಾರರಿಗೆ ಸಮಾಧಾನ ಇಲ್ಲ ಅಂದರೆ ಜೆಡಿಎಲ್ ಆರ್ ಅವರಿಗೆ ಅಪೀಲು ಸಲ್ಲಿಸುವಂತೆ ಅಲ್ಲಿಯೂ ನಿಮಗೆ ಸಮಾಧಾನ ಆಗದೆ ಇದ್ದರೆ ನೀವು ನ್ಯಾಯಾಲಯಕ್ಕೆ ಹೋಗಬಹುದು ಎಂದು ಹೇಳಿದರು.

ಹಿಂದೆ ತಾತ್ಕಾಲಿಕ ಪಡಿತರ ಚೀಟಿ ನೀಡಿದ್ದರು. ಹೊಸ ಪಡಿತರ ಚೀಟಿ ನೀಡಿಲ್ಲ ಎಂದು ದೂರು ನೀಡಿದ್ದರು, ಎದುರುದಾರರಾದ ಆಹಾರ ನಿರೀಕ್ಷಕರು ಪಡಿತರ ಚೀಟಿ ನೀಡಲು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಆಧಾರ್ ಕಾರ್ಡ್ ನೀಡಬೇಕು. ಇವರು ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಸಿಲ್ಲ. ಪಡಿತರ ಚೀಟಿ ಅರ್ಜಿ ಸಲ್ಲಿಸಲು ಅವಕಾಶ ನೀಡಿದ ತಕ್ಷಣ ಹೊಸ ಪಡಿತರ ಚೀಟಿ ನೀಡಲಾಗುವುದು ಎಂದು ತಿಳಿಸಿದರು. ಒಂದು ತಿಂಗಳ ಒಳಗೆ ಹೊಸ ಪಡಿತರ ಚೀಟಿ ನೀಡಲು ಸೂಚನೆ ನೀಡಲಾಯಿತು.

ಹುಣಸೂರು ತಾಲ್ಲೂಕಿನಲ್ಲಿ ಸರ್ಕಾರಿ ಜಾಗವನ್ನು 2 ಬಾರಿ ತೆರವುಗೊಳಿಸಿದರು ಖಾಸಗಿ ವ್ಯಕ್ತಿ ಪುನಃ ಅತಿಕ್ರಮಿಸಿದ್ದಾನೆ. ಈ ಬಗ್ಗೆ ಗಂಭೀರ ಕ್ರಮ ಕೈಗೊಂಡು ತೆರವು ಗೊಳಿಸುವಂತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅವರಿಗೆ ಸೂಚನೆ ನೀಡಿದರು.

ಲೋಕಾಯುಕ್ತ ಜಂಟಿ ನಿಬಂಧಕರು(ವಿಚಾರಣೆ) ವಿ.ಎನ್.ವಿಮಲಾ, ಲೋಕಾಯುಕ್ತ ಕಾರ್ಯದರ್ಶಿ ಕಿರಣ್ ಪಾಟೀಲ್, ಮೈಸೂರು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಅಮರ್ ನಾಥ್, ಜಿಲ್ಲಾಧಿಕಾರಿ ಜಿ.ಲಕ್ಷ್ಮಿಕಾಂತರೆಡ್ಡಿ, ಮೈಸೂರು ಪೋಲಿಸ್ ಆಯುಕ್ತೆ ಸೀಮಾ ಲಾಟ್ಕರ್ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಯುಕೇಸ್ ಕುಮಾರ್, ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ವಿಷ್ಣುವರ್ಧನ, ಮೈಸೂರು ಲೋಕಾಯುಕ್ತ ಎಸ್ಪಿ ಟಿ.ಜೆ.ಉದೇಶ್ ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

ಆಂದೋಲನ ಡೆಸ್ಕ್

Recent Posts

ಟಿವಿಕೆ ಗೆಲುವು : ಹನೂರಲ್ಲಿ ಸಂಭ್ರಮಾಚರಣೆ

ಹನೂರು : ತಮಿಳುನಾಡಿನ ವಿಧಾನಸಭಾ ಚುನಾವಣೆಯಲ್ಲಿ ನಟ ವಿಜಯ್ ನೇತೃತ್ವದ ಟಿವಿಕೆ ಪಕ್ಷ ಹೆಚ್ಚಿನ ಸಂಖ್ಯೆಯಲ್ಲಿ ಜಯಗಳಿಸಿರುವುದಕ್ಕೆ ಕೆಂಪಯ್ಯನಹಟ್ಟಿ ಗ್ರಾಮದಲ್ಲಿ…

9 hours ago

ಪ.ಬಂಗಾಳ | ವಿಟೋ ಅಧಿಕಾರ ಬಳಸಿ ಮಂತ್ರಿಮಂಡಳ ವಿಸರ್ಜಿಸಿದ ರಾಜ್ಯಪಾಲ ; ದೀದಿಗೆ ಹಿನ್ನೆಡೆ

ಕೋಲ್ಕತ್ತಾ : ಪಶ್ಚಿಮ ಬಂಗಾಳ ವಿಧಾನ ಸಭಾ ಚುನಾವಣೆಯಲ್ಲಿ ತಮ್ಮ ಪಕ್ಷ ಬಹು ಮತ ಗಳಿಸದೇ ಸೋಲನ್ನು ಅನುಭವಿಸಿದರೂ ಮುಖ್ಯಮಂತ್ರಿ…

9 hours ago

ಹನೂರು | ಕಾಡು ಹಂದಿ ದಾಳಿ ; ರೈತನಿಗೆ ಗಂಭೀರ ಗಾಯ

ಹನೂರು : ತಾಲ್ಲೂಕಿನ ದಿನ್ನಳ್ಳಿ ರಸ್ತೆಯ ಸಮೀಪದ ಜಮೀನೊಂದರಲ್ಲಿ ಕಾಡು ಹಂದಿ ದಾಳಿ ನಡೆಸಿ ರೈತನಿಗೆ ಗಂಭೀರ ಗಾಯಗೊಳಿಸಿರುವ ಘಟನೆ…

9 hours ago

ಡಿಎಂಕೆ-ಎಐಎಡಿಎಂಕೆ ಮೈತ್ರಿ ವದಂತಿ ; ಸ್ಟಾಲಿನ್‌ ಹೇಳಿದ್ದೇನು?

ಚೆನ್ನೆ : ತಮಿಳುನಾಡಿನಲ್ಲಿ ಅತಂತ್ರ ಪರಿಸ್ಥಿತಿ ನಿರ್ಮಾಣವಾದ ಬೆನ್ನಲ್ಲೇ ಸರ್ಕಾರ ರಚನೆಯ ಕಸರತ್ತು ಜೋರಾಗಿದೆ. 108 ಸ್ಥಾನಗಳೊಂದಿಗೆ ಅತಿ ದೊಡ್ಡ…

9 hours ago

ಮೇಲು-ಕೀಳು ಕಳೆಯಲಿ ; ಸರ್ವರೂ ಒಂದೇ ಎಂಬ ಮನೋಭಾವ ಮೂಡಲಿ : ಮೋಹನ್‌ ಭಾಗವತ್‌

ಮೈಸೂರು : ಮೇಲು-ಕೀಳು ಎಂಬ ಮನೋಭಾವ ಕಳೆದು ಸರ್ವರೂ ಒಂದೇ ಎಂಬ ಏಕ ಭಾವ ಭಾರತೀಯರಲ್ಲಿ ಮೂಡಬೇಕು ಎಂದು ರಾಷ್ಟ್ರೀಯ…

10 hours ago

ಬೆಂಗಳೂರು ಕೈತಪ್ಪಿದ ಐಪಿಎಲ್‌ ಫೈನಲ್‌ ಪಂದ್ಯ : ಕೆಎಸ್‌ಸಿಎ ಹೇಳಿದ್ದೇನು?

ಬೆಂಗಳೂರು : ಇಂಡಿಯನ್‌ ಪ್ರೀಮಿಯರ್‌ ಲೀಗ್‌(ಐಪಿಎಲ್) 2026ರ ಫೈನಲ್ ಪಂದ್ಯವನ್ನು ಬೆಂಗಳೂರಿನಿಂದ ಅಧಿಕೃತವಾಗಿ ಸ್ಥಳಾಂತರಿಸಿದ ಕುರಿತು ಕರ್ನಾಟಕ ರಾಜ್ಯ ಕ್ರಿಕೆಟ್…

10 hours ago