ಮೈಸೂರು: ಜಿಲ್ಲಾಧಿಕಾರಿಗಳ ಕಚೇರಿಯ ಆವರಣದಲ್ಲಿ ಇಂದು(ಜೂ.20) ನಡೆದ ತಾಲ್ಲೂಕು ಮಟ್ಟದ ಜನಸ್ಪಂದನ ಕಾರ್ಯಕ್ರಮಕ್ಕೆ ಜನರಿಂದ ಉತ್ತಮ ಸ್ಪಂದನೆ ದೊರೆತಿದ್ದು, 108 ಅರ್ಜಿಗಳನ್ನು ಜಿಲ್ಲಾಧಿಕಾರಿ ಡಾ ಕೆ.ವಿ.ರಾಜೇಂದ್ರ ಖುದ್ದು ಸ್ವೀಕರಿಸಿ, ಒಂದು ವಾರದ ಒಳಗೆ ಸಮಸ್ಯೆಗಳ ಪರಿಹಾರಕ್ಕೆ ಅಗತ್ಯ ಕ್ರಮವಹಿಸಬೇಕು ಸಂಬಂಧ ಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದರು.
ನಂತರ ಸಾರ್ವಜನಿಕರಿಂದ ಸ್ವೀಕರಿಸಲಾಗಿದ್ದ ಕುಂದು-ಕೊರತೆಗಳ ಅರ್ಜಿಯನ್ನು ಪರಿಶೀಲಿಸಿ ಮಾತನಾಡಿದ ಜಿಲ್ಲಾಧಿಕಾರಿ, ಕೆಲವು ಸ್ಮಶಾನಗಳನ್ನು ಕೆರೆಗಳಾಗಿ ಮಾರ್ಪಾಡು ಮಾಡಲಾಗಿದ್ದು ಅಂತಹ ಸ್ಮಶಾಣಗಳಿಗೆ ಪರ್ಯಾಯ ಸ್ಥಳವನ್ನು ನಿಗದಿ ಮಾಡಿ ಕೆರೆಯನ್ನು ರಕ್ಷಿಸುವ ಕೆಲಸ ಆಗಬೇಕು. ಯಾವುದೇ ಸರ್ಕಾರಿ ಕಟ್ಟಡಗಳನ್ನು ಕೆಡವಲು ಮಾಡುವ ಮೊದಲು ಕಟ್ಟಡದ ಕುಂದು ಕೊರತೆಯನ್ನು ತಿಳಿಸಿ ತಾಂತ್ರಿಕ ಇಲಾಖೆಯಿಂದ ಅನುಮತಿಯನ್ನು ಪಡೆದು ನಂತರದಲ್ಲಿ ಕೆಡವಲು ಮುಂದಾಗಬೇಕು ಎಂದು ಸೂಚಿಸಿದರು.
ಧಾರಾಕಾರ ಮಳೆಯಿಂದ ಹಾನಿಯಾಗಿ ನಷ್ಟ ಅನುಭವಿಸಿದ್ದ ಸಾರ್ವಜನಿಕರಿಗೆ ಈಗಾಗಲೇ ಸಹಾಯಧನವನ್ನು ತಲುಪಿಸುವ ಕಾರ್ಯ ನಡೆಯುತ್ತಿದ್ದು, ಶೀಘ್ರದಲ್ಲಿಯೇ ಸಹಾಯಧನವನ್ನು ಅರ್ಹ ಸಾರ್ವಜನಿಕರಿಗೆ ತಲುಪಲಿದೆ ಎಂದು ಹೇಳಿದರು.
ತಿ. ನರಸೀಪುರ: ತಾಲೂಕಿನ ಬನ್ನೂರು ಹೋಬಳಿಯ ಬಸವನಹಳ್ಳಿ ಗ್ರಾಮದ ಸಮೀಪದ ಮುಖ್ಯರಸ್ತೆಯಲ್ಲಿ ದ್ವಿಚಕ್ರ ವಾಹನ ಚಿರತೆಗೆ ಡಿಕ್ಕಿ ಹೊಡೆದ ಪರಿಣಾಮ…
ಅಮರಾವತಿ: ಜಗತ್ ಪ್ರಸಿದ್ಧ ತಿರುಪತಿ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಹಾಗೂ ಕಳಪೆ ಗುಣಮಟ್ಟದ ಪದಾರ್ಥಗಳು ಪತ್ತೆಯಾಗಿದೆ ಎಂದು ತೆಲುಗು…
ಮುಂಬೈ: ಬಾಲಿವುಡ್ನ ಭಾಯಿಜಾನ್ ಸಲ್ಮಾನ್ ಖಾನ್ ಅವರ ತಂದೆಗೆ ಬುರ್ಖಾ ಧರಿಸಿದ್ದ ಮಹಿಳೆ ಹಾಗೂ ಇನ್ನೊರ್ವ ವ್ಯಕ್ತಿ ಜೀವ ಬೆದರಿಕೆ…
ಬೆಂಗಳೂರು: ಗುತ್ತಿಗೆದಾರರೊಬ್ಬರಿಗೆ ಜಾತಿನಿಂದನೆ ಹಾಗೂ ಪ್ರಾಣ ಬೆದರಿಕೆ ಹಾಕಿದ ಪ್ರಕರಣದಲ್ಲಿ ಬೆಂಗಳೂರಿನ ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನಗೆ…
ಮಂಡ್ಯ: ಜಿಲ್ಲೆಯಲ್ಲಿ ಡಿಸೆಂಬರ್ 20, 21, 22 ರಂದು ನಡೆಯಲಿರುವ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ…
ಮೈಸೂರು: ರಾಜ್ಯ ಸರ್ಕಾರದ ಮಹತ್ವಕಾಂಕ್ಷೆ ಯೋಜನೆಗಳಲ್ಲಿ ಒಂದಾದ ಶಕ್ತಿಯೋಜನೆ ಫಲಾನುಭವಿಗಳ ಅಭಿಪ್ರಾಯ ಸಂಗ್ರಹಿಸಲು ಗ್ಯಾರಂಟಿ ಅನುಷ್ಠಾನ ಸಮಿತಿ ಉಪಾಧ್ಯಕ್ಷೆಯಾದ ಡಾ…