ಮೈಸೂರು: ಜಿಲ್ಲಾಧಿಕಾರಿಗಳ ಕಚೇರಿಯ ಆವರಣದಲ್ಲಿ ಇಂದು(ಜೂ.20) ನಡೆದ ತಾಲ್ಲೂಕು ಮಟ್ಟದ ಜನಸ್ಪಂದನ ಕಾರ್ಯಕ್ರಮಕ್ಕೆ ಜನರಿಂದ ಉತ್ತಮ ಸ್ಪಂದನೆ ದೊರೆತಿದ್ದು, 108 ಅರ್ಜಿಗಳನ್ನು ಜಿಲ್ಲಾಧಿಕಾರಿ ಡಾ ಕೆ.ವಿ.ರಾಜೇಂದ್ರ ಖುದ್ದು ಸ್ವೀಕರಿಸಿ, ಒಂದು ವಾರದ ಒಳಗೆ ಸಮಸ್ಯೆಗಳ ಪರಿಹಾರಕ್ಕೆ ಅಗತ್ಯ ಕ್ರಮವಹಿಸಬೇಕು ಸಂಬಂಧ ಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದರು.
ನಂತರ ಸಾರ್ವಜನಿಕರಿಂದ ಸ್ವೀಕರಿಸಲಾಗಿದ್ದ ಕುಂದು-ಕೊರತೆಗಳ ಅರ್ಜಿಯನ್ನು ಪರಿಶೀಲಿಸಿ ಮಾತನಾಡಿದ ಜಿಲ್ಲಾಧಿಕಾರಿ, ಕೆಲವು ಸ್ಮಶಾನಗಳನ್ನು ಕೆರೆಗಳಾಗಿ ಮಾರ್ಪಾಡು ಮಾಡಲಾಗಿದ್ದು ಅಂತಹ ಸ್ಮಶಾಣಗಳಿಗೆ ಪರ್ಯಾಯ ಸ್ಥಳವನ್ನು ನಿಗದಿ ಮಾಡಿ ಕೆರೆಯನ್ನು ರಕ್ಷಿಸುವ ಕೆಲಸ ಆಗಬೇಕು. ಯಾವುದೇ ಸರ್ಕಾರಿ ಕಟ್ಟಡಗಳನ್ನು ಕೆಡವಲು ಮಾಡುವ ಮೊದಲು ಕಟ್ಟಡದ ಕುಂದು ಕೊರತೆಯನ್ನು ತಿಳಿಸಿ ತಾಂತ್ರಿಕ ಇಲಾಖೆಯಿಂದ ಅನುಮತಿಯನ್ನು ಪಡೆದು ನಂತರದಲ್ಲಿ ಕೆಡವಲು ಮುಂದಾಗಬೇಕು ಎಂದು ಸೂಚಿಸಿದರು.
ಧಾರಾಕಾರ ಮಳೆಯಿಂದ ಹಾನಿಯಾಗಿ ನಷ್ಟ ಅನುಭವಿಸಿದ್ದ ಸಾರ್ವಜನಿಕರಿಗೆ ಈಗಾಗಲೇ ಸಹಾಯಧನವನ್ನು ತಲುಪಿಸುವ ಕಾರ್ಯ ನಡೆಯುತ್ತಿದ್ದು, ಶೀಘ್ರದಲ್ಲಿಯೇ ಸಹಾಯಧನವನ್ನು ಅರ್ಹ ಸಾರ್ವಜನಿಕರಿಗೆ ತಲುಪಲಿದೆ ಎಂದು ಹೇಳಿದರು.
5,54,32,314 ಎನ್ಯುಮರೇಷನ್ ಫಾರಂ ಹಂಚಿಕೆ ; ಶೇ.100 ರಷ್ಟು ಡಿಜಿಟಲೀಕರಣ ಬೆಂಗಳೂರು: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್)…
ಮೈಸೂರು : ದಸರಾ ಮಹೋತ್ಸವದ ಹಿನ್ನೆಲೆಯಲ್ಲಿ ನಗರದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗಾಗಿ ಸರ್ಕಾರ 6 ಕೋಟಿ ರೂ. ಬಿಡುಗಡೆ ಮಾಡಿದ್ದು,…
ತಾರಾಪಿತ್ (ಪಶ್ಚಿಮ ಬಂಗಾಳ) : ಬೆಂಕಿ ಅವಘಡದಲ್ಲಿ ಕನಿಷ್ಠ ಏಳು ಜನರು ಸಾವನ್ನಪ್ಪಿದ್ದು, ಹಲವರು ಗಂಭೀರ ಗಾಯಗೊಂಡಿರುವ ಘಟನೆ ಪಶ್ಚಿಮ…
ಯಳಂದೂರು : ಚಿರತೆ ದಾಳಿಗೆ ಕರು ಮೃತಪಟ್ಟಿರುವ ಘಟನೆ ತಾಲ್ಲೂಕಿನ ಯರಗಂಬಳ್ಳಿ ಗ್ರಾಮದಲ್ಲಿ ನಡೆದಿದೆ. ಯರಗಂಬಳ್ಳಿ ಗ್ರಾಮದ ಶೋಭಾ ಕೋಂ…
ಹೊಸದಿಲ್ಲಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವ ಸಂಬಂಧದ ವಿವಾದ ಮತ್ತೆ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಕಾವೇರಿ ನೀರು ನಿರ್ವಹಣಾ…
ಬೆಂಗಳೂರು : ನಗರದ ಖಾಸಗಿ ಶಾಲೆಯೊಂದರ ಇಬ್ಬರು ಶಿಕ್ಷಕರಿಗೆ ಹೆಚ್1ಎನ್1 (H1N1) ದೃಢಪಟ್ಟಿದ್ದು ಆತಂಕ ಮೂಡಿಸಿದೆ. ಸದ್ಯಕ್ಕೆ ಹೈಸ್ಕೂಲ್ ಮಾತ್ರ…