ಮೈಸೂರು: ಜಿಲ್ಲಾಧಿಕಾರಿಗಳ ಕಚೇರಿಯ ಆವರಣದಲ್ಲಿ ಇಂದು(ಜೂ.20) ನಡೆದ ತಾಲ್ಲೂಕು ಮಟ್ಟದ ಜನಸ್ಪಂದನ ಕಾರ್ಯಕ್ರಮಕ್ಕೆ ಜನರಿಂದ ಉತ್ತಮ ಸ್ಪಂದನೆ ದೊರೆತಿದ್ದು, 108 ಅರ್ಜಿಗಳನ್ನು ಜಿಲ್ಲಾಧಿಕಾರಿ ಡಾ ಕೆ.ವಿ.ರಾಜೇಂದ್ರ ಖುದ್ದು ಸ್ವೀಕರಿಸಿ, ಒಂದು ವಾರದ ಒಳಗೆ ಸಮಸ್ಯೆಗಳ ಪರಿಹಾರಕ್ಕೆ ಅಗತ್ಯ ಕ್ರಮವಹಿಸಬೇಕು ಸಂಬಂಧ ಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದರು.
ನಂತರ ಸಾರ್ವಜನಿಕರಿಂದ ಸ್ವೀಕರಿಸಲಾಗಿದ್ದ ಕುಂದು-ಕೊರತೆಗಳ ಅರ್ಜಿಯನ್ನು ಪರಿಶೀಲಿಸಿ ಮಾತನಾಡಿದ ಜಿಲ್ಲಾಧಿಕಾರಿ, ಕೆಲವು ಸ್ಮಶಾನಗಳನ್ನು ಕೆರೆಗಳಾಗಿ ಮಾರ್ಪಾಡು ಮಾಡಲಾಗಿದ್ದು ಅಂತಹ ಸ್ಮಶಾಣಗಳಿಗೆ ಪರ್ಯಾಯ ಸ್ಥಳವನ್ನು ನಿಗದಿ ಮಾಡಿ ಕೆರೆಯನ್ನು ರಕ್ಷಿಸುವ ಕೆಲಸ ಆಗಬೇಕು. ಯಾವುದೇ ಸರ್ಕಾರಿ ಕಟ್ಟಡಗಳನ್ನು ಕೆಡವಲು ಮಾಡುವ ಮೊದಲು ಕಟ್ಟಡದ ಕುಂದು ಕೊರತೆಯನ್ನು ತಿಳಿಸಿ ತಾಂತ್ರಿಕ ಇಲಾಖೆಯಿಂದ ಅನುಮತಿಯನ್ನು ಪಡೆದು ನಂತರದಲ್ಲಿ ಕೆಡವಲು ಮುಂದಾಗಬೇಕು ಎಂದು ಸೂಚಿಸಿದರು.
ಧಾರಾಕಾರ ಮಳೆಯಿಂದ ಹಾನಿಯಾಗಿ ನಷ್ಟ ಅನುಭವಿಸಿದ್ದ ಸಾರ್ವಜನಿಕರಿಗೆ ಈಗಾಗಲೇ ಸಹಾಯಧನವನ್ನು ತಲುಪಿಸುವ ಕಾರ್ಯ ನಡೆಯುತ್ತಿದ್ದು, ಶೀಘ್ರದಲ್ಲಿಯೇ ಸಹಾಯಧನವನ್ನು ಅರ್ಹ ಸಾರ್ವಜನಿಕರಿಗೆ ತಲುಪಲಿದೆ ಎಂದು ಹೇಳಿದರು.
7.3 ಕೋಟಿ ರೂ. ವೆಚ್ಚದಲ್ಲಿ ತೂಗು ಸೇತುವೆ ನಿರ್ಮಾಣ ಶೀಘ್ರ :ಈಶ್ವರ ಖಂಡ್ರೆ ದುಬಾರೆ : ವನ್ಯಜೀವಿಗಳ ಸಂಖ್ಯೆ ದಿನದಿಂದ…
ಮೈಸೂರು : ರಾಜ್ಯದಲ್ಲಿ ಒಳಮೀಸಲಾತಿ ಜಾರಿಗೊಳಿಸುವಲ್ಲಿ ಕಾಂಗ್ರೆಸ್ ಸಫಲವಾಗಿದ್ದು, ಇದು ಸರ್ಕಾರದ ಐತಿಹಾಸಿಕ ತೀರ್ಮಾನವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಪಾದಿಸಿದರು.…
ಮೈಸೂರು : ಮೈಸೂರಿನ ಸಿದ್ದಿಕಿ ನಗರ, ಮಣಿಪಾಲ್ ಆಸ್ಪತ್ರೆ ವೃತ್ತದ ಬಳಿ ರಾ.ಹೆ.275ರಲ್ಲಿ ಉದ್ದೇಶಿತ ಮೇಲ್ಸೇತುವೆ ಸ್ಥಳಕ್ಕೆ ಅರಣ್ಯ, ಜೀವಿಶಾಸ್ತ್ರ…
ಗೋಣಿಕೊಪ್ಪ : ಇಲ್ಲಿಗೆ ಸಮೀಪದ ಬಿ.ಶೆಟ್ಟಿಗೇರಿಯಲ್ಲಿ ಇಂದು(ಮೇ.6) ಬೆಳಿಗ್ಗೆ ಹುಲಿ ದಾಳಿಗೆ ಹಸು ಬಲಿಯಾಗಿರುವ ಘಟನೆ ನಡೆದಿದೆ. ಬಿ.ಶೆಟ್ಟಿಗೇರಿ ಗ್ರಾಮದ…
ಚೆನ್ನೈ : ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದ ನಟ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂʼಗೆ (ಟಿವಿಕೆ)…
ಚೆನ್ನೈ : ತಮಿಳುನಾಡಿನಲ್ಲಿ ನೂತನ ಸರ್ಕಾರ ರಚನೆಗೆ ಸಿದ್ಧತೆ ಭರದಿಂದ ಸಾಗಿದೆ. ತಮಿಳುನಾಡು ವಿಧಾನಸಭೆ ಚುನಾವಣೆಯಲ್ಲಿ ಗೆದ್ದು ಬೀಗಿರುವ ನಟ…