ಮೈಸೂರು: ಜಿಲ್ಲಾಧಿಕಾರಿಗಳ ಕಚೇರಿಯ ಆವರಣದಲ್ಲಿ ಇಂದು(ಜೂ.20) ನಡೆದ ತಾಲ್ಲೂಕು ಮಟ್ಟದ ಜನಸ್ಪಂದನ ಕಾರ್ಯಕ್ರಮಕ್ಕೆ ಜನರಿಂದ ಉತ್ತಮ ಸ್ಪಂದನೆ ದೊರೆತಿದ್ದು, 108 ಅರ್ಜಿಗಳನ್ನು ಜಿಲ್ಲಾಧಿಕಾರಿ ಡಾ ಕೆ.ವಿ.ರಾಜೇಂದ್ರ ಖುದ್ದು ಸ್ವೀಕರಿಸಿ, ಒಂದು ವಾರದ ಒಳಗೆ ಸಮಸ್ಯೆಗಳ ಪರಿಹಾರಕ್ಕೆ ಅಗತ್ಯ ಕ್ರಮವಹಿಸಬೇಕು ಸಂಬಂಧ ಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದರು.
ನಂತರ ಸಾರ್ವಜನಿಕರಿಂದ ಸ್ವೀಕರಿಸಲಾಗಿದ್ದ ಕುಂದು-ಕೊರತೆಗಳ ಅರ್ಜಿಯನ್ನು ಪರಿಶೀಲಿಸಿ ಮಾತನಾಡಿದ ಜಿಲ್ಲಾಧಿಕಾರಿ, ಕೆಲವು ಸ್ಮಶಾನಗಳನ್ನು ಕೆರೆಗಳಾಗಿ ಮಾರ್ಪಾಡು ಮಾಡಲಾಗಿದ್ದು ಅಂತಹ ಸ್ಮಶಾಣಗಳಿಗೆ ಪರ್ಯಾಯ ಸ್ಥಳವನ್ನು ನಿಗದಿ ಮಾಡಿ ಕೆರೆಯನ್ನು ರಕ್ಷಿಸುವ ಕೆಲಸ ಆಗಬೇಕು. ಯಾವುದೇ ಸರ್ಕಾರಿ ಕಟ್ಟಡಗಳನ್ನು ಕೆಡವಲು ಮಾಡುವ ಮೊದಲು ಕಟ್ಟಡದ ಕುಂದು ಕೊರತೆಯನ್ನು ತಿಳಿಸಿ ತಾಂತ್ರಿಕ ಇಲಾಖೆಯಿಂದ ಅನುಮತಿಯನ್ನು ಪಡೆದು ನಂತರದಲ್ಲಿ ಕೆಡವಲು ಮುಂದಾಗಬೇಕು ಎಂದು ಸೂಚಿಸಿದರು.
ಧಾರಾಕಾರ ಮಳೆಯಿಂದ ಹಾನಿಯಾಗಿ ನಷ್ಟ ಅನುಭವಿಸಿದ್ದ ಸಾರ್ವಜನಿಕರಿಗೆ ಈಗಾಗಲೇ ಸಹಾಯಧನವನ್ನು ತಲುಪಿಸುವ ಕಾರ್ಯ ನಡೆಯುತ್ತಿದ್ದು, ಶೀಘ್ರದಲ್ಲಿಯೇ ಸಹಾಯಧನವನ್ನು ಅರ್ಹ ಸಾರ್ವಜನಿಕರಿಗೆ ತಲುಪಲಿದೆ ಎಂದು ಹೇಳಿದರು.
ಚಾಮರಾಜನಗರ: ನಗರದ ಜಿಲ್ಲಾ ಪ್ರಧಾನ ಮತ್ತು ಸೆಷನ್ಸ್ ನ್ಯಾಯಾಲಯಕ್ಕೆ ಹುಸಿ ಬಾಂಬ್ ಬೆದರಿಕೆಯ ಇ-ಮೇಲ್ ಸಂದೇಶ ಬಂದ ಹಿನ್ನೆಲೆಯಲ್ಲಿ ಪೊಲೀಸರು,…
ಚಾಮರಾಜನಗರ: ಬಿಆರ್ಟಿ ಹುಲಿ ಸಂರಕ್ಷಿತ ಪ್ರದೇಶದ ಪುಣಜನೂರು ವನ್ಯಜೀವಿ ವಲಯ ವ್ಯಾಪ್ತಿಯ ಕಾರೆಪಾಳ್ಯ ಗಸ್ತಿನ ಸಮೀಪ ಅರಣ್ಯ ಪ್ರದೇಶದಿಂದ ಸುಮಾರು…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ದೊಡ್ಡಾಲತ್ತೂರು ಗ್ರಾಮದ ಶ್ರೀ ಮಕ್ಕಳೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಹಮ್ಮಿಕೊಂಡಿದ್ದ…
ಕೆ.ಆರ್.ನಗರ: ತಂಬಾಕು ಬೆಳೆಗೆ ಸರಿಯಾಗಿ ಬೆಲೆ ಸಿಗದೇ ನಷ್ಟವಾದ ಹಿನ್ನೆಲೆಯಲ್ಲಿ ಮಾಡಿದ್ದ ಸಾಲ ತೀರಿಸಲಾಗದೆ ಮನನೊಂದು ರೈತರೊಬ್ಬರು ತಮ್ಮ ಜಮೀನಿನಲ್ಲಿ…
ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಗಾಳಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಚಿಕ್ಕಮಗಳೂರು, ಹಾಸನ, ಶಿವಮೊಗ್ಗ,…
ರಾವಂದೂರು: ರೈತರೊಬ್ಬರು ತಾವು ಬೆಳೆದ ತಂಬಾಕಿಗೆ ಸೂಕ್ತ ಬೆಲೆ ಸಿಗದೆ ಮನನೊಂದು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.…