ಮೈಸೂರು ; ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅಭಿನಯದ ಕಟ್ಟ ಕಡೆಯ ಸಿನಿಮಾ ಗಂಧದಗುಡಿಗೆ ಕೋಟೆನಾಡಿನಲ್ಲಿ ಅದ್ದೂರಿ ವೆಲ್ಕಮ್ ಸಿಕ್ಕಿದೆ. ಮೈಸೂರಿನ ಪದ್ಮ ಚಿತ್ರಮಂದಿರದಲ್ಲಿ ತೆರೆಕಂಡ ಸಿನಿಮಾದ ಮೊದಲ ಪ್ರದರ್ಶನ ಬೆಳಗ್ಗೆ 7ಗಂಟೆಗೆ ಶುರುವಾಗಿದ್ದು ಅಪ್ಪು ಫ್ಯಾನ್ಸ್ ಸಾಗರೋಪಾದಿಯಲ್ಲಿ ಆಗಮಿಸಿ ಅಪ್ಪುವಿನ ಸುಂದರ ಕ್ಷಣಗಳನ್ನು ಕಣ್ತುಂಬಿಕೊಂಡರು.
ಸಿನಿಮಾ ರಿಲೀಸ್ ಮುನ್ನವೇ ಪುನೀತ್ ಕಟೌಟ್ಗಳು ಎಲ್ಲರ ಗಮನ ಸೆಳೆದವು. ಥಿಯೇಟರ್ ಬಳಿ ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುತ್ತಿದ್ದಂತೆ ತಮಟೆ, ಡೊಳ್ಳು ಬಾರಿಸುವ ಮೂಲಕ ನೆರೆದಿದ್ದ ಪ್ರೇಕ್ಷಕರಿಗೆ ರಂಜಿಸಿದರು.
ಪುನೀತ್ ರಾಜ್ಕುಮಾರ್ ಪತ್ನಿ ಅಶ್ವಿನಿ, ಪುನೀತ್ ಕಿರಿಯ ಪುತ್ರಿ ವಂದಿತಾ, ಯುವರಾಜ್ಕುಮಾರ್, ರಮ್ಯಾ, ನೆನಪಿರಲಿ ಪ್ರೇಮ್, ದೇವರಾಜ್, ನಿಶ್ವಿಕಾ ನಾಯ್ಡು, ಸುಧಾ ಬೆಳವಾಡಿ, ಗುರುಕಿರಣ್, ಅಜಯ್ ರಾವ್, ವಿನಯ್ ರಾಜ್ಕುಮಾರ್, ಸುಧಾ ಮೂರ್ತಿ, ‘ಬಹದ್ದೂರ್’ ಚೇತನ್, ಅಭಿಷೇಕ್ ಅಂಬರೀಶ್, ಪ್ರಜ್ವಲ್ ದೇವರಾಜ್, ಸಂತೋಷ್ ಆನಂದ್ರಾಮ್, ವಿಜಯ್ ರಾಘವೇಂದ್ರ, ರಿಷಬ್ ಶೆಟ್ಟಿ, ಪ್ರಗತಿ ಶೆಟ್ಟಿ, ರಕ್ಷಿತ್ ಶೆಟ್ಟಿ ಮುಂತಾದವರು ಪ್ರೀಮಿಯರ್ ಶೋನಲ್ಲಿ ‘ಗಂಧದ ಗುಡಿ’ ಸಾಕ್ಷ್ಯಚಿತ್ರವನ್ನು ಕಣ್ತುಂಬಿಕೊಂಡಿದ್ದಾರೆ.
ಕೋಲ್ಕತ್ತ : ಟಿ-20 ವಿಶ್ವಕಪ್ನ ಲೀಗ್ ಹಂತದ ಸಿ ಗುಂಪಿನ ಪಂದ್ಯದಲ್ಲಿ ಸ್ಕಾಟ್ಲೆಂಡ್ ವಿರುದ್ಧ ಇಂಗ್ಲೆಂಡ್ ತಂಡವು 5 ವಿಕೆಟ್ಗಳ…
ಮಂಡ್ಯ: ಡಿ.ಕೆ. ಶಿವಕುಮಾರ್ ಅವರು ಅತಿ ಶೀಘ್ರದಲ್ಲೇ ಮುಖ್ಯಮಂತ್ರಿ ಆಗೇ ಆಗುತ್ತಾರೆ. ಇದನ್ನು ತಪ್ಪಿಸಲು ಯಾರಿಂದಲೂ ಸಾಧ್ಯವಿಲ್ಲ ಎಂದು ಪಿ.ರವಿಕುಮಾರ್…
ಮೈಸೂರು : ಹಿಂದೂಗಳ ಪವಿತ್ರ ಹಬ್ಬಗಳಲ್ಲಿ ಒಂದಾದ ಮಹಾ ಶಿವರಾತ್ರಿ ಆಚರಣೆಗೆ ಶಿವ ದೇವಾಲಯಗಳು ಸಂಪೂರ್ಣ ಸಜ್ಜಾಗಿವೆ. ನಗರದ ಪ್ರಮುಖ…
ಮೈಸೂರು : ನಗರದಲ್ಲಿ ಅಕ್ರಮ ಮಾದಕ ವಸ್ತುಗಳ ಮಾರಾಟ ಮತ್ತು ಸಾಗಾಟದ ವಿರುದ್ಧ ಮಂಡಿ ಪೊಲೀಸ್ ಠಾಣಾ ಅಧಿಕಾರಿಗಳು ನಡೆಸಿದ…
ಹಾವೇರಿ : ಕಂದಾಯ ಇಲಾಖೆಯಿಂದ ಎರಡನೇ ಬಾರಿ ಲಕ್ಷ ಫಲಾನುಭವಿಗಳಿಗೆ ಹಕ್ಕು ಪತ್ರ ವಿತರಣೆ ಮಾಡುತ್ತಿದ್ದೇವೆ. ಇಲ್ಲಿಯವರೆಗೆ 2.20 ಲಕ್ಷ…
ಬೆಂಗಳೂರು : ಕರ್ನಾಟಕದ ಸಾವಿರಾರು ರೈತರಿಗೆ ಪಿಎಂ-ಕಿಸಾನ್ ಯೋಜನೆಯಡಿ ಬಾಕಿ ಉಳಿದಿದ್ದ ಹಣವನ್ನು ಬಿಡುಗಡೆ ಮಾಡುವಂತೆ ಕೃಷಿ ಸಚಿವ ಚಲುವರಾಯಸ್ವಾಮಿ…