Mysore
24
clear sky

Social Media

ಮಂಗಳವಾರ, 21 ಏಪ್ರಿಲ 2026
Light
Dark

ತಪ್ಪು ಮಾಡಿದ್ದರೆ ದರ್ಶನ್‌ಗೆ ತಕ್ಕ ಶಿಕ್ಷೆಯಾಗಲಿ; ಜಿ.ಟಿ.ದೇವೇಗೌಡ ಆಗ್ರಹ

ಮೈಸೂರು: ನಟ ದರ್ಶನ್ ಅಂಡ್ ಗ್ಯಾಂಗ್‌ನಿಂದ ನಡೆದಿದೆ ಎನ್ನಲಾಗುತ್ತಿರುವ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಉತ್ತಮ ರೀತಿಯಲ್ಲಿ ಕೆಲಸ ಮಾಡುತ್ತಿದ್ದಾರೆ ಎಂದು ಜೆಡಿಎಸ್ ಕೋರ್ ಕಮಿಟಿ ಅಧ್ಯಕ್ಷ ಹಾಗೂ ಚಾಮುಂಡೇಶ್ವರಿ ಕ್ಷೇತ್ರದ ಶಾಸಕ ಜಿ.ಟಿ.ದೇವೇಗೌಡ ಹೇಳಿದ್ದಾರೆ.

ನಟ ದರ್ಶನ್ ಅಂಡ್ ಗ್ಯಾಂಗ್‌ನಿಂದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಸೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು ಪ್ರಕರಣ ಸಂಬಂಧ ಪೊಲೀಸರು ಉತ್ತಮ ರೀತಿಯಲ್ಲಿ ಕೆಲಸ ಮಾಡುತ್ತಿದ್ದು, ಅವರ ಮೇಲೆ ನಂಬಿಕೆ ಹೆಚ್ಚಾಗಿದೆ.

ಯಾರೇ ತಪ್ಪು ಮಾಡಿದ್ರೂ ಅದು ತಪ್ಪೇ. ನಟ ದರ್ಶನ್ ತಪ್ಪು ಮಾಡಿದ್ರೆ ಅವರಿಗೆ ತಕ್ಕ ಶಿಕ್ಷೆಯಾಗುತ್ತೆ. ಚಿತ್ರರಂಗದ ನಾಯಕ ನಟ ಈ ರೀತಿ ಅಮಾನವೀಯ ಕೃತ್ಯಕ್ಕೆ ಇಳಿದಿರುವುದು ಭಾರೀ ಬೇಸರದ ಸಂಗತಿ ಎಂದರು.

ಇನ್ನೂ ಮುಂದುವರಿದು ಮಾತನಾಡಿದ ಶಾಸಕರು, ನಿನ್ನೆ ನಡೆದ ಸಚಿವ ಸಂಪುಟ ಸಭೆಯಲ್ಲಿ ಸ್ವತಃ ಸಿಎಂ ಸಿದ್ದರಾಮಯ್ಯ ಅವರೇ ಈ ಕೃತ್ಯದ ಬಗ್ಗೆ ಚರ್ಚೆ ನಡೆಸಿದ್ದಾರೆ. ನಾನೇ ವಿಡಿಯೋ ನೋಡಿದ್ದೇನೆ ಎಂದಿದ್ದು, ದರ್ಶನ್ ಪರ ಯಾರೂ ಕೂಡ ಮಾತನಾಡಬಾರದು ಅಂತಾ ಸೂಚನೆ ನೀಡಿದ್ದಾರೆ ಎಂದರು.

Tags:
error: Content is protected !!